ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

Published : Nov 30, 2023, 10:17 AM IST

ಅಪಘಾತವಾದಾಗ ಅಥವಾ ಮತ್ತಿತ್ತರ ಸಂದರ್ಭಗಳಲ್ಲಿ ರೋಗಿಗಳ ಜೀವ ಉಳಿಸಲು ರಕ್ತದ ತುರ್ತು ಅಗತ್ಯವಿರುತ್ತೆ. ಹೀಗಾಗೇ ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತ ಶೇಖರಿಸಿಡಲಾಗುತ್ತದೆ. ಆದ್ರೆ ಕೋಲಾರ ಜಿಲ್ಲೆಯ ಬ್ಲಡ್ ಬ್ಯಾಂಕ್‌ಗಳು ಮಾತ್ರ ರಕ್ತದ ಕೊರತೆ ಎದುರಿಸುತ್ತಿವೆ.   

ರಕ್ತದಾನ ಮಾಡುವಂತೆ ಸಂಘ-ಸಂಸ್ಥೆಗಳು, ಆಸ್ಪತ್ರೆಗಳು (Hospitals) ಆಗ್ಗಾಗ್ಗೆ ಅಭಿಯಾನ ನಡೆಸುತ್ತಲೇ ಇರುತ್ತವೆ. ಯಾಕಂದ್ರೆ ಅಪಘಾತಗೊಂಡ ವ್ಯಕ್ತಿ ಅಥವಾ ರಕ್ತಹೀನತೆಯಿಂದ ಬಳಲುತ್ತಿರುವ ರೋಗಿ ಜೀವ ಉಳಿಸಲು ರಕ್ತ ತುರ್ತಾಗಿ ಬೇಕಾಗಿರುತ್ತದೆ. ಆದ್ದರಿಂದಲೇ ಬ್ಲಡ್ ಬ್ಯಾಂಕ್‌ಗಳಲ್ಲಿ(Blood bank) ಹೆಚ್ಚಿನ ಪ್ರಮಾಣದ ರಕ್ತ ಶೇಖರಣೆಗೆ ಕ್ರಮವಹಿಸಲಾಗುತ್ತದೆ. ಆದ್ರೆ ಬಯಲುಸೀಮೆ ಕೋಲಾರದಲ್ಲಿ(Kolar) ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಬ್ಲಡ್ ಬ್ಯಾಂಕ್ಗಳಲ್ಲಿ ದಿನೇದಿನೆ ರಕ್ತದ ಸಂಗ್ರಹ ಕುಸಿಯುತ್ತಿದ್ದು, ರಕ್ತಕ್ಕಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಕೋಲಾರದಲ್ಲಿ ಜಿಲ್ಲಾಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ, ಜಾಲಪ್ಪ ಆಸ್ಪತ್ರೆ ಸೇರಿದಂತೆ ಒಟ್ಟು 4 ಬ್ಲಡ್ ಬ್ಯಾಂಕ್ಗಳಿವೆ. ಆದ್ರೆ ಎಲ್ಲಾ ಬ್ಲಡ್ ಬ್ಯಾಂಕ್ಗಳಲ್ಲೂ ರಕ್ತದ ಕೊರತೆ ಉಂಟಾಗಿದೆ. ಈ ಮೊದಲು ರಾಜಕೀಯ ಕಾರಣಕ್ಕೆ, ಗಣ್ಯರ ಹುಟ್ಟುಹಬ್ಬರ ಆಚರಣೆ ನೆಪದಲ್ಲಿ ರಕ್ತದಾನ ಶಿಬಿರಗಳನ್ನ ಆಯೋಜಿಸಲಾಗ್ತಿತ್ತು. ಆದ್ರೆ ಇತ್ತೀಚಿಗೆ ಬ್ಲಡ್ ಕ್ಯಾಂಪ್ಗಳು ಕಡಿಮೆಯಾಗಿವೆ. ಕೋಲಾರದಲ್ಲಿ ಪ್ರತಿ ತಿಂಗಳು ಕನಿಷ್ಠ 350 ರಿಂದ 400 ಯೂನಿಟ್ ರಕ್ತದ ಅಗತ್ಯವಿದೆ. ಆದ್ರೆ 60 ರಿಂದ 80 ಯೂನಿಟ್ ರಕ್ತದ ಕೊರತೆ ಉಂಟಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ರಕ್ತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿಫಲವಾಗಿದೆ. ಸಂಘ-ಸಂಸ್ಥೆಗಳ ಜೊತೆಗೂಡಿ ವಿಶೇಷ ಕಾರ್ಯಕ್ರಮಗಳ ಮೂಲಕ ರಕ್ತದಾನಕ್ಕೆ ಜನರನ್ನ ಪ್ರೇರೇಪಿಸಬೇಕು.ಇನ್ನಾದ್ರೂ ಆರೋಗ್ಯಾಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದಲ್ಲಿ ರಕ್ತದ ಸಂಗ್ರಹಕ್ಕೆ ಕ್ರಮಕೈಗೊಳ್ಳಬೇಕಿದೆ.

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿಯಲ್ಲಿ ಅದ್ಧೂರಿ ಮಕ್ಕಳ ದಿನಾಚರಣೆ: ಸುವರ್ಣನ್ಯೂಸ್, ಕನ್ನಡಪ್ರಭ ಸಹಯೋಗದಲ್ಲಿ ಕಾರ್ಯಕ್ರಮ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more