ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

ಶಾಲಾ ಸಮಯ ಬದಲಾವಣೆ ಇಲ್ಲ : ಒಕ್ಕೂಟ ಸಭೆಯ ವರದಿ ಇಂದು ಕೋರ್ಟ್‌ಗೆ ಸಲ್ಲಿಕೆ

Published : Oct 10, 2023, 11:03 AM ISTUpdated : Oct 10, 2023, 11:13 AM IST

ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿವಾಣಕ್ಕೆ ಹೈಕೋರ್ಟ್ ಕೊಟ್ಟ ಸಲಹೆ ಬಗ್ಗೆ ಶಿಕ್ಷಣ ಇಲಾಖೆ ಸಭೆ ನಡೆಸಿದೆ. ಟ್ರಾಫಿಕ್ ಮೀಟಿಂಗ್‌ನಲ್ಲಿ ಏನೆಲ್ಲಾ ಚರ್ಚೆಯಾಯ್ತು? ಶಾಲಾ ಸಮಯ ಬದಲಾಗುತ್ತಾ ? 
 

ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ದೊಡ್ಡ ಕಂಟಕ. ಅದ್ರಲ್ಲೂ ಪೀಕ್ ಅವರ್ ಅಂದ್ರೆ, ಬೆಳಗ್ಗೆ ಮತ್ತು ಸಂಜೆ ರಸ್ತೆಗಳಲ್ಲಿ ವಾಹನ ಓಡಿಸೋದು ದೊಡ್ಡ ಸಾಹಸದ ಕೆಲಸ. ಇದೇ ಹೊತ್ತಲ್ಲಿ ಶಾಲಾ ವಾಹನಗಳ ಸಂಚಾರಿಸುತ್ತವೆ. ಹೀಗಾಗಿ ಟ್ರಾಫಿಕ್‌ಗೆ(Traffic) ಕೊಂಚ ಬ್ರೇಕ್ ಹಾಕೋದಕ್ಕೆ ಶಾಲೆಗಳ ಸಮಯ ಬದಲಾವಣೆ ಮಾಡಿದ್ರೆ ಸಾಧ್ಯವಾಗಬಹುದು ಎಂದು ಹೈಕೋರ್ಟ್ ಸಲಹೆ ನೀಡಿತ್ತು. ಕೋರ್ಟ್ ಸಲಹೆಯಂತೆ ಸಮಗ್ರ ಶಿಕ್ಷಣ ಇಲಾಖೆ ಮತ್ತು ಖಾಸಗಿ ಶಾಲೆಗಳ ಒಕ್ಕೂಟದ ಜತೆ ಟ್ರಾಫಿಕ್ ಇಲಾಖೆ ಅಧಿಕಾರಿಗಳು(Traffic department officials) ಸಭೆ ನಡೆಸಿದ್ರು. ಸಮಗ್ರ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ವಿಷಯಗಳನ್ನ ಚರ್ಚಿಸಲಾಯ್ತು.. ಶಾಲಾ ಮಕ್ಕಳ ಸಂಚಾರಕ್ಕೆ ಬಿಎಂಟಿಸಿ ಬಳಕೆ ಮಾಡುವಂತೆ ಸಲಹೆಗಳು ಬಂದಿವೆಯಂತೆ. ಇದರ ಜೊತೆಗೆ ಶಾಲೆಗಳ ಬಳಿ ಸಿಬ್ಬಂದಿ ನೇಮಿಸಿ, ಅವರಿಗೆ ಟ್ರಾಫಿಕ್ ಕಂಟ್ರೋಲ್ ಬಗ್ಗೆ ತರಬೇತಿ ನಡೆಸುವಂತೆ ಚಿಂತನೆ ನಡೆದಿವೆಯಂತೆ..ಶಾಲಾ ಸಮಯ ಬದಲಾವಣೆಯಿಂದ ಟ್ರಾಫಿಕ್ ಕಂಟ್ರೋಲ್ ಸಲಹೆಗಳ ಬಗ್ಗೆ ಇಂದು ಕೋರ್ಟ್ ಮುಂದೆ ವರದಿ ಸಲ್ಲಿಸೋದಾಗಿ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ತಿಳಿಸಿದ್ರು. ಇನ್ನು, ಸಭೆಯಲ್ಲಿ ಟ್ರಾಫಿಕ್ ಕಂಟ್ರೋಲ್ ಗೆ ಹಲವು ಸಲಹೆಗಳು ಬಂದಿವೆ. ಇವೆಲ್ಲದರ ಮಧ್ಯೆ ಶಾಲಾ ಸಮಯ ಬದಲಾವಣೆ ಬೇಡ ಅನ್ನೋ ಅಭಿಪ್ರಾಯ ವ್ಯಕ್ತವಾಗಿದಿಯಂತೆ. ಹೀಗಾಗಿ ಶಾಲಾ ಸಮಯ ಬದಲಾಗೋದು ಬಹುತೇಕ ಡೌಟ್ ಆಗಿದೆ. 

ಇದನ್ನೂ ವೀಕ್ಷಿಸಿ:  ದಾವಣಗೆರೆ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್ ಫೈಟ್: ಶಾಸಕರು, ಸಚಿವರ ಮಧ್ಯೆ ಕಾವೇರಿದ ಟಾಕ್‌ವಾರ್

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more