ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

ಸಿಬಿಐ ತನಿಖೆಗೆ ಬಿಜೆಪಿ ಪಟ್ಟು..ಸಿದ್ದರಾಮಯ್ಯ ಹೇಳಿದ 60 ಕೋಟಿಯ ರಹಸ್ಯವೇನು ?

Published : Jul 05, 2024, 04:36 PM IST

ಹಗರಣದಲ್ಲಿ ಸಿದ್ದರಾಮಯ್ಯ ಪತ್ನಿ ಹೆಸರು ಕೇಳಿ ಬಂದದ್ದೇಕೆ..?
3 ಎಕರೆ 16 ಗುಂಟೆ ಜಮೀನು ಸುತ್ತ ವಿವಾದ ಭುಗಿಲೆದ್ದದ್ದೇಕೆ..?
ಮುಡಾ ಮಾಡಿದ ಎಡವಟ್ಟು..ಕೈ ಸರ್ಕಾರಕ್ಕೆ ಉರುಳಾಯ್ತಾ..?

ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿಯ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಹಗರಣದ ಉರುಳು ಸುತ್ತಿಕೊಂಡಿದೆ. ಅದೇ ಮುಡಾ( Mysore Muda scam) ಮಾಯಾಜಾಲ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ತವರು ಜಿಲ್ಲೆಯಲ್ಲೇ ಭುಗಿಲೆದ್ದು ನಿಂತಿರೋ ಹಗರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ(Parvathi) ಹೆಸರು ಈ ಪ್ರಕರಣದಲ್ಲಿ ಥಳಕು ಹಾಕಿಕೊಂಡಿದ್ದು, ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಹೀಗೆ ನೇರವಾಗಿ ಸಿದ್ದರಾಮಯ್ಯನವರ ವಿರುದ್ಧವೇ ಆರೋಪ ಮಾಡಲು ಕಾರಣವಿದೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರ ಹೆಸರು ಈ ಹಗರಣದಲ್ಲಿ ಕೇಳಿ ಬಂದಿರೋದೇ ಇದಕ್ಕೆ ಕಾರಣ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿ. ಇವ್ರು ಸಾರ್ವಜನಿಕವಾಗಿ ಕಾಣಿಸಿಕೊಳ್ಳೋದು ತುಂಬಾ ಕಡಿಮೆ. ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ಬಾರಿ ಪ್ರಮಾಣವಚನ ಸ್ವೀಕರಿಸಿದಾಗ್ಲೂ ಆ ಸಮಾರಂಭದಿಂದಿಂದ ದೂರವೇ ಉಳಿದಿದ್ದವರು ಪತ್ನಿ ಪಾರ್ವತಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಯ ಹೆಸರಲ್ಲಿದ್ದ 3.16 ಎಕರೆ ಜಮೀನು. ಅದು ಡಿನೋಟಿಫೈ ಆಗಿದ್ದ ಜಾಗ. ಅಲ್ಲಿ ಬಡಾವಣೆ ನಿರ್ಮಿಸಲು ಜಮೀನನ್ನು ಮುಡಾ ಅಭಿವೃದ್ಧಿ ಪಡಿಸಿತ್ತು. ಇದು ಗೊತ್ತಾಗುತ್ತಿದ್ದಂತೆ, ಬದಲಿ ಜಮೀನು ನೀಡುವಂತೆ ಮುಡಾಗೆ ಪತ್ರ ಬರೀತಾರೆ ಸಿಎಂ ಪತ್ನಿ ಪಾರ್ವತಿ. 

ಇದನ್ನೂ ವೀಕ್ಷಿಸಿ:  ನಾವೇ ಮಗನ ಮಣ್ಣು ಮಾಡುವಂತ ಸ್ಥಿತಿ ಬಂತು, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ತಾಯಿ

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more