Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Suvarna News   | Asianet News
Published : Jan 11, 2022, 04:32 PM ISTUpdated : Jan 11, 2022, 04:50 PM IST

ಶರಾವತಿ (Sharawathi Backwater) ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  

 ಶಿವಮೊಗ್ಗ (ಜ. 11):  ಸಾಗರ ತಾಲೂಕಿನ ಕರೂರು ಮತ್ತು ಬಾರಂಗಿ ಹೋಬಳಿಯ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಇಲ್ಲಿನ ಜನ ತುಂಬಾ ಕಷ್ಟ ಅನುಭವಿಸುವಂತಾಗಿತ್ತು.  ತುರ್ತು ಸಂದರ್ಭದಲ್ಲಿ 108 ಸೇವೆ ಲಭ್ಯವಿಲ್ಲದೇ ಹಿನ್ನೀರಿನ 8 ಪಂಚಾಯತ್ ವ್ಯಾಪ್ತಿಯ ಸುಮಾರು 20 ಸಾವಿರ ಜನರಿಗೆ ಇಲ್ಲ ತುರ್ತು ಸೇವೆ ಸಿಗದಂತಾಗಿತ್ತು. 

ಸುಮಾರು ಒಂದು ತಿಂಗಳ ಹಿಂದಿನಿಂದ ಅಂಬ್ಯುಲೆನ್ಸ್ ವಾಹನ ಕೆಟ್ಟು ನಿಂತಿತ್ತು.   ದುರಸ್ತಿ ಕಾಣದೇ ಸೇವೆಯೇ ಸ್ಥಗಿತಗೊಂಡಿತ್ತು. ಅಂಬ್ಯಲೆನ್ಸ್ ಇಲ್ಲದ ಕಾರಣಕ್ಕೆ ಆಗಬಾರದ ಅನಾಹುತಗಳೂ ನಡೆದು ಹೋದುವು. ಒಂದು ಘಟನೆಯಲ್ಲಿ  ಹಸುಗೂಸು ಕಣ್ಣು ಬಿಡುವ ಮೊದಲೇ ಇಹಲೋಕ ಯಾತ್ರೆ ಮುಗಿಸಿದರೆ, ಮತ್ತೊಂದು ಘಟನೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸಾಗರ ಅಸ್ಪತ್ರೆಗೆ ಸಾಗಿಸಲು ಜನ ಪರದಾಡಬೇಕಾಯಿತು. ಇದರಿಂದಾಗಿ ಕರೂರು ಹೋಬಳಿಯ ಜನತೆ ಹೊಸ ಅಂಬ್ಯುಲೆನ್ಸ್ ಗಾಗಿ ಪ್ರತಿಭಟನೆ ನಡೆಸಿದ್ದರು. ಶಾಸಕರು ತಾತ್ಕಾಲಿಕವಾಗಿ ವೆಂಟಿಲೇಟರ್ ಇಲ್ಲದ ಅಂಬ್ಯುಲೆನ್ಸ್ ನೀಡಿದ್ದರೂ ಜನ ಅದನ್ನು ನಿರಾಕರಿಸಿದ್ದರು,  ಹೊಸ ಅಂಬ್ಯುಲೆನ್ಸ್ ಬೇಕು ಎಂದು ಆಗ್ರಹಿಸಿದ್ದ ಹಿನ್ನೆಲೆ, ಶಾಸಕ ಹಾಲಪ್ಪ  ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.

ಈಗ ಶರಾವತಿ ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಮಂಜೂರಾಗಿದ್ದು,  ನೂತನವಾದ ಸುಸಜ್ಜಿತ, ಅತ್ಯಾಧುನಿಕ 108 ಆಂಬುಲೆನ್ಸ್ ವಾಹನಕ್ಕೆ ಶಾಸಕರು ಚಾಲನೆ ನೀಡಿದ್ದಾರೆ.

 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more