Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Suvarna News   | Asianet News
Published : Jan 11, 2022, 04:32 PM ISTUpdated : Jan 11, 2022, 04:50 PM IST

ಶರಾವತಿ (Sharawathi Backwater) ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  

 ಶಿವಮೊಗ್ಗ (ಜ. 11):  ಸಾಗರ ತಾಲೂಕಿನ ಕರೂರು ಮತ್ತು ಬಾರಂಗಿ ಹೋಬಳಿಯ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಇಲ್ಲಿನ ಜನ ತುಂಬಾ ಕಷ್ಟ ಅನುಭವಿಸುವಂತಾಗಿತ್ತು.  ತುರ್ತು ಸಂದರ್ಭದಲ್ಲಿ 108 ಸೇವೆ ಲಭ್ಯವಿಲ್ಲದೇ ಹಿನ್ನೀರಿನ 8 ಪಂಚಾಯತ್ ವ್ಯಾಪ್ತಿಯ ಸುಮಾರು 20 ಸಾವಿರ ಜನರಿಗೆ ಇಲ್ಲ ತುರ್ತು ಸೇವೆ ಸಿಗದಂತಾಗಿತ್ತು. 

ಸುಮಾರು ಒಂದು ತಿಂಗಳ ಹಿಂದಿನಿಂದ ಅಂಬ್ಯುಲೆನ್ಸ್ ವಾಹನ ಕೆಟ್ಟು ನಿಂತಿತ್ತು.   ದುರಸ್ತಿ ಕಾಣದೇ ಸೇವೆಯೇ ಸ್ಥಗಿತಗೊಂಡಿತ್ತು. ಅಂಬ್ಯಲೆನ್ಸ್ ಇಲ್ಲದ ಕಾರಣಕ್ಕೆ ಆಗಬಾರದ ಅನಾಹುತಗಳೂ ನಡೆದು ಹೋದುವು. ಒಂದು ಘಟನೆಯಲ್ಲಿ  ಹಸುಗೂಸು ಕಣ್ಣು ಬಿಡುವ ಮೊದಲೇ ಇಹಲೋಕ ಯಾತ್ರೆ ಮುಗಿಸಿದರೆ, ಮತ್ತೊಂದು ಘಟನೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸಾಗರ ಅಸ್ಪತ್ರೆಗೆ ಸಾಗಿಸಲು ಜನ ಪರದಾಡಬೇಕಾಯಿತು. ಇದರಿಂದಾಗಿ ಕರೂರು ಹೋಬಳಿಯ ಜನತೆ ಹೊಸ ಅಂಬ್ಯುಲೆನ್ಸ್ ಗಾಗಿ ಪ್ರತಿಭಟನೆ ನಡೆಸಿದ್ದರು. ಶಾಸಕರು ತಾತ್ಕಾಲಿಕವಾಗಿ ವೆಂಟಿಲೇಟರ್ ಇಲ್ಲದ ಅಂಬ್ಯುಲೆನ್ಸ್ ನೀಡಿದ್ದರೂ ಜನ ಅದನ್ನು ನಿರಾಕರಿಸಿದ್ದರು,  ಹೊಸ ಅಂಬ್ಯುಲೆನ್ಸ್ ಬೇಕು ಎಂದು ಆಗ್ರಹಿಸಿದ್ದ ಹಿನ್ನೆಲೆ, ಶಾಸಕ ಹಾಲಪ್ಪ  ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.

ಈಗ ಶರಾವತಿ ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಮಂಜೂರಾಗಿದ್ದು,  ನೂತನವಾದ ಸುಸಜ್ಜಿತ, ಅತ್ಯಾಧುನಿಕ 108 ಆಂಬುಲೆನ್ಸ್ ವಾಹನಕ್ಕೆ ಶಾಸಕರು ಚಾಲನೆ ನೀಡಿದ್ದಾರೆ.

 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more