ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು: ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ

Published : May 24, 2024, 09:18 AM IST

ಅಂತರ್ಜಾತಿ ವಿವಾಹಕ್ಕೆ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹ
ತಮ್ಮ ಪ್ರೇಮಾಂಕುರದ ಕಹಾನಿ ಬಿಚ್ಚಿಟ್ಟ ಸಿದ್ದರಾಮಯ್ಯ
ಅಂತರ್ಜಾತಿ ವಿವಾಹ ನೋಂದಣಿ ವೇದಿಕೆಯಲ್ಲಿ ಸಿಎಂ ಮಾತು 
 

ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ(Siddaramaiah) ತಮ್ಮ ಪ್ರೇಮಾಂಕುರದ ಕಹಾನಿಯನ್ನು ಮೈಸೂರಿನಲ್ಲಿ(Mysore) ಬಿಚ್ಚಿಟ್ಟಿದ್ದಾರೆ. ಅಂತರ್ಜಾತಿ ವಿವಾಹ ನೋಂದಣಿ ವೇದಿಕೆಯಲ್ಲಿ ಸಿಎಂ ತಮ್ಮ ಪ್ರೀತಿ ಕಥೆಯನ್ನು(Love Story) ಹೇಳಿದ್ದಾರೆ. ಅಲ್ಲದೇ ಅಂತರ್ಜಾತಿ ವಿವಾಹಕ್ಕೆ(Inter caste marriage) ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹವನ್ನು ನೀಡಿದ್ದಾರೆ. ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ನನಗೂ ಅಂತರ್ಜಾತಿ ವಿವಾಹವಾಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಹುಡುಗಿ ಪ್ರೀತಿಸಿದೆ. ಬೇರೆ ಜಾತಿಯ ಸ್ನೇಹಿತೆಯನ್ನ ಮದುವೆ ಆಗಬೇಕೆಂದುಕೊಂಡಿದ್ದೆ. ಆದರೆ ಆ ಹುಡುಗಿಯೂ ಒಪ್ಪಲಿಲ್ಲ, ಮನೆಯವರೂ ಒಪ್ಪಲಿಲ್ಲ. ಹಾಗಾಗಿ ನಮ್ಮ ಜನಾಂಗದ ಹುಡುಗಿಯನ್ನೇ ಮದುವೆ ಆಗಬೇಕಾಯಿತು ಎಂದು ಸಿಎಂ ತಮ್ಮ ಕಾಲೇಜು ದಿನದ ಪ್ರೀತಿ ವಿಚಾರವನ್ನು ನೆನಪು ಮಾಡಿಕೊಂಡರು.

ಇದನ್ನೂ ವೀಕ್ಷಿಸಿ:  ಚಿಕ್ಕೋಡಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು..ಒಬ್ಬ ವ್ಯಕ್ತಿ, ಓರ್ವ ಮಹಿಳೆ ಬಲಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!