Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Shivamogga: ಕೊನೆಗೂ ತುಮರಿಗೆ ಬಂತು ಆ್ಯಂಬುಲೆನ್ಸ್, ಮಾತು ಉಳಿಸಿಕೊಂಡ ಶಾಸಕ

Suvarna News   | Asianet News
Published : Jan 11, 2022, 04:32 PM ISTUpdated : Jan 11, 2022, 04:50 PM IST

ಶರಾವತಿ (Sharawathi Backwater) ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  

 ಶಿವಮೊಗ್ಗ (ಜ. 11):  ಸಾಗರ ತಾಲೂಕಿನ ಕರೂರು ಮತ್ತು ಬಾರಂಗಿ ಹೋಬಳಿಯ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಆಂಬುಲೆನ್ಸ್ ಸೇವೆ ಸ್ಥಗಿತಗೊಂಡು ಇಲ್ಲಿನ ಜನ ತುಂಬಾ ಕಷ್ಟ ಅನುಭವಿಸುವಂತಾಗಿತ್ತು.  ತುರ್ತು ಸಂದರ್ಭದಲ್ಲಿ 108 ಸೇವೆ ಲಭ್ಯವಿಲ್ಲದೇ ಹಿನ್ನೀರಿನ 8 ಪಂಚಾಯತ್ ವ್ಯಾಪ್ತಿಯ ಸುಮಾರು 20 ಸಾವಿರ ಜನರಿಗೆ ಇಲ್ಲ ತುರ್ತು ಸೇವೆ ಸಿಗದಂತಾಗಿತ್ತು. 

ಸುಮಾರು ಒಂದು ತಿಂಗಳ ಹಿಂದಿನಿಂದ ಅಂಬ್ಯುಲೆನ್ಸ್ ವಾಹನ ಕೆಟ್ಟು ನಿಂತಿತ್ತು.   ದುರಸ್ತಿ ಕಾಣದೇ ಸೇವೆಯೇ ಸ್ಥಗಿತಗೊಂಡಿತ್ತು. ಅಂಬ್ಯಲೆನ್ಸ್ ಇಲ್ಲದ ಕಾರಣಕ್ಕೆ ಆಗಬಾರದ ಅನಾಹುತಗಳೂ ನಡೆದು ಹೋದುವು. ಒಂದು ಘಟನೆಯಲ್ಲಿ  ಹಸುಗೂಸು ಕಣ್ಣು ಬಿಡುವ ಮೊದಲೇ ಇಹಲೋಕ ಯಾತ್ರೆ ಮುಗಿಸಿದರೆ, ಮತ್ತೊಂದು ಘಟನೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸಾಗರ ಅಸ್ಪತ್ರೆಗೆ ಸಾಗಿಸಲು ಜನ ಪರದಾಡಬೇಕಾಯಿತು. ಇದರಿಂದಾಗಿ ಕರೂರು ಹೋಬಳಿಯ ಜನತೆ ಹೊಸ ಅಂಬ್ಯುಲೆನ್ಸ್ ಗಾಗಿ ಪ್ರತಿಭಟನೆ ನಡೆಸಿದ್ದರು. ಶಾಸಕರು ತಾತ್ಕಾಲಿಕವಾಗಿ ವೆಂಟಿಲೇಟರ್ ಇಲ್ಲದ ಅಂಬ್ಯುಲೆನ್ಸ್ ನೀಡಿದ್ದರೂ ಜನ ಅದನ್ನು ನಿರಾಕರಿಸಿದ್ದರು,  ಹೊಸ ಅಂಬ್ಯುಲೆನ್ಸ್ ಬೇಕು ಎಂದು ಆಗ್ರಹಿಸಿದ್ದ ಹಿನ್ನೆಲೆ, ಶಾಸಕ ಹಾಲಪ್ಪ  ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.

ಈಗ ಶರಾವತಿ ನದಿ ಹಿನ್ನೀರಿನ ಪ್ರದೇಶದಲ್ಲಿ ವಾಸಿಸುವ ಜನರ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಇಲ್ಲಿನ ಜನರಿಗೆ  ಕೊಟ್ಟ ಮಾತನ್ನು  ಉಳಿಸಿಕೊಂಡಿದ್ದಾರೆ. ಊರಿಗೆ ಹೊಚ್ಚ ಹೊಸ 108  ಅಂಬ್ಯುಲೆನ್ಸ್ ಬಂದಿದೆ.  ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಮಂಜೂರಾಗಿದ್ದು,  ನೂತನವಾದ ಸುಸಜ್ಜಿತ, ಅತ್ಯಾಧುನಿಕ 108 ಆಂಬುಲೆನ್ಸ್ ವಾಹನಕ್ಕೆ ಶಾಸಕರು ಚಾಲನೆ ನೀಡಿದ್ದಾರೆ.

 

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
Read more