ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

Published : Jun 17, 2024, 04:21 PM ISTUpdated : Jun 17, 2024, 04:22 PM IST

ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು ಕೇಂದ್ರ ಸರ್ಕಾರದ ಪ್ರತಿಭಟನೆ ಮಾಡಬೇಕು ಎಂದು ಸಿಎಂ ಕಿಡಿಕಾರಿದ್ದಾರೆ.
 

ಪ್ರಧಾನಿ ಮೋದಿ ತೈಲ ದರ ಇಳಿಕೆ ಮಾಡ್ತೇವೆ ಎಂದಿದ್ರು, ಆದರೆ ಇಳಿಕೆ ಮಾಡಿಲ್ಲ. 72 ರೂ. ಇದ್ದ ಪೆಟ್ರೋಲ್​ 104 ರೂ. ಮಾಡಿದ್ದಾರೆ. 58 ರೂ. ಇದ್ದ ಡೀಸೆಲ್​ ಬೆಲೆ 98 ರೂ. ಮಾಡಿದ್ದು ಮೋದಿ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಚ್ಚಾ ತೈಲದ ಬೆಲೆ ಈಗ 85.32 ಡಾಲರ್​ ಇದೆ. ಮನಮೋಹನ್​ ಸಿಂಗ್​ ಕಾಲದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದರೆ. ಸ್ಥಳೀಯವಾಗಿಯೂ ತೈಲ ಬೆಲೆ ಏರಿಕೆಯಾಗುತ್ತೆ ಎಂದು ಸಿಎಂ ಹೇಳಿದರು. ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು(BJP) ಯಾರ ವಿರುದ್ಧ ಪ್ರತಿಭಟನೆ(Protest) ಮಾಡಬೇಕು? ಮನಮೋಹನ್​ ಸಿಂಗ್ ಕಾಲದಲ್ಲಿ ಗ್ಯಾಸ್​ 410 ರೂ. ಇತ್ತು. ಮೋದಿ ಕಾಲದಲ್ಲಿ ಗ್ಯಾಸ್​ ಬೆಲೆ 805 ರೂ. ಆಗಿದೆ. GSTಯಿಂದ ತೆರಿಗೆ ಹೆಚ್ಚಿಸುವ ಸ್ವಾತಂತ್ರ್ಯ ಕಡಿಮೆ, ಸ್ಟ್ಯಾಂಪ್​ ಡ್ಯೂಟಿ, ಇಂಧನ, ಮೋಟಾರ್​ ಟ್ಯಾಕ್ಸ್​ ಸಂಗ್ರಹಿಸಬಹುದು. ಬಿಜೆಪಿ - ಜೆಡಿಎಸ್(JDS) ಪೆಟ್ರೋಲ್ ಡೀಸೆಲ್ ಬೆಲೆ ಎರಿಕೆ ಮಾಡಿದ್ದಾರೆ ಎಂದು ಪ್ರತಿಭಟನೆ ಮಾಡ್ತಿದ್ದಾರೆ. ಪೆಟ್ರೋಲ್ ಮೇಲೆ 3 ರೂಪಾಯಿ ಡಿಸೇಲ್ 3 ರೂಪಾಯಿ ಜಾಸ್ತಿ(petrol diesel price) ಮಾಡಿದ್ದೇವೆ. ಇವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯ ಸರ್ಕಾರದ ವಿರುದ್ಧ ಅಲ್ಲ ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
Read more