ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

Published : Nov 30, 2023, 10:17 AM IST

ಅಪಘಾತವಾದಾಗ ಅಥವಾ ಮತ್ತಿತ್ತರ ಸಂದರ್ಭಗಳಲ್ಲಿ ರೋಗಿಗಳ ಜೀವ ಉಳಿಸಲು ರಕ್ತದ ತುರ್ತು ಅಗತ್ಯವಿರುತ್ತೆ. ಹೀಗಾಗೇ ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತ ಶೇಖರಿಸಿಡಲಾಗುತ್ತದೆ. ಆದ್ರೆ ಕೋಲಾರ ಜಿಲ್ಲೆಯ ಬ್ಲಡ್ ಬ್ಯಾಂಕ್‌ಗಳು ಮಾತ್ರ ರಕ್ತದ ಕೊರತೆ ಎದುರಿಸುತ್ತಿವೆ.   

ರಕ್ತದಾನ ಮಾಡುವಂತೆ ಸಂಘ-ಸಂಸ್ಥೆಗಳು, ಆಸ್ಪತ್ರೆಗಳು (Hospitals) ಆಗ್ಗಾಗ್ಗೆ ಅಭಿಯಾನ ನಡೆಸುತ್ತಲೇ ಇರುತ್ತವೆ. ಯಾಕಂದ್ರೆ ಅಪಘಾತಗೊಂಡ ವ್ಯಕ್ತಿ ಅಥವಾ ರಕ್ತಹೀನತೆಯಿಂದ ಬಳಲುತ್ತಿರುವ ರೋಗಿ ಜೀವ ಉಳಿಸಲು ರಕ್ತ ತುರ್ತಾಗಿ ಬೇಕಾಗಿರುತ್ತದೆ. ಆದ್ದರಿಂದಲೇ ಬ್ಲಡ್ ಬ್ಯಾಂಕ್‌ಗಳಲ್ಲಿ(Blood bank) ಹೆಚ್ಚಿನ ಪ್ರಮಾಣದ ರಕ್ತ ಶೇಖರಣೆಗೆ ಕ್ರಮವಹಿಸಲಾಗುತ್ತದೆ. ಆದ್ರೆ ಬಯಲುಸೀಮೆ ಕೋಲಾರದಲ್ಲಿ(Kolar) ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಬ್ಲಡ್ ಬ್ಯಾಂಕ್ಗಳಲ್ಲಿ ದಿನೇದಿನೆ ರಕ್ತದ ಸಂಗ್ರಹ ಕುಸಿಯುತ್ತಿದ್ದು, ರಕ್ತಕ್ಕಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಕೋಲಾರದಲ್ಲಿ ಜಿಲ್ಲಾಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ, ಜಾಲಪ್ಪ ಆಸ್ಪತ್ರೆ ಸೇರಿದಂತೆ ಒಟ್ಟು 4 ಬ್ಲಡ್ ಬ್ಯಾಂಕ್ಗಳಿವೆ. ಆದ್ರೆ ಎಲ್ಲಾ ಬ್ಲಡ್ ಬ್ಯಾಂಕ್ಗಳಲ್ಲೂ ರಕ್ತದ ಕೊರತೆ ಉಂಟಾಗಿದೆ. ಈ ಮೊದಲು ರಾಜಕೀಯ ಕಾರಣಕ್ಕೆ, ಗಣ್ಯರ ಹುಟ್ಟುಹಬ್ಬರ ಆಚರಣೆ ನೆಪದಲ್ಲಿ ರಕ್ತದಾನ ಶಿಬಿರಗಳನ್ನ ಆಯೋಜಿಸಲಾಗ್ತಿತ್ತು. ಆದ್ರೆ ಇತ್ತೀಚಿಗೆ ಬ್ಲಡ್ ಕ್ಯಾಂಪ್ಗಳು ಕಡಿಮೆಯಾಗಿವೆ. ಕೋಲಾರದಲ್ಲಿ ಪ್ರತಿ ತಿಂಗಳು ಕನಿಷ್ಠ 350 ರಿಂದ 400 ಯೂನಿಟ್ ರಕ್ತದ ಅಗತ್ಯವಿದೆ. ಆದ್ರೆ 60 ರಿಂದ 80 ಯೂನಿಟ್ ರಕ್ತದ ಕೊರತೆ ಉಂಟಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ರಕ್ತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿಫಲವಾಗಿದೆ. ಸಂಘ-ಸಂಸ್ಥೆಗಳ ಜೊತೆಗೂಡಿ ವಿಶೇಷ ಕಾರ್ಯಕ್ರಮಗಳ ಮೂಲಕ ರಕ್ತದಾನಕ್ಕೆ ಜನರನ್ನ ಪ್ರೇರೇಪಿಸಬೇಕು.ಇನ್ನಾದ್ರೂ ಆರೋಗ್ಯಾಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದಲ್ಲಿ ರಕ್ತದ ಸಂಗ್ರಹಕ್ಕೆ ಕ್ರಮಕೈಗೊಳ್ಳಬೇಕಿದೆ.

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿಯಲ್ಲಿ ಅದ್ಧೂರಿ ಮಕ್ಕಳ ದಿನಾಚರಣೆ: ಸುವರ್ಣನ್ಯೂಸ್, ಕನ್ನಡಪ್ರಭ ಸಹಯೋಗದಲ್ಲಿ ಕಾರ್ಯಕ್ರಮ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more