ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

ಬಿಜೆಪಿ, ಜೆಡಿಎಸ್‌ನವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯದ ವಿರುದ್ಧ ಅಲ್ಲ ಕೇಂದ್ರದ ವಿರುದ್ಧ: ಸಿಎಂ

Published : Jun 17, 2024, 04:21 PM ISTUpdated : Jun 17, 2024, 04:22 PM IST

ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು ಕೇಂದ್ರ ಸರ್ಕಾರದ ಪ್ರತಿಭಟನೆ ಮಾಡಬೇಕು ಎಂದು ಸಿಎಂ ಕಿಡಿಕಾರಿದ್ದಾರೆ.
 

ಪ್ರಧಾನಿ ಮೋದಿ ತೈಲ ದರ ಇಳಿಕೆ ಮಾಡ್ತೇವೆ ಎಂದಿದ್ರು, ಆದರೆ ಇಳಿಕೆ ಮಾಡಿಲ್ಲ. 72 ರೂ. ಇದ್ದ ಪೆಟ್ರೋಲ್​ 104 ರೂ. ಮಾಡಿದ್ದಾರೆ. 58 ರೂ. ಇದ್ದ ಡೀಸೆಲ್​ ಬೆಲೆ 98 ರೂ. ಮಾಡಿದ್ದು ಮೋದಿ ಎಂದು ಸಿಎಂ ಸಿದ್ದರಾಮಯ್ಯ(Siddaramaiah) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಚ್ಚಾ ತೈಲದ ಬೆಲೆ ಈಗ 85.32 ಡಾಲರ್​ ಇದೆ. ಮನಮೋಹನ್​ ಸಿಂಗ್​ ಕಾಲದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದರೆ. ಸ್ಥಳೀಯವಾಗಿಯೂ ತೈಲ ಬೆಲೆ ಏರಿಕೆಯಾಗುತ್ತೆ ಎಂದು ಸಿಎಂ ಹೇಳಿದರು. ಕಚ್ಚಾತೈಲದ ಬೆಲೆ ಕಡಿಮೆ ಇದ್ರು, ತೈಲ ಬೆಲೆ ಏರಿಸಿದ್ರು. ಬಿಜೆಪಿಯವರು(BJP) ಯಾರ ವಿರುದ್ಧ ಪ್ರತಿಭಟನೆ(Protest) ಮಾಡಬೇಕು? ಮನಮೋಹನ್​ ಸಿಂಗ್ ಕಾಲದಲ್ಲಿ ಗ್ಯಾಸ್​ 410 ರೂ. ಇತ್ತು. ಮೋದಿ ಕಾಲದಲ್ಲಿ ಗ್ಯಾಸ್​ ಬೆಲೆ 805 ರೂ. ಆಗಿದೆ. GSTಯಿಂದ ತೆರಿಗೆ ಹೆಚ್ಚಿಸುವ ಸ್ವಾತಂತ್ರ್ಯ ಕಡಿಮೆ, ಸ್ಟ್ಯಾಂಪ್​ ಡ್ಯೂಟಿ, ಇಂಧನ, ಮೋಟಾರ್​ ಟ್ಯಾಕ್ಸ್​ ಸಂಗ್ರಹಿಸಬಹುದು. ಬಿಜೆಪಿ - ಜೆಡಿಎಸ್(JDS) ಪೆಟ್ರೋಲ್ ಡೀಸೆಲ್ ಬೆಲೆ ಎರಿಕೆ ಮಾಡಿದ್ದಾರೆ ಎಂದು ಪ್ರತಿಭಟನೆ ಮಾಡ್ತಿದ್ದಾರೆ. ಪೆಟ್ರೋಲ್ ಮೇಲೆ 3 ರೂಪಾಯಿ ಡಿಸೇಲ್ 3 ರೂಪಾಯಿ ಜಾಸ್ತಿ(petrol diesel price) ಮಾಡಿದ್ದೇವೆ. ಇವರು ಪ್ರತಿಭಟನೆ ಮಾಡಬೇಕಿರೋದು ರಾಜ್ಯ ಸರ್ಕಾರದ ವಿರುದ್ಧ ಅಲ್ಲ ಕೇಂದ್ರ ಸರ್ಕಾರದ ವಿರುದ್ಧ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ:  Renukaswamy Murder Case: ರಾಜು ಎಂಬಾತನ ಬಳಿಯಿದ್ದ ಮೆಗ್ಗಾರ್‌ನಿಂದ ರೇಣುಕಾಸ್ವಾಮಿಗೆ ಶಾಕ್..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more