ಹಕ್ಕಿ ಕಿರಿಕ್‌ಗೆ ಜನ ಹೈರಾಣು: ಹಾವಿನ ದ್ವೇಷ 12 ವರುಷ, ಕಾಗೆ ದ್ವೇಷ ಎಷ್ಟು ವರುಷ..?

ಹಕ್ಕಿ ಕಿರಿಕ್‌ಗೆ ಜನ ಹೈರಾಣು: ಹಾವಿನ ದ್ವೇಷ 12 ವರುಷ, ಕಾಗೆ ದ್ವೇಷ ಎಷ್ಟು ವರುಷ..?

Suvarna News   | Asianet News
Published : Jan 30, 2022, 11:55 AM IST

*   ತಲೆಗೆ ಕುಕ್ಕಿ ಪರಾರಿಯಾಗುವ ಕಾಗೆಯಿಂದ ಜನ ಹೈರಾಣು
*   ರಸ್ತೆಯಲ್ಲಿ ಓಡಾಡುವುದೇ ಜನರಿಗೆ ದೊಡ್ಡ ತಲೆನೋವು 
*   ಆಂಜನೇಯ ದೇವಾಲಯಕ್ಕೂ ಕಾಗೆಗೂ ಏನು ಸಂಬಂಧ?
 

ಚಿತ್ರದುರ್ಗ(ಜ.30):  ಕಾಗೆಯೊಂದು ಜನರು ಓಡಾಡೋದಕ್ಕೂ ಬಿಡದೇ ಸಿಕ್ಕ ಸಿಕ್ಕವರ ಮೇಲೆ ಅಟ್ಯಾಕ್ ಮಾಡುತ್ತಿರುವ ಘಟನೆ ಚಿತ್ರದುರ್ಗ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ನಡೆದಿದೆ.  ಇದ್ರಿಂದ ಬೇಸತ್ತ ಜನರು ಅಯ್ಯೋ‌ ಇದೇನಪ್ಪ ಕಾಗೆ ಕುಕ್ಕಿ ಹೋಯ್ತು ಎಂಬ ಭಯದಿಂದ ಪಾವಗಡದ ಶನೇಶ್ವರ ದೇವರ ಮೊರೆ ಹೋಗಿ ಪೂಜೆ ಸಲ್ಲಿಸಿ ಬಂದಿದ್ದೂ ಆಯ್ತು. ಹೀಗೆ ನಿತ್ಯ ಹತ್ತಾರು ಮಂದಿಗೆ ಕುಕ್ಕಲು ಶುರುಮಾಡಿದ ಕಾಗೆಯ ಅವಾಂತರ ನೋಡಿ ಜನರೇ ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ಗ್ರಾಮದಲ್ಲಿ ನಿರ್ಮಾಣವಾಯಿತು. 

ಇನ್ನೂ ಈ ಕಾಗೆಯು ಜನರಿಗೆ ಮಾತ್ರವಲ್ಲದೇ ಮನೆಯ ಕಿಟಕಿಯ ಗಾಜಿನ ಬಳಿ ಬಂದು ನಿತ್ಯ ಕುಕ್ಕಲಾರಂಭಿಸಿದೆ. ಇದ್ರಿಂದ ಆಶ್ಚರ್ಯಗೊಂಡ ಜನರು ಯಾಕಿಂಗೆ ಆಗ್ತಿರಬಹುದು ಎಂದು ಚಿಂತೆಗೆ ಒಳಗಾಗಿದ್ದಾರೆ.‌ ಆದ್ರೆ ಕಳೆದ 25 ವರ್ಷಗಳ ಹಿಂದೆ ಗ್ರಾಮದಲ್ಲಿ ಇದ್ದ ಆಂಜನೇಯ ದೇವಾಲಯವನ್ನು ಕೆಡವಿ ಆಂಜನೇಯ ದೇವರನ್ನು ಇಂದು ಅನಾಥವಾಗಿ ರಸ್ತೆಯ ಬದಿಯಲ್ಲಿರುವ ಒಂದು ಪಾಳು ಬಿದ್ದಿರೋ‌ ಜಾಗದಲ್ಲಿ ಇಟ್ಟಿರೋದೆ ಶಾಪವಾ ಎಂದು ಜನರು ಆಲೋಚಿಸಿದ್ದಾರೆ. ಆದ್ರೂ 25 ವರ್ಷಗಳಿಂದ ಇಲ್ಲದ ಯಾವುದೇ ಸಮಸ್ಯೆ ದಿಢೀರ್ ಅಂತ ಆರು ತಿಂಗಳಿಂದ‌ ಕಾಗೆ ಕಾಟ ಕೊಡಲು ಶುರುಮಾಡಿದ್ಯಲ್ಲ ಎಂದೂ ಯೋಚಿಸಿದ್ದಾರೆ. 

Karwar: ಸೀಬರ್ಡ್ ನೌಕಾನೆಲೆಗೆ ಭೂಮಿಕೊಟ್ಟ ಹಾಲಕ್ಕಿ ಒಕ್ಕಲಿಗರಿಗಿಲ್ಲ ಉದ್ಯೋಗ..!

ಒಟ್ಟಾರೆಯಾಗಿ ಕಾಗೆಯ ಕಾಟಕ್ಕೆ ಇಡೀ ಗ್ರಾಮದ ಜನರು ರೋಸಿ ಹೋಗಿದ್ದು. ಕೂಡಲೇ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಬೇಗ ಆಗಿ ಕಾಗೆಯ ಕಾಟ ತಪ್ಪಲಿ ಎಂಬುದು ಗ್ರಾಮಸ್ಥರ ಆಶಯ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more