Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Suvarna News   | Asianet News
Published : Jan 11, 2022, 04:32 PM ISTUpdated : Jan 11, 2022, 04:50 PM IST

ಶರಾವತಿ (Sharawathi Backwater) ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  

 ಶಿವಮೊಗ್ಗ (ಜ. 11):  ಸಾಗರ ತಾಲೂಕಿನ ಕರೂರು ಮತ್ತು ಬಾರಂಗಿ ಹೋಬಳಿಯ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಇಲ್ಲಿನ ಜನ ತುಂಬಾ ಕಷ್ಟ ಅನುಭವಿಸುವಂತಾಗಿತ್ತು.  ತುರ್ತು ಸಂದರ್ಭದಲ್ಲಿ 108 ಸೇವೆ ಲಭ್ಯವಿಲ್ಲದೇ ಹಿನ್ನೀರಿನ 8 ಪಂಚಾಯತ್ ವ್ಯಾಪ್ತಿಯ ಸುಮಾರು 20 ಸಾವಿರ ಜನರಿಗೆ ಇಲ್ಲ ತುರ್ತು ಸೇವೆ ಸಿಗದಂತಾಗಿತ್ತು. 

ಸುಮಾರು ಒಂದು ತಿಂಗಳ ಹಿಂದಿನಿಂದ ಅಂಬ್ಯುಲೆನ್ಸ್ ವಾಹನ ಕೆಟ್ಟು ನಿಂತಿತ್ತು.   ದುರಸ್ತಿ ಕಾಣದೇ ಸೇವೆಯೇ ಸ್ಥಗಿತಗೊಂಡಿತ್ತು. ಅಂಬ್ಯಲೆನ್ಸ್ ಇಲ್ಲದ ಕಾರಣಕ್ಕೆ ಆಗಬಾರದ ಅನಾಹುತಗಳೂ ನಡೆದು ಹೋದುವು. ಒಂದು ಘಟನೆಯಲ್ಲಿ  ಹಸುಗೂಸು ಕಣ್ಣು ಬಿಡುವ ಮೊದಲೇ ಇಹಲೋಕ ಯಾತ್ರೆ ಮುಗಿಸಿದರೆ, ಮತ್ತೊಂದು ಘಟನೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸಾಗರ ಅಸ್ಪತ್ರೆಗೆ ಸಾಗಿಸಲು ಜನ ಪರದಾಡಬೇಕಾಯಿತು. ಇದರಿಂದಾಗಿ ಕರೂರು ಹೋಬಳಿಯ ಜನತೆ ಹೊಸ ಅಂಬ್ಯುಲೆನ್ಸ್ ಗಾಗಿ ಪ್ರತಿಭಟನೆ ನಡೆಸಿದ್ದರು. ಶಾಸಕರು ತಾತ್ಕಾಲಿಕವಾಗಿ ವೆಂಟಿಲೇಟರ್ ಇಲ್ಲದ ಅಂಬ್ಯುಲೆನ್ಸ್ ನೀಡಿದ್ದರೂ ಜನ ಅದನ್ನು ನಿರಾಕರಿಸಿದ್ದರು,  ಹೊಸ ಅಂಬ್ಯುಲೆನ್ಸ್ ಬೇಕು ಎಂದು ಆಗ್ರಹಿಸಿದ್ದ ಹಿನ್ನೆಲೆ, ಶಾಸಕ ಹಾಲಪ್ಪ  ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.

ಈಗ ಶರಾವತಿ ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಮಂಜೂರಾಗಿದ್ದು,  ನೂತನವಾದ ಸುಸಜ್ಜಿತ, ಅತ್ಯಾಧುನಿಕ 108 ಆಂಬುಲೆನ್ಸ್ ವಾಹನಕ್ಕೆ ಶಾಸಕರು ಚಾಲನೆ ನೀಡಿದ್ದಾರೆ.

 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more