ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

ರಕ್ತದಾನಿಗಳ ಕೊರತೆ, ಬರಿದಾಗುತ್ತಿವೆ ಬ್ಲಡ್ ಬ್ಯಾಂಕ್‌ಗಳು: ತುರ್ತು ಪರಿಸ್ಥಿತಿಯಲ್ಲಿ ಬ್ಲಡ್‌ಗಾಗಿ ರೋಗಿಗಳ ಪರದಾಟ

Published : Nov 30, 2023, 10:17 AM IST

ಅಪಘಾತವಾದಾಗ ಅಥವಾ ಮತ್ತಿತ್ತರ ಸಂದರ್ಭಗಳಲ್ಲಿ ರೋಗಿಗಳ ಜೀವ ಉಳಿಸಲು ರಕ್ತದ ತುರ್ತು ಅಗತ್ಯವಿರುತ್ತೆ. ಹೀಗಾಗೇ ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತ ಶೇಖರಿಸಿಡಲಾಗುತ್ತದೆ. ಆದ್ರೆ ಕೋಲಾರ ಜಿಲ್ಲೆಯ ಬ್ಲಡ್ ಬ್ಯಾಂಕ್‌ಗಳು ಮಾತ್ರ ರಕ್ತದ ಕೊರತೆ ಎದುರಿಸುತ್ತಿವೆ.   

ರಕ್ತದಾನ ಮಾಡುವಂತೆ ಸಂಘ-ಸಂಸ್ಥೆಗಳು, ಆಸ್ಪತ್ರೆಗಳು (Hospitals) ಆಗ್ಗಾಗ್ಗೆ ಅಭಿಯಾನ ನಡೆಸುತ್ತಲೇ ಇರುತ್ತವೆ. ಯಾಕಂದ್ರೆ ಅಪಘಾತಗೊಂಡ ವ್ಯಕ್ತಿ ಅಥವಾ ರಕ್ತಹೀನತೆಯಿಂದ ಬಳಲುತ್ತಿರುವ ರೋಗಿ ಜೀವ ಉಳಿಸಲು ರಕ್ತ ತುರ್ತಾಗಿ ಬೇಕಾಗಿರುತ್ತದೆ. ಆದ್ದರಿಂದಲೇ ಬ್ಲಡ್ ಬ್ಯಾಂಕ್‌ಗಳಲ್ಲಿ(Blood bank) ಹೆಚ್ಚಿನ ಪ್ರಮಾಣದ ರಕ್ತ ಶೇಖರಣೆಗೆ ಕ್ರಮವಹಿಸಲಾಗುತ್ತದೆ. ಆದ್ರೆ ಬಯಲುಸೀಮೆ ಕೋಲಾರದಲ್ಲಿ(Kolar) ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಬ್ಲಡ್ ಬ್ಯಾಂಕ್ಗಳಲ್ಲಿ ದಿನೇದಿನೆ ರಕ್ತದ ಸಂಗ್ರಹ ಕುಸಿಯುತ್ತಿದ್ದು, ರಕ್ತಕ್ಕಾಗಿ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಕೋಲಾರದಲ್ಲಿ ಜಿಲ್ಲಾಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ, ಜಾಲಪ್ಪ ಆಸ್ಪತ್ರೆ ಸೇರಿದಂತೆ ಒಟ್ಟು 4 ಬ್ಲಡ್ ಬ್ಯಾಂಕ್ಗಳಿವೆ. ಆದ್ರೆ ಎಲ್ಲಾ ಬ್ಲಡ್ ಬ್ಯಾಂಕ್ಗಳಲ್ಲೂ ರಕ್ತದ ಕೊರತೆ ಉಂಟಾಗಿದೆ. ಈ ಮೊದಲು ರಾಜಕೀಯ ಕಾರಣಕ್ಕೆ, ಗಣ್ಯರ ಹುಟ್ಟುಹಬ್ಬರ ಆಚರಣೆ ನೆಪದಲ್ಲಿ ರಕ್ತದಾನ ಶಿಬಿರಗಳನ್ನ ಆಯೋಜಿಸಲಾಗ್ತಿತ್ತು. ಆದ್ರೆ ಇತ್ತೀಚಿಗೆ ಬ್ಲಡ್ ಕ್ಯಾಂಪ್ಗಳು ಕಡಿಮೆಯಾಗಿವೆ. ಕೋಲಾರದಲ್ಲಿ ಪ್ರತಿ ತಿಂಗಳು ಕನಿಷ್ಠ 350 ರಿಂದ 400 ಯೂನಿಟ್ ರಕ್ತದ ಅಗತ್ಯವಿದೆ. ಆದ್ರೆ 60 ರಿಂದ 80 ಯೂನಿಟ್ ರಕ್ತದ ಕೊರತೆ ಉಂಟಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ರಕ್ತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿಫಲವಾಗಿದೆ. ಸಂಘ-ಸಂಸ್ಥೆಗಳ ಜೊತೆಗೂಡಿ ವಿಶೇಷ ಕಾರ್ಯಕ್ರಮಗಳ ಮೂಲಕ ರಕ್ತದಾನಕ್ಕೆ ಜನರನ್ನ ಪ್ರೇರೇಪಿಸಬೇಕು.ಇನ್ನಾದ್ರೂ ಆರೋಗ್ಯಾಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದಲ್ಲಿ ರಕ್ತದ ಸಂಗ್ರಹಕ್ಕೆ ಕ್ರಮಕೈಗೊಳ್ಳಬೇಕಿದೆ.

ಇದನ್ನೂ ವೀಕ್ಷಿಸಿ:  ಹುಬ್ಬಳ್ಳಿಯಲ್ಲಿ ಅದ್ಧೂರಿ ಮಕ್ಕಳ ದಿನಾಚರಣೆ: ಸುವರ್ಣನ್ಯೂಸ್, ಕನ್ನಡಪ್ರಭ ಸಹಯೋಗದಲ್ಲಿ ಕಾರ್ಯಕ್ರಮ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more