ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

Published : Jul 05, 2024, 04:36 PM IST

ಹಗರಣದಲ್ಲಿ ಸಿದ್ದರಾಮಯ್ಯ ಪತ್ನಿ ಹೆಸರು ಕೇಳಿ ಬಂದದ್ದೇಕೆ..?
3 ಎಕರೆ 16 ಗುಂಟೆ ಜಮೀನು ಸುತ್ತ ವಿವಾದ ಭುಗಿಲೆದ್ದದ್ದೇಕೆ..?
ಮುಡಾ ಮಾಡಿದ ಎಡವಟ್ಟು..ಕೈ ಸರ್ಕಾರಕ್ಕೆ ಉರುಳಾಯ್ತಾ..?

ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿಯ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹಗರಣದ ಉರುಳು ಸುತ್ತಿಕೊಂಡಿದೆ. ಅದೇ ಮುಡಾ( Mysore Muda scam) ಮಾಯಾಜಾಲ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ತವರು ಜಿಲ್ಲೆಯಲ್ಲೇ ಭುಗಿಲೆದ್ದು ನಿಂತಿರೋ ಹಗರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ(Parvathi) ಹೆಸರು ಈ ಪ್ರಕರಣದಲ್ಲಿ ಥಳಕು ಹಾಕಿಕೊಂಡಿದ್ದು, ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಹೀಗೆ ನೇರವಾಗಿ ಸಿದ್ದರಾಮಯ್ಯನವರ ವಿರುದ್ಧವೇ ಆರೋಪ ಮಾಡಲು ಕಾರಣವಿದೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ ಹೆಸರು ಈ ಹಗರಣದಲ್ಲಿ ಕೇಳಿ ಬಂದಿರೋದೇ ಇದಕ್ಕೆ ಕಾರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿ. ಇವ್ರು ಸಾರ್ವಜನಿಕವಾಗಿ ಕಾಣಿಸಿಕೊಳ್ಳೋದು ತುಂಬಾ ಕಡಿಮೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ಬಾರಿ ಪ್ರಮಾಣವಚನ ಸ್ವೀಕರಿಸಿದಾಗ್ಲೂ ಆ ಸಮಾರಂಭದಿಂದಿಂದ ದೂರವೇ ಉಳಿದಿದ್ದವರು ಪತ್ನಿ ಪಾರ್ವತಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಯ ಹೆಸರಲ್ಲಿದ್ದ 3.16 ಎಕರೆ ಜಮೀನು. ಅದು ಡಿನೋಟಿಫೈ ಆಗಿದ್ದ ಜಾಗ. ಅಲ್ಲಿ ಬಡಾವಣೆ ನಿರ್ಮಿಸಲು ಜಮೀನನ್ನು ಮುಡಾ ಅಭಿವೃದ್ಧಿ ಪಡಿಸಿತ್ತು. ಇದು ಗೊತ್ತಾಗುತ್ತಿದ್ದಂತೆ, ಬದಲಿ ಜಮೀನು ನೀಡುವಂತೆ ಮುಡಾಗೆ ಪತ್ರ ಬರೀತಾರೆ ಸಿಎಂ ಪತ್ನಿ ಪಾರ್ವತಿ. 

ಇದನ್ನೂ ವೀಕ್ಷಿಸಿ:  ನಾವೇ ಮಗನ ಮಣ್ಣು ಮಾಡುವಂತ ಸ್ಥಿತಿ ಬಂತು, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ತಾಯಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more