Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Suvarna News   | Asianet News
Published : Jan 11, 2022, 04:32 PM ISTUpdated : Jan 11, 2022, 04:50 PM IST

ಶರಾವತಿ (Sharawathi Backwater) ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  

 ಶಿವಮೊಗ್ಗ (ಜ. 11):  ಸಾಗರ ತಾಲೂಕಿನ ಕರೂರು ಮತ್ತು ಬಾರಂಗಿ ಹೋಬಳಿಯ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಇಲ್ಲಿನ ಜನ ತುಂಬಾ ಕಷ್ಟ ಅನುಭವಿಸುವಂತಾಗಿತ್ತು.  ತುರ್ತು ಸಂದರ್ಭದಲ್ಲಿ 108 ಸೇವೆ ಲಭ್ಯವಿಲ್ಲದೇ ಹಿನ್ನೀರಿನ 8 ಪಂಚಾಯತ್ ವ್ಯಾಪ್ತಿಯ ಸುಮಾರು 20 ಸಾವಿರ ಜನರಿಗೆ ಇಲ್ಲ ತುರ್ತು ಸೇವೆ ಸಿಗದಂತಾಗಿತ್ತು. 

ಸುಮಾರು ಒಂದು ತಿಂಗಳ ಹಿಂದಿನಿಂದ ಅಂಬ್ಯುಲೆನ್ಸ್ ವಾಹನ ಕೆಟ್ಟು ನಿಂತಿತ್ತು.   ದುರಸ್ತಿ ಕಾಣದೇ ಸೇವೆಯೇ ಸ್ಥಗಿತಗೊಂಡಿತ್ತು. ಅಂಬ್ಯಲೆನ್ಸ್ ಇಲ್ಲದ ಕಾರಣಕ್ಕೆ ಆಗಬಾರದ ಅನಾಹುತಗಳೂ ನಡೆದು ಹೋದುವು. ಒಂದು ಘಟನೆಯಲ್ಲಿ  ಹಸುಗೂಸು ಕಣ್ಣು ಬಿಡುವ ಮೊದಲೇ ಇಹಲೋಕ ಯಾತ್ರೆ ಮುಗಿಸಿದರೆ, ಮತ್ತೊಂದು ಘಟನೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸಾಗರ ಅಸ್ಪತ್ರೆಗೆ ಸಾಗಿಸಲು ಜನ ಪರದಾಡಬೇಕಾಯಿತು. ಇದರಿಂದಾಗಿ ಕರೂರು ಹೋಬಳಿಯ ಜನತೆ ಹೊಸ ಅಂಬ್ಯುಲೆನ್ಸ್ ಗಾಗಿ ಪ್ರತಿಭಟನೆ ನಡೆಸಿದ್ದರು. ಶಾಸಕರು ತಾತ್ಕಾಲಿಕವಾಗಿ ವೆಂಟಿಲೇಟರ್ ಇಲ್ಲದ ಅಂಬ್ಯುಲೆನ್ಸ್ ನೀಡಿದ್ದರೂ ಜನ ಅದನ್ನು ನಿರಾಕರಿಸಿದ್ದರು,  ಹೊಸ ಅಂಬ್ಯುಲೆನ್ಸ್ ಬೇಕು ಎಂದು ಆಗ್ರಹಿಸಿದ್ದ ಹಿನ್ನೆಲೆ, ಶಾಸಕ ಹಾಲಪ್ಪ  ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.

ಈಗ ಶರಾವತಿ ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಮಂಜೂರಾಗಿದ್ದು,  ನೂತನವಾದ ಸುಸಜ್ಜಿತ, ಅತ್ಯಾಧುನಿಕ 108 ಆಂಬುಲೆನ್ಸ್ ವಾಹನಕ್ಕೆ ಶಾಸಕರು ಚಾಲನೆ ನೀಡಿದ್ದಾರೆ.

 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more