ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !

ರೇಷ್ಮೆ ಬೆಳೆ ನಂಬಿದ ರೈತರಿಗೆ ಬಿಗ್‌ ಶಾಕ್‌: ಗೂಡು ಕಟ್ಟದೆ ಹುಳುಗಳ ಸಾವು !

Published : Dec 08, 2023, 10:12 AM IST

ಅವರೆಲ್ಲಾ ದಶಕದಿಂದ ರೇಷ್ಮೆ ಬೆಳೆಯುತ್ತಿದ್ದಾರೆ. ಅದನ್ನೇ ನಂಬಿ ಬದುಕು ನಡೆಸುತ್ತಿದ್ದ ರೈತರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.ಸಾವಿರಾರು ರೂಪಾಯಿ ಖರ್ಚು ಮಾಡಿ ಹಿಪ್ಪುನೆರಳೆ ಸೊಪ್ಪು ಬೆಳದಿದ್ದಾರೆ. ರೇಷ್ಮೆ ಹುಳುಗಳನ್ನು ಖರೀದಿಸಿ ತಂದು, ಅವುಗಳಿಗೆ ಆಹಾರ ನೀಡಿದ್ದಾರೆ. ಆದ್ರೆ ಗೂಡು ಕಟ್ಟುವ ಮುನ್ನವೇ ರೇಷ್ಮೆ ಹುಳುಗಳು ಸಾಯುತ್ತಿವೆ. ಇದು ರೇಷ್ಮೆ ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿದೆ. 

ಹೊಸಹಳ್ಳಿ ಗ್ರಾಮ.. ಯಲಬುರ್ಗಾ ತಾಲೂಕಿನ ಈ ಗ್ರಾಮ, ಕೊಪ್ಪಳ(Koppal) ಜಿಲ್ಲೆಯಲ್ಲೇ ರೇಷ್ಮೆ ಬೆಳೆಗೆ ಸುಪ್ರಸಿದ್ದಯಾಗಿರೋ ಗ್ರಾಮ. ಅದ್ರೆ, ಈಗ ಹೊಸಳ್ಳಿ ಗ್ರಾಮದ ರೇಷ್ಮೆ ಬೆಳೆಗಾರರು(Silk growers) ಕಂಗಾಲಾಗಿದ್ದಾರೆ. ಅದಕ್ಕೆ ಕಾರಣ ಗೂಡು ಕಟ್ಟದೆ ರೇಷ್ಮೆ ಹುಳುಗಳ ಸಾವು. ಹೌದು, ಈ ರೈತರು ಸಾಕಿದ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇನ್ನು ಕೆಲ ಹುಳುಗಳು ಜೀವಂತವಿದ್ರೂ ರೇಷ್ಮೆ ಗೂಡನ್ನೇ ಕಟ್ಟುತ್ತಿಲ್ಲ. ಇದ್ರಿಂದ ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ರೇಷ್ಮೆ ಬೆಳೆದಿದ್ದ ರೈತರು ಕಂಗಾಲಾಗಿದ್ದಾರೆ. ಇಷ್ಟು ವರ್ಷವಿಲ್ಲದ ಈ ಸಮಸ್ಯೆ ಈ ಬಾರಿ ತಲೆದೋರಿದ್ಯಾಕೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಆದ್ರೆ ಇದಕ್ಕೆಲ್ಲ ರೇಷ್ಮೆ ಮೊಟ್ಟೆಗಳ ಗೋಲ್ಮಾಲ್ ಕಾರಣ ಅನ್ನೋದು ರೈತರು (Farmers)ಆರೋಪ.ರೇಷ್ಮೆಮೊಟ್ಟೆ ನೀಡಿದ ಕಂಪನಿಗಳು ಹಣದಾಸೆಗಾಗಿ ಕಳಪೆ ಮೊಟ್ಟೆಗಳನ್ನು ತಂದು, ಮರಿ ಮಾಡಿ ಅವುಗಳನ್ನು ರೈತರಿಗೆ ನೀಡುತ್ತಿದ್ದಾರೆ. ಹೀಗಾಗಿ ಹುಳುಗಳು ಗೂಡು ಕಟ್ಟುತ್ತಿಲ್ಲ ಅನ್ನೋದು ರೈತರ ಆರೋಪ. ,ಆದ್ರೆ ಇದಕ್ಕೆ ರೇಷ್ಮೆ ಇಲಾಖೆ ಅಧಿಕಾರಿಗಳು ಬೇರೆಯದ್ದೇ ಕತೆ ಹೇಳ್ತಿದ್ದಾರೆ. ವಾತಾವರಣದಲ್ಲಿನ ಬದಲಾವಣೆ ಇದಕ್ಕೆಲ್ಲ ಕಾರಣ. ಜೊತೆಗೆ ರೈತರು ವಿವಿಧ ಬೆಳೆಗಳನ್ನು ಬೆಳೆಯಲು ಸಾಕಷ್ಟು ಕೆಮಿಕಲ್ಗಳ ಬಳಕೆ ಮಾಡುತ್ತಿದ್ದಾರೆ. ಅದು ಗಾಳಿಯ ಮೂಲಕ ಹಿಪ್ಪು ನೇರಳೆ ಸೊಪ್ಪಿನ ಮೇಲೆ ಬೀಳುತ್ತಿದೆ. ಕೆಮಿಕಲ್ ಸೇರಿರುವ ಹಿಪ್ಪು ನೇರಳೆ ಸೊಪ್ಪನ್ನು ತಿನ್ನುವುದರಿಂದ ಹುಳುಗಳು ಗೂಡು ಕಟ್ಟುತ್ತಿಲ್ಲಾ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಕಾರಣ ಏನಿದ್ಯೋ ಗೊತ್ತಿಲ್ಲ ಹೊಸಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ರೈತರು ತಂದಿದ್ದ ರೇಷ್ಮೆ ಹುಳುಗಳು ಗೂಡು ಕಟ್ಟದೆ ಸಾಯುತ್ತಿವೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರಿನ ಐತಿಹಾಸಿಕ ದೇಗುಲದ ಗೋಪುರದಲ್ಲಿ ಬಿರುಕು..! ದೊಡ್ಡ ಬಸವ ದೇಗುಲ ಗೋಪುರ ದುರಸ್ಥಿ ಯಾವಾಗ..?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more