ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್  ಆದ ಯುವಕ... ವಿಡಿಯೋ ವೈರಲ್‌

ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್ ಆದ ಯುವಕ... ವಿಡಿಯೋ ವೈರಲ್‌

Suvarna News   | Asianet News
Published : Jan 10, 2022, 09:44 PM IST

ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 
 

ಮಂಗಳೂರು(ಜ.10):  ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕೊಣಾಜೆ (Konaje) ಪೊಲೀಸ್ ಠಾಣಾ ವ್ಯಾಪ್ತಿಯ ಎಲಿಯಾರುಪದವು ಎಂಬಲ್ಲಿ ಈ ಘಟನೆ ನಡೆದಿದೆ. ಅತಿವೇಗದಿಂದ ಬಂದ ಸ್ಕೂಟರ್ ಸವಾರನೋರ್ವ ತಿರುಗುತ್ತಿದ್ದ ಬಸ್ಸು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ರಸ್ತೆ ಬದಿಯ ಅಂಗಡಿ ಮತ್ತು ಮರವೊಂದರ ನಡುವೆ ವೇಗದಲ್ಲಿ ಸ್ಕೂಟರ್​​​ ಚಲಾಯಿಸಿದ್ದಾನೆ.

ಈ ಸ್ಕೂಟರ್​ ಸವಾರ ಮೊದಲು ಬಸ್​​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಂಡು, ನಂತರ ಚಾಕಚಕ್ಯತೆಯಿಂದ ಪಕ್ಕದ ಇಂಡೋ ಫಿಶರಿಷ್ ಸಂಸ್ಥೆಯ ಗೇಟಿಗೆ ಬಡಿದು ಮರದ ನಡುವೆ ಚಲಿಸಿ ಪಾರಾಗಿದ್ದಾನೆ. ಸಂಸ್ಥೆಯ ಮೂರು ಸಿಸಿಟಿವಿ ಕ್ಯಾಮರಾದ ವಿಡಿಯೋಗಳಲ್ಲಿ ಈ ದೃಶ್ಯಗಳು ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  

ಈ ಎಲ್ಲಾ ವಿಡಿಯೋಗಳಲ್ಲಿಯೂ ಆತ ಅತೀ ವೇಗದಲ್ಲಿ ಚಲಿಸುತ್ತಿರುವುದು ಕಂಡು ಬಂದಿದೆ. ಒಟ್ಟಿನಲ್ಲಿ ಈತನ ಆಯಸ್ಸು ಅದೃಷ್ಟ ಎರಡು ಚೆನ್ನಾಗಿದ್ದು, ಈತ ಎರೆಡೆರಡು ಅಪಾಯಗಳು ಎದುರೆದುರೆ ಎದುರಾದರೂ ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾನೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more