ಮಾದಪ್ಪನ ಭಕ್ತರಿಗೆ ಬೆಳ್ಳಿ ರಥ ಎಳೆಯುವ ಸೌಭಾಗ್ಯ: 20 ಲಕ್ಷ ರೂ. ವೆಚ್ಚದಲ್ಲಿ ರಥ ನಿರ್ಮಾಣ

ಮಾದಪ್ಪನ ಭಕ್ತರಿಗೆ ಬೆಳ್ಳಿ ರಥ ಎಳೆಯುವ ಸೌಭಾಗ್ಯ: 20 ಲಕ್ಷ ರೂ. ವೆಚ್ಚದಲ್ಲಿ ರಥ ನಿರ್ಮಾಣ

Published : Feb 07, 2023, 06:19 PM IST

ಪವಾಡ ಪುರುಷ ಮಲೆ ಮಾದಪ್ಪನ ಭಕ್ತರಿಗೆ ಶೀಘ್ರದಲ್ಲೇ ಬೆಳ್ಳಿರಥ ಸೇವೆಗೆ ಲಭ್ಯವಾಗಲಿದೆ. ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ರಥ ನಿರ್ಮಾಣವಾಗಿದೆ.
 

ಇತಿಹಾಸ ಪ್ರಸಿದ್ದ ಪವಾಡಪುರುಷ ಮಲೆ ಮಾದಪ್ಪನ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಯಿಂದಲೂ ಭಕ್ತರ ದಂಡೇ ಹರಿದು ಬರುತ್ತೆ. ಬಂದಂತಹ ಭಕ್ತರು ದೇವರಲ್ಲಿ ನಾನಾ ಹರಕೆ ಹೊತ್ತು ಬರ್ತಾರೆ. ಈಗಾಗ್ಲೇ ಮಹದೇಶ್ವರ ಬೆಟ್ಟದಲ್ಲಿ ಮುಡಿ ಸೇವೆ, ಬಸವ ವಾಹನ, ಹುಲಿ ವಾಹನ, ಚಿನ್ನದ ರಥ ಸೇರಿದಂತೆ ಅನೇಕ ಸೇವೆಗಳಿವೆ. ಭಕ್ತರು ಕೂಡ ಕೂಡ‌ ಹರಕೆ ಹೊತ್ತು ತಮಗಿಷ್ಟವಾದ ಸೇವೆಗಳನ್ನು ನೇರವೆರಿಸಿಕೊಳ್ಳುತ್ತಾ ಹೋಗ್ತಿದ್ದಾರೆ. ಈ ನಡುವೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಭಕ್ತರು ಕೊಟ್ಟಂತಹ ಬೆಳ್ಳಿಯನ್ನು ಕರಗಿಸಿ ಬೆಳ್ಳಿ ರಥ ನಿರ್ಮಿಸಿದೆ. ಇದೀಗ ಮಾದಪ್ಪನ ಭಕ್ತರಿಗೆ ಬೆಳ್ಳಿ ರಥ ಎಳೆಯುವ ಸೌಭಾಗ್ಯವೂ ಕೂಡ ಕೆಲವೇ ದಿನಗಳಲ್ಲಿ ಲಭ್ಯವಾಗಲಿದೆ. ಕಳೆದ ಎರಡು ವರ್ಷಗಳಿಂದಲೂ ಬೆಳ್ಳಿ ರಥ ನಿರ್ಮಾಣ ಕಾರ್ಯ ನಡೆದಿತ್ತು. ಸುಮಾರು 20 ಲಕ್ಷ ರೂ ವೆಚ್ಚದಲ್ಲಿ 533 ಕೆ.ಜಿ. ಬೆಳ್ಳಿ ಬಳಸಿ ರಥ ನಿರ್ಮಿಸಲಾಗ್ತಿದೆ. ಭಕ್ತರು ಹುಂಡಿಗೆ ಹಾಕುವ ಬೆಳ್ಳಿ ಹಾಗೂ ದಾನಿಗಳಿಂದಲೂ ಕೂಡ ಪಡೆದು ರಥ ನಿರ್ಮಿಸಲಾಗಿದೆ. ರಥಕ್ಕೆ ತಗುಲಿರುವ ಖರ್ಚು ವೆಚ್ಚವನ್ನು ದಾನಿಗಳೇ ನೀಡಿದ್ದಾರೆ. ಈ ಹಿನ್ನೆಲೆ ಪ್ರಾಧಿಕಾರ ಸಿಎಂ ಗಮನಕ್ಕೆ ತಂದು ಸೇವೆಗೆ ದರ ನಿಗದಿಪಡಿಸಲು ಚಿಂತನೆ ನಡೆಸಿದೆ. ನಿತ್ಯವೂ ಬೆಳ್ಳಿ ರಥದ ಸೇವೆ ಬೆಳಗ್ಗೆ 9 ಗಂಟೆಗೆ ನಡೆಸಲು ನಿರ್ಧರಿಸಲಾಗಿದೆ. ಇನ್ನುಳಿದಂತೆ ರಾತ್ರಿ ವೇಳೆ ಚಿನ್ನದ ರಥ ಸೇವೆ ನಡೆಯಲಿದೆ.

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more