ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್  ಆದ ಯುವಕ... ವಿಡಿಯೋ ವೈರಲ್‌

ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್ ಆದ ಯುವಕ... ವಿಡಿಯೋ ವೈರಲ್‌

Suvarna News   | Asianet News
Published : Jan 10, 2022, 09:44 PM IST

ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 
 

ಮಂಗಳೂರು(ಜ.10):  ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕೊಣಾಜೆ (Konaje) ಪೊಲೀಸ್ ಠಾಣಾ ವ್ಯಾಪ್ತಿಯ ಎಲಿಯಾರುಪದವು ಎಂಬಲ್ಲಿ ಈ ಘಟನೆ ನಡೆದಿದೆ. ಅತಿವೇಗದಿಂದ ಬಂದ ಸ್ಕೂಟರ್ ಸವಾರನೋರ್ವ ತಿರುಗುತ್ತಿದ್ದ ಬಸ್ಸು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ರಸ್ತೆ ಬದಿಯ ಅಂಗಡಿ ಮತ್ತು ಮರವೊಂದರ ನಡುವೆ ವೇಗದಲ್ಲಿ ಸ್ಕೂಟರ್​​​ ಚಲಾಯಿಸಿದ್ದಾನೆ.

ಈ ಸ್ಕೂಟರ್​ ಸವಾರ ಮೊದಲು ಬಸ್​​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಂಡು, ನಂತರ ಚಾಕಚಕ್ಯತೆಯಿಂದ ಪಕ್ಕದ ಇಂಡೋ ಫಿಶರಿಷ್ ಸಂಸ್ಥೆಯ ಗೇಟಿಗೆ ಬಡಿದು ಮರದ ನಡುವೆ ಚಲಿಸಿ ಪಾರಾಗಿದ್ದಾನೆ. ಸಂಸ್ಥೆಯ ಮೂರು ಸಿಸಿಟಿವಿ ಕ್ಯಾಮರಾದ ವಿಡಿಯೋಗಳಲ್ಲಿ ಈ ದೃಶ್ಯಗಳು ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  

ಈ ಎಲ್ಲಾ ವಿಡಿಯೋಗಳಲ್ಲಿಯೂ ಆತ ಅತೀ ವೇಗದಲ್ಲಿ ಚಲಿಸುತ್ತಿರುವುದು ಕಂಡು ಬಂದಿದೆ. ಒಟ್ಟಿನಲ್ಲಿ ಈತನ ಆಯಸ್ಸು ಅದೃಷ್ಟ ಎರಡು ಚೆನ್ನಾಗಿದ್ದು, ಈತ ಎರೆಡೆರಡು ಅಪಾಯಗಳು ಎದುರೆದುರೆ ಎದುರಾದರೂ ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾನೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more