ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್  ಆದ ಯುವಕ... ವಿಡಿಯೋ ವೈರಲ್‌

ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್ ಆದ ಯುವಕ... ವಿಡಿಯೋ ವೈರಲ್‌

Suvarna News   | Asianet News
Published : Jan 10, 2022, 09:44 PM IST

ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 
 

ಮಂಗಳೂರು(ಜ.10):  ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕೊಣಾಜೆ (Konaje) ಪೊಲೀಸ್ ಠಾಣಾ ವ್ಯಾಪ್ತಿಯ ಎಲಿಯಾರುಪದವು ಎಂಬಲ್ಲಿ ಈ ಘಟನೆ ನಡೆದಿದೆ. ಅತಿವೇಗದಿಂದ ಬಂದ ಸ್ಕೂಟರ್ ಸವಾರನೋರ್ವ ತಿರುಗುತ್ತಿದ್ದ ಬಸ್ಸು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ರಸ್ತೆ ಬದಿಯ ಅಂಗಡಿ ಮತ್ತು ಮರವೊಂದರ ನಡುವೆ ವೇಗದಲ್ಲಿ ಸ್ಕೂಟರ್​​​ ಚಲಾಯಿಸಿದ್ದಾನೆ.

ಈ ಸ್ಕೂಟರ್​ ಸವಾರ ಮೊದಲು ಬಸ್​​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಂಡು, ನಂತರ ಚಾಕಚಕ್ಯತೆಯಿಂದ ಪಕ್ಕದ ಇಂಡೋ ಫಿಶರಿಷ್ ಸಂಸ್ಥೆಯ ಗೇಟಿಗೆ ಬಡಿದು ಮರದ ನಡುವೆ ಚಲಿಸಿ ಪಾರಾಗಿದ್ದಾನೆ. ಸಂಸ್ಥೆಯ ಮೂರು ಸಿಸಿಟಿವಿ ಕ್ಯಾಮರಾದ ವಿಡಿಯೋಗಳಲ್ಲಿ ಈ ದೃಶ್ಯಗಳು ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  

ಈ ಎಲ್ಲಾ ವಿಡಿಯೋಗಳಲ್ಲಿಯೂ ಆತ ಅತೀ ವೇಗದಲ್ಲಿ ಚಲಿಸುತ್ತಿರುವುದು ಕಂಡು ಬಂದಿದೆ. ಒಟ್ಟಿನಲ್ಲಿ ಈತನ ಆಯಸ್ಸು ಅದೃಷ್ಟ ಎರಡು ಚೆನ್ನಾಗಿದ್ದು, ಈತ ಎರೆಡೆರಡು ಅಪಾಯಗಳು ಎದುರೆದುರೆ ಎದುರಾದರೂ ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾನೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more