ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್  ಆದ ಯುವಕ... ವಿಡಿಯೋ ವೈರಲ್‌

ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್ ಆದ ಯುವಕ... ವಿಡಿಯೋ ವೈರಲ್‌

Suvarna News   | Asianet News
Published : Jan 10, 2022, 09:44 PM IST

ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 
 

ಮಂಗಳೂರು(ಜ.10):  ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕೊಣಾಜೆ (Konaje) ಪೊಲೀಸ್ ಠಾಣಾ ವ್ಯಾಪ್ತಿಯ ಎಲಿಯಾರುಪದವು ಎಂಬಲ್ಲಿ ಈ ಘಟನೆ ನಡೆದಿದೆ. ಅತಿವೇಗದಿಂದ ಬಂದ ಸ್ಕೂಟರ್ ಸವಾರನೋರ್ವ ತಿರುಗುತ್ತಿದ್ದ ಬಸ್ಸು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ರಸ್ತೆ ಬದಿಯ ಅಂಗಡಿ ಮತ್ತು ಮರವೊಂದರ ನಡುವೆ ವೇಗದಲ್ಲಿ ಸ್ಕೂಟರ್​​​ ಚಲಾಯಿಸಿದ್ದಾನೆ.

ಈ ಸ್ಕೂಟರ್​ ಸವಾರ ಮೊದಲು ಬಸ್​​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಂಡು, ನಂತರ ಚಾಕಚಕ್ಯತೆಯಿಂದ ಪಕ್ಕದ ಇಂಡೋ ಫಿಶರಿಷ್ ಸಂಸ್ಥೆಯ ಗೇಟಿಗೆ ಬಡಿದು ಮರದ ನಡುವೆ ಚಲಿಸಿ ಪಾರಾಗಿದ್ದಾನೆ. ಸಂಸ್ಥೆಯ ಮೂರು ಸಿಸಿಟಿವಿ ಕ್ಯಾಮರಾದ ವಿಡಿಯೋಗಳಲ್ಲಿ ಈ ದೃಶ್ಯಗಳು ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  

ಈ ಎಲ್ಲಾ ವಿಡಿಯೋಗಳಲ್ಲಿಯೂ ಆತ ಅತೀ ವೇಗದಲ್ಲಿ ಚಲಿಸುತ್ತಿರುವುದು ಕಂಡು ಬಂದಿದೆ. ಒಟ್ಟಿನಲ್ಲಿ ಈತನ ಆಯಸ್ಸು ಅದೃಷ್ಟ ಎರಡು ಚೆನ್ನಾಗಿದ್ದು, ಈತ ಎರೆಡೆರಡು ಅಪಾಯಗಳು ಎದುರೆದುರೆ ಎದುರಾದರೂ ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾನೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more