ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

Published : Oct 10, 2023, 11:03 AM ISTUpdated : Oct 10, 2023, 11:13 AM IST

ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿವಾಣಕ್ಕೆ ಹೈಕೋರ್ಟ್ ಕೊಟ್ಟ ಸಲಹೆ ಬಗ್ಗೆ ಶಿಕ್ಷಣ ಇಲಾಖೆ ಸಭೆ ನಡೆಸಿದೆ. ಟ್ರಾಫಿಕ್ ಮೀಟಿಂಗ್‌ನಲ್ಲಿ ಏನೆಲ್ಲಾ ಚರ್ಚೆಯಾಯ್ತು? ಶಾಲಾ ಸಮಯ ಬದಲಾಗುತ್ತಾ ? 
 

ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ದೊಡ್ಡ ಕಂಟಕ. ಅದ್ರಲ್ಲೂ ಪೀಕ್ ಅವರ್ ಅಂದ್ರೆ, ಬೆಳಗ್ಗೆ ಮತ್ತು ಸಂಜೆ ರಸ್ತೆಗಳಲ್ಲಿ ವಾಹನ ಓಡಿಸೋದು ದೊಡ್ಡ ಸಾಹಸದ ಕೆಲಸ. ಇದೇ ಹೊತ್ತಲ್ಲಿ ಶಾಲಾ ವಾಹನಗಳ ಸಂಚಾರಿಸುತ್ತವೆ. ಹೀಗಾಗಿ ಟ್ರಾಫಿಕ್‌ಗೆ(Traffic) ಕೊಂಚ ಬ್ರೇಕ್ ಹಾಕೋದಕ್ಕೆ ಶಾಲೆಗಳ ಸಮಯ ಬದಲಾವಣೆ ಮಾಡಿದ್ರೆ ಸಾಧ್ಯವಾಗಬಹುದು ಎಂದು ಹೈಕೋರ್ಟ್ ಸಲಹೆ ನೀಡಿತ್ತು. ಕೋರ್ಟ್ ಸಲಹೆಯಂತೆ ಸಮಗ್ರ ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಾಲೆಗಳ ಒಕ್ಕೂಟದ ಜತೆ ಟ್ರಾಫಿಕ್ ಇಲಾಖೆ ಅಧಿಕಾರಿಗಳು(Traffic department officials) ಸಭೆ ನಡೆಸಿದ್ರು. ಸಮಗ್ರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳನ್ನ ಚರ್ಚಿಸಲಾಯ್ತು.. ಶಾಲಾ ಮಕ್ಕಳ ಸಂಚಾರಕ್ಕೆ ಬಿಎಂಟಿಸಿ ಬಳಕೆ ಮಾಡುವಂತೆ ಸಲಹೆಗಳು ಬಂದಿವೆಯಂತೆ. ಇದರ ಜೊತೆಗೆ ಶಾಲೆಗಳ ಬಳಿ ಸಿಬ್ಬಂದಿ ನೇಮಿಸಿ, ಅವರಿಗೆ ಟ್ರಾಫಿಕ್ ಕಂಟ್ರೋಲ್ ಬಗ್ಗೆ ತರಬೇತಿ ನಡೆಸುವಂತೆ ಚಿಂತನೆ ನಡೆದಿವೆಯಂತೆ..ಶಾಲಾ ಸಮಯ ಬದಲಾವಣೆಯಿಂದ ಟ್ರಾಫಿಕ್ ಕಂಟ್ರೋಲ್ ಸಲಹೆಗಳ ಬಗ್ಗೆ ಇಂದು ಕೋರ್ಟ್ ಮುಂದೆ ವರದಿ ಸಲ್ಲಿಸೋದಾಗಿ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ತಿಳಿಸಿದ್ರು. ಇನ್ನು, ಸಭೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗೆ ಹಲವು ಸಲಹೆಗಳು ಬಂದಿವೆ. ಇವೆಲ್ಲದರ ಮಧ್ಯೆ ಶಾಲಾ ಸಮಯ ಬದಲಾವಣೆ ಬೇಡ ಅನ್ನೋ ಅಭಿಪ್ರಾಯ ವ್ಯಕ್ತವಾಗಿದಿಯಂತೆ. ಹೀಗಾಗಿ ಶಾಲಾ ಸಮಯ ಬದಲಾಗೋದು ಬಹುತೇಕ ಡೌಟ್ ಆಗಿದೆ. 

ಇದನ್ನೂ ವೀಕ್ಷಿಸಿ:  ದಾವಣಗೆರೆ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್ ಫೈಟ್: ಶಾಸಕರು, ಸಚಿವರ ಮಧ್ಯೆ ಕಾವೇರಿದ ಟಾಕ್‌ವಾರ್

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more