ಕೊಳಚೆ ನೀರಿನಲ್ಲಿ ಕೊಚ್ಚಿ ಹೋಯ್ತು 33 ಕೋಟಿ ಅನುದಾನ: ಹು-ಧಾ ಮಹಾನಗರ ಪಾಲಿಕೆಯಲ್ಲಿ ನೀರಿನ ಮಹಾ ಹಗರಣ..?

ಕೊಳಚೆ ನೀರಿನಲ್ಲಿ ಕೊಚ್ಚಿ ಹೋಯ್ತು 33 ಕೋಟಿ ಅನುದಾನ: ಹು-ಧಾ ಮಹಾನಗರ ಪಾಲಿಕೆಯಲ್ಲಿ ನೀರಿನ ಮಹಾ ಹಗರಣ..?

Published : Oct 20, 2023, 10:25 AM IST

ಹುಬ್ಬಳ್ಳಿ-ಧಾರವಾಡ ಅವಳಿ ನಗರ ರಾಜ್ಯದ ಎರಡನೇ ಅತೀ ದೊಡ್ಡ ಮಹಾನಗರ ಪಾಲಿಕೆ.. ಜೊತೆಗೆ ದೇಶದ ಸ್ಮಾರ್ಟ್ ಸಿಟಿಗಳ ಪೈಕಿ ಹುಬ್ಬಳ್ಳಿ ಸಹ ಒಂದು. ಹೀಗಾಗಿ ಆಧುನಿಕತೆಗೆ ತಕ್ಕಂತೆ ಕೋಟ್ಯಂತರ ರೂಪಾಯಿ ಅನುದಾನ ನಗರದ ಅಭಿವೃದ್ಧಿಗೆ ಹರಿದು ಬರುತ್ತಿದೆ. ಆದರೆ ಹರಿದು ಬಂದ ಅನುದಾನ ಎಷ್ಟರಮಟ್ಟಿಗೆ ಸದ್ಬಳಕೆಯಾಗುತ್ತಿದೆ ಅಂತ ನೋಡೋಲು ಹೋದಾಗ ಸಿಕ್ಇದ್ದು ಬೆಚ್ಚಿ ಬೀಳಿಸುವ ಮಾಹಿತಿ. 

ಇದು  ಬಹುಕೋಟಿ ವೆಚ್ಚದ ಕೊಳಚೆ ನೀರು ಶುದ್ದೀಕರಣ ಘಟಕ. ಹುಬ್ಬಳ್ಳಿ(Hubbali) ನಗರದಲ್ಲಿ ಹರಿದು ಬರುವ ಕೊಳಚೆ ನೀರನ್ನು ಶುದ್ಧೀಕರಿಸಿ ನಿಸರ್ಗಕ್ಕೆ ಮರಳಿ ಬಿಡುವುದು. ಇದೇ ನೀರನ್ನು ಬಳಸಿ ರೈತರು(Farmer) ಕೃಷಿ ಮಾಡುವುದು ಇದರ ಉದ್ದೇಶ. ನಗರದ ಹೊರ ವಲಯದ ಹಳೆ ಗಬ್ಬೂರು ಸಮೀಪದಲ್ಲಿ ಮಹಾನಗರ ಪಾಲಿಕೆ 33 ಕೋಟಿ ವೆಚ್ಚ ಮಾಡಿ  ಎಸ್ ಟಿಪಿ ಪ್ಲಾಂಟ್ ಆರಂಭಿಸಿದೆ. ಆದ್ರೆ ನೀರು ಶುದ್ದೀಕರಿಸುವ ಕೆಲಸ ಮಾತ್ರ ಆಗ್ತಿಲ್ಲ. ಕಳೆದ ಏಳು ವರ್ಷದಿಂದ ಕಾಟಾಚಾರಕ್ಕೆ ಪ್ಲಾಂಟ್ ರನ್ ಮಾಡಲಾಗುತ್ತಿದೆ. ನೆಪ ಮಾತ್ರಕ್ಕೆ ಪ್ಲಾಂಟ್ ನಲ್ಲಿ ಕೊಳಚೆ ನೀರು ಸಂಗ್ರಹಿಸಿ, ಯಾರಾದರೂ ವೀಕ್ಷಣೆಗೆ ಹೋದಾಗ ನೀರು ಶುದ್ದೀಕರಿಸುವ ನಾಟಕ ಮಾಡ್ತಿದ್ದಾರೆ ಅನ್ನೋದು ಮಹಾನಗರ ಪಾಲಿಕೆ(Hubli-dharwad Municipal corporation) ವಿಪಕ್ಷ ನಾಯಕರ ಆರೋಪ. ಬೆಂಗಳೂರು ಮೂಲದ ಖಾಸಗಿ ಕಂಪನಿ ಇದರ ನಿರ್ವಹಣೆ ಗುತ್ತಿಗೆ ಪಡ್ಕೊಂಡಿದೆ. ಇಲ್ಲಿ ಶುದ್ದೀಕರಿಸಿದ ನೀರನ್ನು ಕುಡಿಯಲು ಹೊರೆತುಪಡಿಸಿ, ದಿನ ನಿತ್ಯದ ಬಳಕೆ, ಬೆಳೆಗಳಿಗೆ ನೀರುಣಿಸಲು ನೀಡಬೇಕೆಂಬ ಕರಾರು ಇದೆ. ಆದ್ರೆ‌ ಇಲ್ಲಿಯವರೆಗೆ ಹನಿ ನೀರು ಬಳಕೆಯಾಗಿಲ್ಲ. ಈ ಬಗ್ಗೆ ಸ್ವತಃ ಪಾಲಿಕೆ ಮೇಯರ್ಗೆ ಮಾಹಿತಿ ಇಲ್ಲ.. ಈಗ ನನ್ನ ಗಮನಕ್ಕೆ ಬರ್ತಾಯಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ತೀವಿ ಎನ್ನುತ್ತಿದ್ದಾರೆ ಮೇಯರ್(Mayor). ತ್ಯಾಜ್ಯ ನೀರನ್ನು ಸಂಸ್ಕರಿಸಿ ಅದರ ಸದ್ಬಳಕೆ ಮಾಡಿಕೊಳ್ಳುವ ಸದುದ್ದೇಶಕ್ಕೆ ಈ ಎಸ್.ಟಿಪಿ ಪ್ಲಾಂಟ್ ನಿರ್ಮಿಸಲಾಗಿದೆ. ಇದಕ್ಕಾಗಿ ಕೋಟಿ ಕೋಟಿ ಹಣ ಸುರಿಯಲಾಗಿದೆ. ಅದ್ರೆ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ, ಗುತ್ತಿಗೆದಾರ ಅಸಡ್ಡೆಯಿಂದ ಉದ್ದೇಶ ಈಡೆರುತ್ತಿಲ್ಲ. ಇನ್ನಾದ್ರೂ ಪಾಲಿಕೆ ಎಸ್.ಟಿಪಿ ಪ್ಲಾಂಟ್ ಸದ್ಬಳಕೆ ಮಾಡಿಕೊಳ್ಳಲು ಮುಂದಾಗಬೇಕಿದೆ.

ಇದನ್ನೂ ವೀಕ್ಷಿಸಿ:  ಸಿದ್ದರಾಮಯ್ಯ ಕನಸಿನ ಯೋಜನೆಯಲ್ಲೂ ಅಕ್ರಮ: ಗುತ್ತಿಗೆದಾರ,ಅಧಿಕಾರಿಗಳ ನಡುವೆ ಕಮಿಷನ್ ಫೈಟ್

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?