ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

Published : Jun 17, 2024, 04:21 PM ISTUpdated : Jun 17, 2024, 04:22 PM IST

ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು ಕೇಂದ್ರ ಸರ್ಕಾರದ ಪ್ರತಿಭಟನೆ ಮಾಡಬೇಕು ಎಂದು ಸಿಎಂ ಕಿಡಿಕಾರಿದ್ದಾರೆ.
 

ಪ್ರಧಾನಿ ಮೋದಿ ತೈಲ ದರ ಇಳಿಕೆ ಮಾಡ್ತೇವೆ ಎಂದಿದ್ರು, ಆದರೆ ಇಳಿಕೆ ಮಾಡಿಲ್ಲ. 72 ರೂ. ಇದ್ದ ಪೆಟ್ರೋಲ್​ 104 ರೂ. ಮಾಡಿದ್ದಾರೆ. 58 ರೂ. ಇದ್ದ ಡೀಸೆಲ್​ ಬೆಲೆ 98 ರೂ. ಮಾಡಿದ್ದು ಮೋದಿ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಚ್ಚಾ ತೈಲದ ಬೆಲೆ ಈಗ 85.32 ಡಾಲರ್​ ಇದೆ. ಮನಮೋಹನ್​ ಸಿಂಗ್​ ಕಾಲದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದರೆ. ಸ್ಥಳೀಯವಾಗಿಯೂ ತೈಲ ಬೆಲೆ ಏರಿಕೆಯಾಗುತ್ತೆ ಎಂದು ಸಿಎಂ ಹೇಳಿದರು. ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು(BJP) ಯಾರ ವಿರುದ್ಧ ಪ್ರತಿಭಟನೆ(Protest) ಮಾಡಬೇಕು? ಮನಮೋಹನ್​ ಸಿಂಗ್ ಕಾಲದಲ್ಲಿ ಗ್ಯಾಸ್​ 410 ರೂ. ಇತ್ತು. ಮೋದಿ ಕಾಲದಲ್ಲಿ ಗ್ಯಾಸ್​ ಬೆಲೆ 805 ರೂ. ಆಗಿದೆ. GSTಯಿಂದ ತೆರಿಗೆ ಹೆಚ್ಚಿಸುವ ಸ್ವಾತಂತ್ರ್ಯ ಕಡಿಮೆ, ಸ್ಟ್ಯಾಂಪ್​ ಡ್ಯೂಟಿ, ಇಂಧನ, ಮೋಟಾರ್​ ಟ್ಯಾಕ್ಸ್​ ಸಂಗ್ರಹಿಸಬಹುದು. ಬಿಜೆಪಿ - ಜೆಡಿಎಸ್(JDS) ಪೆಟ್ರೋಲ್ ಡೀಸೆಲ್ ಬೆಲೆ ಎರಿಕೆ ಮಾಡಿದ್ದಾರೆ ಎಂದು ಪ್ರತಿಭಟನೆ ಮಾಡ್ತಿದ್ದಾರೆ. ಪೆಟ್ರೋಲ್ ಮೇಲೆ 3 ರೂಪಾಯಿ ಡಿಸೇಲ್ 3 ರೂಪಾಯಿ ಜಾಸ್ತಿ(petrol diesel price) ಮಾಡಿದ್ದೇವೆ. ಇವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯ ಸರ್ಕಾರದ ವಿರುದ್ಧ ಅಲ್ಲ ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more