ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

Published : Nov 30, 2023, 10:17 AM IST

ಅಪಘಾತವಾದಾಗ ಅಥವಾ ಮತ್ತಿತ್ತರ ಸಂದರ್ಭಗಳಲ್ಲಿ ರೋಗಿಗಳ ಜೀವ ಉಳಿಸಲು ರಕ್ತದ ತುರ್ತು ಅಗತ್ಯವಿರುತ್ತೆ. ಹೀಗಾಗೇ ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತ ಶೇಖರಿಸಿಡಲಾಗುತ್ತದೆ. ಆದ್ರೆ ಕೋಲಾರ ಜಿಲ್ಲೆಯ ಬ್ಲಡ್ ಬ್ಯಾಂಕ್‌ಗಳು ಮಾತ್ರ ರಕ್ತದ ಕೊರತೆ ಎದುರಿಸುತ್ತಿವೆ.   

ರಕ್ತದಾನ ಮಾಡುವಂತೆ ಸಂಘ-ಸಂಸ್ಥೆಗಳು, ಆಸ್ಪತ್ರೆಗಳು (Hospitals) ಆಗ್ಗಾಗ್ಗೆ ಅಭಿಯಾನ ನಡೆಸುತ್ತಲೇ ಇರುತ್ತವೆ. ಯಾಕಂದ್ರೆ ಅಪಘಾತಗೊಂಡ ವ್ಯಕ್ತಿ ಅಥವಾ ರಕ್ತಹೀನತೆಯಿಂದ ಬಳಲುತ್ತಿರುವ ರೋಗಿ ಜೀವ ಉಳಿಸಲು ರಕ್ತ ತುರ್ತಾಗಿ ಬೇಕಾಗಿರುತ್ತದೆ. ಆದ್ದರಿಂದಲೇ ಬ್ಲಡ್ ಬ್ಯಾಂಕ್‌ಗಳಲ್ಲಿ(Blood bank) ಹೆಚ್ಚಿನ ಪ್ರಮಾಣದ ರಕ್ತ ಶೇಖರಣೆಗೆ ಕ್ರಮವಹಿಸಲಾಗುತ್ತದೆ. ಆದ್ರೆ ಬಯಲುಸೀಮೆ ಕೋಲಾರದಲ್ಲಿ(Kolar) ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಬ್ಲಡ್ ಬ್ಯಾಂಕ್ಗಳಲ್ಲಿ ದಿನೇದಿನೆ ರಕ್ತದ ಸಂಗ್ರಹ ಕುಸಿಯುತ್ತಿದ್ದು, ರಕ್ತಕ್ಕಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಕೋಲಾರದಲ್ಲಿ ಜಿಲ್ಲಾಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ, ಜಾಲಪ್ಪ ಆಸ್ಪತ್ರೆ ಸೇರಿದಂತೆ ಒಟ್ಟು 4 ಬ್ಲಡ್ ಬ್ಯಾಂಕ್ಗಳಿವೆ. ಆದ್ರೆ ಎಲ್ಲಾ ಬ್ಲಡ್ ಬ್ಯಾಂಕ್ಗಳಲ್ಲೂ ರಕ್ತದ ಕೊರತೆ ಉಂಟಾಗಿದೆ. ಈ ಮೊದಲು ರಾಜಕೀಯ ಕಾರಣಕ್ಕೆ, ಗಣ್ಯರ ಹುಟ್ಟುಹಬ್ಬರ ಆಚರಣೆ ನೆಪದಲ್ಲಿ ರಕ್ತದಾನ ಶಿಬಿರಗಳನ್ನ ಆಯೋಜಿಸಲಾಗ್ತಿತ್ತು. ಆದ್ರೆ ಇತ್ತೀಚಿಗೆ ಬ್ಲಡ್ ಕ್ಯಾಂಪ್ಗಳು ಕಡಿಮೆಯಾಗಿವೆ. ಕೋಲಾರದಲ್ಲಿ ಪ್ರತಿ ತಿಂಗಳು ಕನಿಷ್ಠ 350 ರಿಂದ 400 ಯೂನಿಟ್ ರಕ್ತದ ಅಗತ್ಯವಿದೆ. ಆದ್ರೆ 60 ರಿಂದ 80 ಯೂನಿಟ್ ರಕ್ತದ ಕೊರತೆ ಉಂಟಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ರಕ್ತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿಫಲವಾಗಿದೆ. ಸಂಘ-ಸಂಸ್ಥೆಗಳ ಜೊತೆಗೂಡಿ ವಿಶೇಷ ಕಾರ್ಯಕ್ರಮಗಳ ಮೂಲಕ ರಕ್ತದಾನಕ್ಕೆ ಜನರನ್ನ ಪ್ರೇರೇಪಿಸಬೇಕು.ಇನ್ನಾದ್ರೂ ಆರೋಗ್ಯಾಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದಲ್ಲಿ ರಕ್ತದ ಸಂಗ್ರಹಕ್ಕೆ ಕ್ರಮಕೈಗೊಳ್ಳಬೇಕಿದೆ.

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿಯಲ್ಲಿ ಅದ್ಧೂರಿ ಮಕ್ಕಳ ದಿನಾಚರಣೆ: ಸುವರ್ಣನ್ಯೂಸ್, ಕನ್ನಡಪ್ರಭ ಸಹಯೋಗದಲ್ಲಿ ಕಾರ್ಯಕ್ರಮ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more