ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

Published : Oct 10, 2023, 11:03 AM ISTUpdated : Oct 10, 2023, 11:13 AM IST

ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿವಾಣಕ್ಕೆ ಹೈಕೋರ್ಟ್ ಕೊಟ್ಟ ಸಲಹೆ ಬಗ್ಗೆ ಶಿಕ್ಷಣ ಇಲಾಖೆ ಸಭೆ ನಡೆಸಿದೆ. ಟ್ರಾಫಿಕ್ ಮೀಟಿಂಗ್‌ನಲ್ಲಿ ಏನೆಲ್ಲಾ ಚರ್ಚೆಯಾಯ್ತು? ಶಾಲಾ ಸಮಯ ಬದಲಾಗುತ್ತಾ ? 
 

ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ದೊಡ್ಡ ಕಂಟಕ. ಅದ್ರಲ್ಲೂ ಪೀಕ್ ಅವರ್ ಅಂದ್ರೆ, ಬೆಳಗ್ಗೆ ಮತ್ತು ಸಂಜೆ ರಸ್ತೆಗಳಲ್ಲಿ ವಾಹನ ಓಡಿಸೋದು ದೊಡ್ಡ ಸಾಹಸದ ಕೆಲಸ. ಇದೇ ಹೊತ್ತಲ್ಲಿ ಶಾಲಾ ವಾಹನಗಳ ಸಂಚಾರಿಸುತ್ತವೆ. ಹೀಗಾಗಿ ಟ್ರಾಫಿಕ್‌ಗೆ(Traffic) ಕೊಂಚ ಬ್ರೇಕ್ ಹಾಕೋದಕ್ಕೆ ಶಾಲೆಗಳ ಸಮಯ ಬದಲಾವಣೆ ಮಾಡಿದ್ರೆ ಸಾಧ್ಯವಾಗಬಹುದು ಎಂದು ಹೈಕೋರ್ಟ್ ಸಲಹೆ ನೀಡಿತ್ತು. ಕೋರ್ಟ್ ಸಲಹೆಯಂತೆ ಸಮಗ್ರ ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಾಲೆಗಳ ಒಕ್ಕೂಟದ ಜತೆ ಟ್ರಾಫಿಕ್ ಇಲಾಖೆ ಅಧಿಕಾರಿಗಳು(Traffic department officials) ಸಭೆ ನಡೆಸಿದ್ರು. ಸಮಗ್ರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳನ್ನ ಚರ್ಚಿಸಲಾಯ್ತು.. ಶಾಲಾ ಮಕ್ಕಳ ಸಂಚಾರಕ್ಕೆ ಬಿಎಂಟಿಸಿ ಬಳಕೆ ಮಾಡುವಂತೆ ಸಲಹೆಗಳು ಬಂದಿವೆಯಂತೆ. ಇದರ ಜೊತೆಗೆ ಶಾಲೆಗಳ ಬಳಿ ಸಿಬ್ಬಂದಿ ನೇಮಿಸಿ, ಅವರಿಗೆ ಟ್ರಾಫಿಕ್ ಕಂಟ್ರೋಲ್ ಬಗ್ಗೆ ತರಬೇತಿ ನಡೆಸುವಂತೆ ಚಿಂತನೆ ನಡೆದಿವೆಯಂತೆ..ಶಾಲಾ ಸಮಯ ಬದಲಾವಣೆಯಿಂದ ಟ್ರಾಫಿಕ್ ಕಂಟ್ರೋಲ್ ಸಲಹೆಗಳ ಬಗ್ಗೆ ಇಂದು ಕೋರ್ಟ್ ಮುಂದೆ ವರದಿ ಸಲ್ಲಿಸೋದಾಗಿ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ತಿಳಿಸಿದ್ರು. ಇನ್ನು, ಸಭೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗೆ ಹಲವು ಸಲಹೆಗಳು ಬಂದಿವೆ. ಇವೆಲ್ಲದರ ಮಧ್ಯೆ ಶಾಲಾ ಸಮಯ ಬದಲಾವಣೆ ಬೇಡ ಅನ್ನೋ ಅಭಿಪ್ರಾಯ ವ್ಯಕ್ತವಾಗಿದಿಯಂತೆ. ಹೀಗಾಗಿ ಶಾಲಾ ಸಮಯ ಬದಲಾಗೋದು ಬಹುತೇಕ ಡೌಟ್ ಆಗಿದೆ. 

ಇದನ್ನೂ ವೀಕ್ಷಿಸಿ:  ದಾವಣಗೆರೆ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್ ಫೈಟ್: ಶಾಸಕರು, ಸಚಿವರ ಮಧ್ಯೆ ಕಾವೇರಿದ ಟಾಕ್‌ವಾರ್

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more