ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

ಕನ್ನಡಿಗರ ಮನಗೆದ್ದ ಖ್ಯಾತ ಗಾಯಕ: ಕನ್ನಡ ಕೋಗಿಲೆ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ !

Published : Aug 12, 2023, 10:20 AM IST

ಗಾನಕೋಗಿಲೆಯ ಇಂಪಾದ ಗಾನಸುಧೆಗೆ ತಲೆ ದೂಗದವರೇ ಇಲ್ಲ. ಜಾನಪದ ಕಲಾವಿದ ಮಹೇಶ್ ಕಂಠ ಸಿರಿಗೆ ಕೋಟ್ಯಂತರ ಕನ್ನಡಿಗರು ತಲೆ ದೂಗಿ ಮೆಚ್ಚಿಕೊಂಡಿದ್ದಾರೆ. ಆದ್ರೀಗ ಇವರದ್ದೇ ಸಮುದಾಯ ಮಹೇಶ್ ಕುಟುಂಬಕ್ಕೆ ಬಹಿಷ್ಕಾರದ ಶಿಕ್ಷೆ ವಿಧಿಸಿದೆ.

ಚಾಮರಾಜನಗರದ ರಾಮಸಮುದ್ರದ ನಿವಾಸಿ ಗಾಯಕ ಮಹೇಶ್ ದಲಿತ  ಸಮುದಾಯದಕ್ಕೆ ಸೇರಿದವರು. ದಲಿತ ಸಮುದಾಯಕ್ಕೆ(Dalit community) ಮೇಲ್ವರ್ಗದವರಿಂದ ಬಹಿಷ್ಕಾರದಂತ ಶಿಕ್ಷೆಗಳನ್ನು ಕೇಳಿದ್ದೇವೆ. ಆದ್ರಿಲ್ಲಿ ದಲಿತ ಸಮುದಾಯದವರೇ ಗಾಯಕ ಮಹೇಶ್(singer Mahesh) ಕುಟುಂಬ ಸೇರಿದಂತೆ ನಾಲ್ಕು ಕುಟುಂಬಗಳಿಗೆ ಬಹಿಷ್ಕಾರದ ಶಿಕ್ಷೆ ವಿಧಿಸಿವೆ. ಸಮಾರಂಭವೊಂದರಲ್ಲಿ ನನ್ನನ್ನು ಸನ್ಮಾನಿಸಲು ಗ್ರಾಮಸ್ಥರು ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿದ್ರು. ಆದರೆ ಯಜಮಾನರು ನನ್ನ ಹೆಸರನ್ನು ತೆಗೆಸಿ ಅವಮಾನಿಸಿದ್ರು ಎನ್ನುತ್ತಿದ್ದಾರೆ ಕನ್ನಡದ ಕೋಗಿಲೆ(Kannada kogile) ಖ್ಯಾತಿಯ ಮಹೇಶ್. ಕಳೆದ ನಾಲ್ಕು ವರ್ಷಗಳಿಂದ ನಿವೇಶ ವಿವಾದ ವಿಚಾರವಾಗಿ ಈ ಕುಟುಂಬಗಳು ಪೊಲೀಸ್ ಠಾಣೆಗೆ  ದೂರು ನೀಡಿ ನ್ಯಾಯಾಲಯದ ಮೆಟ್ಟಿಲೇರಿದ್ದವು. ಆದ್ರೆ ಈ ವಿವಾದದ ಬಗ್ಗೆ ಯಜಮಾನರು ನ್ಯಾಯಪಂಚಾಯ್ತಿ ನಡೆಸಲು ಮುಂದಾಗಿದ್ರಂತೆ. ಆಗ ನ್ಯಾಯಾಲಯದಲ್ಲೇ ತೀರ್ಮಾನವಾಗಲಿ ಎಂದು ಈ ಕುಟುಂಬಗಳು ಹೇಳಿದ್ದಾರಂತೆ. ಇದರಿಂದ ಸಿಟ್ಟಾದ ಯಜಮಾನರು 6 ಸಾವಿರ ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರಂತೆ. 

ಇದನ್ನೂ ವೀಕ್ಷಿಸಿ:  Today Horoscope: ಇಂದು ವೃಶ್ಚಿಕ ರಾಶಿಯವರು ಧೈರ್ಯ, ಸಾಹಸವನ್ನು ತೋರುತ್ತಾರೆ, ವೃತ್ತಿಯಲ್ಲಿ ಕಿರಿಕಿರಿ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ