ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್  ಆದ ಯುವಕ... ವಿಡಿಯೋ ವೈರಲ್‌

ಒಟ್ಟೊಟ್ಟಿಗೆ ಎದುರಾದ ಎರಡೆರಡು ಅಪಘಾತಗಳಿಂದ ಎಸ್ಕೇಪ್ ಆದ ಯುವಕ... ವಿಡಿಯೋ ವೈರಲ್‌

Suvarna News   | Asianet News
Published : Jan 10, 2022, 09:44 PM IST

ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 
 

ಮಂಗಳೂರು(ಜ.10):  ಸ್ಕೂಟರ್ ಸವಾರನೋರ್ವ ಒಂದೇ ದಿನ ಎರೆಡರಡು ಅಪಘಾತಗಳಿಂದ ಪಾರಾದ ಘಟನೆ ಕರಾವಳಿ ನಗರಿ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ದೃಶ್ಯಾವಳಿ ಈಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಚಾಲಕನ ಚಾಕಚಕ್ಯತೆ, ಚುರುಕುತನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕೊಣಾಜೆ (Konaje) ಪೊಲೀಸ್ ಠಾಣಾ ವ್ಯಾಪ್ತಿಯ ಎಲಿಯಾರುಪದವು ಎಂಬಲ್ಲಿ ಈ ಘಟನೆ ನಡೆದಿದೆ. ಅತಿವೇಗದಿಂದ ಬಂದ ಸ್ಕೂಟರ್ ಸವಾರನೋರ್ವ ತಿರುಗುತ್ತಿದ್ದ ಬಸ್ಸು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಧಾವಂತದಲ್ಲಿ ರಸ್ತೆ ಬದಿಯ ಅಂಗಡಿ ಮತ್ತು ಮರವೊಂದರ ನಡುವೆ ವೇಗದಲ್ಲಿ ಸ್ಕೂಟರ್​​​ ಚಲಾಯಿಸಿದ್ದಾನೆ.

ಈ ಸ್ಕೂಟರ್​ ಸವಾರ ಮೊದಲು ಬಸ್​​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿಕೊಂಡು, ನಂತರ ಚಾಕಚಕ್ಯತೆಯಿಂದ ಪಕ್ಕದ ಇಂಡೋ ಫಿಶರಿಷ್ ಸಂಸ್ಥೆಯ ಗೇಟಿಗೆ ಬಡಿದು ಮರದ ನಡುವೆ ಚಲಿಸಿ ಪಾರಾಗಿದ್ದಾನೆ. ಸಂಸ್ಥೆಯ ಮೂರು ಸಿಸಿಟಿವಿ ಕ್ಯಾಮರಾದ ವಿಡಿಯೋಗಳಲ್ಲಿ ಈ ದೃಶ್ಯಗಳು ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  

ಈ ಎಲ್ಲಾ ವಿಡಿಯೋಗಳಲ್ಲಿಯೂ ಆತ ಅತೀ ವೇಗದಲ್ಲಿ ಚಲಿಸುತ್ತಿರುವುದು ಕಂಡು ಬಂದಿದೆ. ಒಟ್ಟಿನಲ್ಲಿ ಈತನ ಆಯಸ್ಸು ಅದೃಷ್ಟ ಎರಡು ಚೆನ್ನಾಗಿದ್ದು, ಈತ ಎರೆಡೆರಡು ಅಪಾಯಗಳು ಎದುರೆದುರೆ ಎದುರಾದರೂ ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾನೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more