ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

Published : Jun 17, 2024, 04:21 PM ISTUpdated : Jun 17, 2024, 04:22 PM IST

ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು ಕೇಂದ್ರ ಸರ್ಕಾರದ ಪ್ರತಿಭಟನೆ ಮಾಡಬೇಕು ಎಂದು ಸಿಎಂ ಕಿಡಿಕಾರಿದ್ದಾರೆ.
 

ಪ್ರಧಾನಿ ಮೋದಿ ತೈಲ ದರ ಇಳಿಕೆ ಮಾಡ್ತೇವೆ ಎಂದಿದ್ರು, ಆದರೆ ಇಳಿಕೆ ಮಾಡಿಲ್ಲ. 72 ರೂ. ಇದ್ದ ಪೆಟ್ರೋಲ್​ 104 ರೂ. ಮಾಡಿದ್ದಾರೆ. 58 ರೂ. ಇದ್ದ ಡೀಸೆಲ್​ ಬೆಲೆ 98 ರೂ. ಮಾಡಿದ್ದು ಮೋದಿ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಚ್ಚಾ ತೈಲದ ಬೆಲೆ ಈಗ 85.32 ಡಾಲರ್​ ಇದೆ. ಮನಮೋಹನ್​ ಸಿಂಗ್​ ಕಾಲದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದರೆ. ಸ್ಥಳೀಯವಾಗಿಯೂ ತೈಲ ಬೆಲೆ ಏರಿಕೆಯಾಗುತ್ತೆ ಎಂದು ಸಿಎಂ ಹೇಳಿದರು. ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು(BJP) ಯಾರ ವಿರುದ್ಧ ಪ್ರತಿಭಟನೆ(Protest) ಮಾಡಬೇಕು? ಮನಮೋಹನ್​ ಸಿಂಗ್ ಕಾಲದಲ್ಲಿ ಗ್ಯಾಸ್​ 410 ರೂ. ಇತ್ತು. ಮೋದಿ ಕಾಲದಲ್ಲಿ ಗ್ಯಾಸ್​ ಬೆಲೆ 805 ರೂ. ಆಗಿದೆ. GSTಯಿಂದ ತೆರಿಗೆ ಹೆಚ್ಚಿಸುವ ಸ್ವಾತಂತ್ರ್ಯ ಕಡಿಮೆ, ಸ್ಟ್ಯಾಂಪ್​ ಡ್ಯೂಟಿ, ಇಂಧನ, ಮೋಟಾರ್​ ಟ್ಯಾಕ್ಸ್​ ಸಂಗ್ರಹಿಸಬಹುದು. ಬಿಜೆಪಿ - ಜೆಡಿಎಸ್(JDS) ಪೆಟ್ರೋಲ್ ಡೀಸೆಲ್ ಬೆಲೆ ಎರಿಕೆ ಮಾಡಿದ್ದಾರೆ ಎಂದು ಪ್ರತಿಭಟನೆ ಮಾಡ್ತಿದ್ದಾರೆ. ಪೆಟ್ರೋಲ್ ಮೇಲೆ 3 ರೂಪಾಯಿ ಡಿಸೇಲ್ 3 ರೂಪಾಯಿ ಜಾಸ್ತಿ(petrol diesel price) ಮಾಡಿದ್ದೇವೆ. ಇವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯ ಸರ್ಕಾರದ ವಿರುದ್ಧ ಅಲ್ಲ ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more