ಹಕ್ಕಿ ಕಿರಿಕ್‌ಗೆ ಜನ ಹೈರಾಣು: ಹಾವಿನ ದ್ವೇಷ 12 ವರುಷ, ಕಾಗೆ ದ್ವೇಷ ಎಷ್ಟು ವರುಷ..?

ಹಕ್ಕಿ ಕಿರಿಕ್‌ಗೆ ಜನ ಹೈರಾಣು: ಹಾವಿನ ದ್ವೇಷ 12 ವರುಷ, ಕಾಗೆ ದ್ವೇಷ ಎಷ್ಟು ವರುಷ..?

Suvarna News   | Asianet News
Published : Jan 30, 2022, 11:55 AM IST

*   ತಲೆಗೆ ಕುಕ್ಕಿ ಪರಾರಿಯಾಗುವ ಕಾಗೆಯಿಂದ ಜನ ಹೈರಾಣು
*   ರಸ್ತೆಯಲ್ಲಿ ಓಡಾಡುವುದೇ ಜನರಿಗೆ ದೊಡ್ಡ ತಲೆನೋವು 
*   ಆಂಜನೇಯ ದೇವಾಲಯಕ್ಕೂ ಕಾಗೆಗೂ ಏನು ಸಂಬಂಧ?
 

ಚಿತ್ರದುರ್ಗ(ಜ.30):  ಕಾಗೆಯೊಂದು ಜನರು ಓಡಾಡೋದಕ್ಕೂ ಬಿಡದೇ ಸಿಕ್ಕ ಸಿಕ್ಕವರ ಮೇಲೆ ಅಟ್ಯಾಕ್ ಮಾಡುತ್ತಿರುವ ಘಟನೆ ಚಿತ್ರದುರ್ಗ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ನಡೆದಿದೆ.  ಇದ್ರಿಂದ ಬೇಸತ್ತ ಜನರು ಅಯ್ಯೋ‌ ಇದೇನಪ್ಪ ಕಾಗೆ ಕುಕ್ಕಿ ಹೋಯ್ತು ಎಂಬ ಭಯದಿಂದ ಪಾವಗಡದ ಶನೇಶ್ವರ ದೇವರ ಮೊರೆ ಹೋಗಿ ಪೂಜೆ ಸಲ್ಲಿಸಿ ಬಂದಿದ್ದೂ ಆಯ್ತು. ಹೀಗೆ ನಿತ್ಯ ಹತ್ತಾರು ಮಂದಿಗೆ ಕುಕ್ಕಲು ಶುರುಮಾಡಿದ ಕಾಗೆಯ ಅವಾಂತರ ನೋಡಿ ಜನರೇ ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ಗ್ರಾಮದಲ್ಲಿ ನಿರ್ಮಾಣವಾಯಿತು. 

ಇನ್ನೂ ಈ ಕಾಗೆಯು ಜನರಿಗೆ ಮಾತ್ರವಲ್ಲದೇ ಮನೆಯ ಕಿಟಕಿಯ ಗಾಜಿನ ಬಳಿ ಬಂದು ನಿತ್ಯ ಕುಕ್ಕಲಾರಂಭಿಸಿದೆ. ಇದ್ರಿಂದ ಆಶ್ಚರ್ಯಗೊಂಡ ಜನರು ಯಾಕಿಂಗೆ ಆಗ್ತಿರಬಹುದು ಎಂದು ಚಿಂತೆಗೆ ಒಳಗಾಗಿದ್ದಾರೆ.‌ ಆದ್ರೆ ಕಳೆದ 25 ವರ್ಷಗಳ ಹಿಂದೆ ಗ್ರಾಮದಲ್ಲಿ ಇದ್ದ ಆಂಜನೇಯ ದೇವಾಲಯವನ್ನು ಕೆಡವಿ ಆಂಜನೇಯ ದೇವರನ್ನು ಇಂದು ಅನಾಥವಾಗಿ ರಸ್ತೆಯ ಬದಿಯಲ್ಲಿರುವ ಒಂದು ಪಾಳು ಬಿದ್ದಿರೋ‌ ಜಾಗದಲ್ಲಿ ಇಟ್ಟಿರೋದೆ ಶಾಪವಾ ಎಂದು ಜನರು ಆಲೋಚಿಸಿದ್ದಾರೆ. ಆದ್ರೂ 25 ವರ್ಷಗಳಿಂದ ಇಲ್ಲದ ಯಾವುದೇ ಸಮಸ್ಯೆ ದಿಢೀರ್ ಅಂತ ಆರು ತಿಂಗಳಿಂದ‌ ಕಾಗೆ ಕಾಟ ಕೊಡಲು ಶುರುಮಾಡಿದ್ಯಲ್ಲ ಎಂದೂ ಯೋಚಿಸಿದ್ದಾರೆ. 

Karwar: ಸೀಬರ್ಡ್ ನೌಕಾನೆಲೆಗೆ ಭೂಮಿಕೊಟ್ಟ ಹಾಲಕ್ಕಿ ಒಕ್ಕಲಿಗರಿಗಿಲ್ಲ ಉದ್ಯೋಗ..!

ಒಟ್ಟಾರೆಯಾಗಿ ಕಾಗೆಯ ಕಾಟಕ್ಕೆ ಇಡೀ ಗ್ರಾಮದ ಜನರು ರೋಸಿ ಹೋಗಿದ್ದು. ಕೂಡಲೇ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರ ಬೇಗ ಆಗಿ ಕಾಗೆಯ ಕಾಟ ತಪ್ಪಲಿ ಎಂಬುದು ಗ್ರಾಮಸ್ಥರ ಆಶಯ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more