ಫ್ರೀ ಬಸ್ ಎಫೆಕ್ಟ್..ಪ್ರವಾಸಿ ತಾಣಗಳು ಫುಲ್ ರಶ್: ಸ್ಥಳೀಯರು, ಶಾಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸಂಕಷ್ಟ

ಫ್ರೀ ಬಸ್ ಎಫೆಕ್ಟ್..ಪ್ರವಾಸಿ ತಾಣಗಳು ಫುಲ್ ರಶ್: ಸ್ಥಳೀಯರು, ಶಾಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸಂಕಷ್ಟ

Published : Nov 25, 2023, 10:44 AM IST

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣದ ಭಾಗ್ಯ ಸಿಕ್ಕಿದೆ. ಇದ್ರಿಂದಾಗಿ ಉತ್ತರ ಕನ್ನಡ ಜಿಲ್ಲೆ ಪ್ರವಾಸೋದ್ಯಮಕ್ಕೆ ಬಿಗ್ ಬೂಸ್ಟ್ ಸಿಕ್ಕಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿರೋದು ಸ್ಥಳೀಯರ ಪ್ರಯಾಣಕ್ಕೆ ಅಡಚಣೆ ಉಂಟು ಮಾಡ್ತಿದೆ. 
 

ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯೂ ಒಂದು. ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಸರ್ಕಾರ ಶಕ್ತಿ ಯೋಜನೆಯನ್ನ ಯಶಸ್ವಿಯಾಗಿ ಜಾರಿಗೊಳಿಸಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಅದ್ರಲ್ಲೂ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಧಾರ್ಮಿಕ ಹಾಗೂ ಪ್ರವಾಸಿ ತಾಣಗಳು ಹೆಚ್ಚಿರುವ ಉತ್ತರ ಕನ್ನಡದಲ್ಲೂ ಸಹಜವಾಗೇ ಪ್ರವಾಸಿಗರ ಸಂಖ್ಯೆ ಜಾಸ್ತಿಯಾಗಿದೆ. ಈ ಮೊದಲು ಉತ್ತರ ಕನ್ನಡದಲ್ಲಿ ಪ್ರತಿನಿತ್ಯ 1 ಲಕ್ಷದ 50 ಸಾವಿರ ಪ್ರಯಾಣಿಕರು ಸಂಚರಿಸುತ್ತಿದ್ದರು. ಆದ್ರೆ ಶಕ್ತಿ ಯೋಜನೆ ಅನುಷ್ಠಾನದ ಬಳಿಕ 2 ಲಕ್ಷದ 35 ಸಾವಿರ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ಪ್ರವಾಸೋದ್ಯಮ ಚೇತರಿಸಿಕೊಳ್ತಿದೆ. ಆದ್ರೆ ಬಸ್‌ಗಳು ಫುಲ್ ರಶ್ ಆಗ್ತಿದ್ದು, ಸ್ಥಳೀಯರು ಹಾಗೂ ಶಾಲಾ ವಿದ್ಯಾರ್ಥಿಗಳು ಬಸ್ ಸಿಗದೇ ಪರದಾಡುವಂತಾಗಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಿರೋದ್ರಿಂದ 50 ಹೆಚ್ಚುವರಿ ಬಸ್ಗಳ ಅಗತ್ಯವಿದೆ. ಜೊತೆಗೆ ಚಾಲಕರು ಹಾಗೂ ನಿರ್ವಾಹಕರ ಕೊರತೆಯೂ ಎದುರಾಗಿದೆ. ಕೆಲ ಬಸ್ಗಳ ಮಾರ್ಗ ಬದಲಾವಣೆ ಮಾಡಲಾಗಿದ್ದು, ಇದ್ರಿಂದಾಗಿ ಗ್ರಾಮೀಣ ಭಾಗಗಳಿಗೆ ತೆರಳುವ ಜನರಿಗೆ ಸಮಸ್ಯೆ ಉಂಟಾಗ್ತಿದೆ. ಶೀಘ್ರದಲ್ಲೇ 50 ಹೊಸ ಬಸ್ ಖರೀದಿಸಿ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆ ಪರಿಹರಿಸ್ತೇವೆ ಅಂತಾರೆ ಉತ್ತರಕನ್ನಡ ಜಿಲ್ಲೆ ವಾಯುವ್ಯ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ.ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಕ್ಷೇತ್ರ ಪ್ರಗತಿ ಕಂಡಿರೋದಂತು ಸತ್ಯ. ಆದ್ರೆ ಪ್ರಯಾಣಿಕರ ಸಂಖ್ಯೆ ಜಾಸ್ತಿಯಾಗ್ತಿರೋದ್ರಿಂದ ಸ್ಥಳೀಯರಿಗೆ ಸ್ವಲ್ಪ ಅಡಚಣೆ ಉಂಟಾಗ್ತಿದ್ದು, ಸಾರಿಗೆ ಇಲಾಖೆ ಈ ಬಗ್ಗೆ ಗಮನಹರಿಸಬೇಕಿದೆ.

ಇದನ್ನೂ ವೀಕ್ಷಿಸಿ:  ಈಡೇರದ ಬೃಹತ್ ಮಾರುಕಟ್ಟೆ ಭರವಸೆ, ಸಿಡಿದೆದ್ದ ರೈತರು: ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!