95 ವರ್ಷ ಹಳೆಯ ಶಾಲೆಯಲ್ಲೇ ಪಾಠ, ಪ್ರವಚನ: ಬಿರುಕು ಬಿಟ್ಟ ಸೂರು, ಕುಸಿಯುತ್ತಿರುವ ಗೋಡೆ..!

95 ವರ್ಷ ಹಳೆಯ ಶಾಲೆಯಲ್ಲೇ ಪಾಠ, ಪ್ರವಚನ: ಬಿರುಕು ಬಿಟ್ಟ ಸೂರು, ಕುಸಿಯುತ್ತಿರುವ ಗೋಡೆ..!

Published : Oct 03, 2023, 11:01 AM IST

ನೆಲಕ್ಕೆ‌ ಕುಸಿಯೋ ಭೀತಿಯಲ್ಲಿರುವ ಮೇಲ್ಛಾವಣೆ.. ಬಿರುಕು‌ ಶಾಲಾ ಕಟ್ಟಡ. ಈ ದೃಶ್ಯಗಳಿಗೆ‌ ಸಾಕ್ಷಿಯಾಗಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ‌ ತಾಲ್ಲೂಕಿನ ಗೋಪನಹಳ್ಳಿ ಗ್ರಾಮ. 1928 ಸ್ವಾತಂತ್ರ್ಯ ಪೂರ್ವದಲ್ಲೇ ನಿರ್ಮಾಣವಾಗಿರುವ ಈ ಸರ್ಕಾರಿ ಹಿರಿಯ ಪ್ರಾಥಾಮಿಕ ಪಾಠಶಾಲೆ ಯಲ್ಲಿ ಲಕ್ಷಾಂತರ ಜನ ವಿದ್ಯಾಭ್ಯಾಸ ಮಾಡಿ, ಉನ್ನತ ಸ್ಥಾನಗಳಲ್ಲಿದ್ದಾರೆ. ಆದ್ರೆ ಗಣ್ಯರ ಜ್ಞಾನಾರ್ಜನೆಗೆ ವೇದಿಕೆಯಾದ ಸರ್ಕಾರಿ ಶಾಲೆ ಈಗ ಶಿಥಿಲಾವಸ್ಥೆಗೆ ತಲುಪಿದೆ.
 

ಈ ಶಾಲೆ‌‌ಯ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿವೆ, ಇಡೀ ಶಾಲೆಯೇ(School) ನೆಲಕ್ಕೆ ಕುಸಿಯುವ ಹಂತದಲ್ಲಿದೆ. ಮೇಲ್ಛಾವಣೆಯ ಶೀಟುಗಳು ಒಡೆದು ಹೋಗಿದ್ದು, ಮಳೆಗಾಲದಲ್ಲಿ ನೀರು ಸೋರಿದ್ರೆ, ಬಿಸಿಲಿದ್ದಾಗ ನೆತ್ತಿ ಸುಡುತ್ತೆ. ಈ ಶಾಲೆ ವಿದ್ಯಾರ್ಥಿಗಳು(Students) ನೆಮ್ಮದಿಯಿಂದ ಪಾಠ ಕೇಳೋ ಬದಲು ನರಕಯಾತನೆ ಅನುಭವಿಸುವಂತಾಗಿದೆ. ಶಿಕ್ಷಕರು, ಗ್ರಾಮಸ್ಥರು ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೇ ಶಿಥಿಲ ಕಟ್ಟದಲ್ಲೇ ಪಾಠ ಕಲಿಯುತ್ತಿದ್ದಾರೆ. ದಿನನಿತ್ಯ ಪೋಷಕರು ಜೀವ ಭಯದಲ್ಲೇ ಮಕ್ಕಳನ್ನ ಶಾಲೆಗೆ ಕಳಿಸ್ತಿದ್ದಾರೆ. ಶಾಲೆ ಅವಸ್ಥೆಗೆ ಬೆದರಿ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದು, ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ದಾಖಲಾತಿ ಕುಸಿದಿದೆ. ಶಾಲಾ ಆವರಣ ಅಕ್ರಮ ಚಟವಟಿಕೆಗಳ ತಾಣವಾಗ್ತಿದೆ ಅನ್ನೋ ಆರೋಪವೂ ಇದೆ. ಸ್ವಾತಂತ್ರ್ಯಕ್ಕೂ ಮೊದಲೇ ನಿರ್ಮಾಣವಾದ ಈ ಶಾಲೆಗೆ ಈಗ 95 ವರ್ಷ ಪೂರ್ಣಗೊಂಡಿದೆ. ಶಾಲೆ ಕಟ್ಟಡದ (Building) ಆಯಸ್ಸು ಮುಗಿಯುತ್ತಾ ಬಂದಿದ್ದು, ಆದಷ್ಟು ಬೇಗ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ.. ಮುಂದಾಗುವ ಅನಾಹುತ ತಪ್ಪಿಸಬೇಕಿದೆ ಅನ್ನೋದು ಸ್ಥಳೀಯರ ಆಗ್ರಹವಾಗಿದೆ. 

ಇದನ್ನೂ ವೀಕ್ಷಿಸಿ:  ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more