Tumakuru: ಹಾಡಹಗಲೇ ನಡೆಯುತ್ತೆ ಮಣ್ಣು ಮಾಫಿಯಾ: ಪ್ರಶ್ನಿಸಿದವರಿಗೆ ಜೀವಬೆದರಿಕೆ

Tumakuru: ಹಾಡಹಗಲೇ ನಡೆಯುತ್ತೆ ಮಣ್ಣು ಮಾಫಿಯಾ: ಪ್ರಶ್ನಿಸಿದವರಿಗೆ ಜೀವಬೆದರಿಕೆ

Suvarna News   | Asianet News
Published : Feb 24, 2022, 12:12 PM IST

*   ಹೈಕೋರ್ಟ್ ಖಡಕ್ ಸೂಚನೆಗೂ ಕ್ಯಾರೇ ಎನ್ನುತ್ತಿಲ್ಲ ದಂಧೆ ಕೋರರು
*  ಅರಣ್ಯ ಭೂಮಿ, ರೈತರ ಹೊಲದಿಂದ ಅಕ್ರಮವಾಗಿ ಮಣ್ಣು ಸಾಗಾಟ
*  ಹಲವು ಅನುಮಾನ ಮೂಡಿಸಿದ ಅಧಿಕಾರಿಗಳ, ಜನಪ್ರತಿನಿಧಿಗಳ ಮೌನ 
 

ತುಮಕೂರು(ಫೆ.24):  ಕಲ್ಪತರು ನಾಡು ಎಂದು ಪ್ರಸಿದ್ದಿ ಪಡೆದ ತುಮಕೂರು ಜಿಲ್ಲೆಯಲ್ಲಿ ಮಣ್ಣಿನ ಹಗಲು ದರೋಡೆ ನಡೆಯುತ್ತಿದೆ. ಸ್ಥಳೀಯರು  ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಹಾಕಿದಾಗ ಹೈಕೋರ್ಟ್ ಸೂಚನೆಯ ನಡುವೆಯೂ ಮಣ್ಣು ಮಾಫಿಯಾಕ್ಕೆ ಬ್ರೇಕ್ ಬಿದ್ದಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಜೊತೆಗೆ ಎಗ್ಗಿಲ್ಲದೆ ಮಣ್ಣು ಮಾಫಿಯಾ ನಡೆಸುತ್ತಿರುವವರನ್ನು  ಪ್ರಶ್ನಿಸಿದವರಿಗೆ ಜೀವಬೆದರಿಕೆಯೊಡ್ಡುತ್ತಿರುವ ಗಂಭೀರ ಆರೋಪವೂ ಕೇಳಿಬಂದಿದೆ.

ತಾಲೂಕಿನ ದೇವರಾಯನ ದುರ್ಗ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ನರಿಕಲ್ ಬೆಟ್ಟ ಹಾಗೂ ರಾಮದೇವರ ಬೆಟ್ಟದ ತಪ್ಪಲಿನಲ್ಲಿ ಮಣ್ಣು ದಂಧೆ ಅವ್ಯಾಹತವಾಗಿ  ನಡೆಯುತ್ತಿದೆ. ತುಮಕೂರು ಸಮೀಪದ ಊರ್ಡಿಗೆರೆ  ಹೋಬಳಿಯ ಕದರನಹಳ್ಳಿ, ಮೈದಾಳ, ಜನಪನಹಳ್ಳಿ ತಾಂಡ್ಯಗಳ ಸುತ್ತಮುತ್ತ ಅರಣ್ಯ ಭೂಮಿಯ ಸಮೀಪಿದಲ್ಲಿರುವ ರೈತರ ಹೊಲದಲ್ಲಿಯೂ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಇನ್ನು ಕಳೆದ ಹಲವು ವರ್ಷಗಳಿಂದ ಈ ಭಾಗದಲ್ಲಿ ಸುಮಾರು 3375  ಟನ್ ಮಣ್ಣು ತೆಗೆಯಲಾಗಿದೆಯಂತೆ. 

Harsha Murder Case: ಕಾಣೆಯಾಗಿರುವ ಹರ್ಷನ ಮೊಬೈಲ್‌ ಗೆ ಪೊಲೀಸರ ಹುಡುಕಾಟ

ಊರ್ಡಿಗೆರೆ ಹೋಬಳಿ ಕದರನಹಳ್ಳಿ ತಾಂಡ್ಯದ ಸರ್ವೆ ನಂ.77ರಲ್ಲಿ ಗಣಿ ಮತ್ತು ಭೂ ವಿಜ್ಞಾನ, ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳು 2021 ಆ.23ರಂದು ಜಂಟಿ ಸಮೀಕ್ಷೆ ನಡೆಸಿ, ಅಕ್ರಮ ಮಣ್ಣು ಸಾಗಾಟ ನಡೆದಿರುವುದು ಸಮೀಕ್ಷೆಯಲ್ಲಿ ಖಾತ್ರಿಯಾಗಿದೆಯಂತೆ. ಈವರೆಗೆ ಒಟ್ಟು 3375 ಮೆಟ್ರಿಕ್ ಟನ್ ಮಣ್ಣು ತೆಗೆದು ಸಾಗಾಟ ಮಾಡಲಾಗಿರುವುದು ಬೆಳಕಿಗೆ ಬಂದಿದೆ. 

ಇನ್ನು ಈ ಬಗ್ಗೆ ತುಮಕೂರು ತಾಲ್ಲೂಕಿನ ದೇವರಾಯದುರ್ಗಕ್ಕೆ ಹೊಂದಿಕೊಂಡಿರುವ ಕದರನಹಳ್ಳಿ ತಾಂಡ್ಯದ ಸುತ್ತಮುತ್ತ ನಡೆಯುತ್ತಿರುವ ಮಣ್ಣು ಮಾಫಿಯಾ ತಡೆಗೆ ಸ್ಥಳೀಯ ನಿವಾಸಿ,  ವಕೀಲ ರಮೇಶ್ ನಾಯಕ್ ಎಲ್. ಹೈಕೋರ್ಟ್ ಮೆಟ್ಟಿಲೇರಿದ್ದರು. ಅವ್ಯಾಹತವಾಗಿ ಮಣ್ಣು ತೆಗೆಯುವುದರಿಂದ ಈ ಭಾಗದ ಪರಿಸರ, ಜೀವ ವೈವಿಧ್ಯಕ್ಕೆ ಹಾನಿಯಾಗುತ್ತಿದೆ. ಈ ಸಂಬಂಧ ಸಂಪೂರ್ಣ ವರದಿ  ನೀಡುವಂತೆ  ತುಮಕೂರು ಜಿಲ್ಲಾಡಳಿತಕ್ಕೆ  ಹೈಕೋರ್ಟ್ ಆದೇಶಿಸಿದೆ.  ಇನ್ನು ಈ ಅಕ್ರಮ ನ್ಯಾಯಾಲಯದ ಮೆಟ್ಟಿಲೇರುತ್ತಿದ್ದಂತೆ ಮಣ್ಣು ಮಾಫಿಯಾ ಕೆಲ ದಿನಗಳ ಮಟ್ಟಿಗೆ ಸ್ಥಗಿತಗೊಂಡಿದ್ದು, ಇದೀಗ ರಾತ್ರಿ ವೇಳೆ ಕದ್ದು ಮುಚ್ಚಿ ಮಣ್ಣು ಸಾಗಿಸುವ ಕೆಲಸ ನಡೆದಿದೆ.  ಅಲ್ಲದೆ ಈ ಅಕ್ರಮದ ಬಗ್ಗೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ವಕೀಲ ರಮೇಶ್ ನಾಯಕ್ ಎಲ್ ಹಾಗೂ ದುರ್ಗದಹಳ್ಳಿಯ ಆರ್‌ಟಿಐ ಕಾರ್ಯಕರ್ತ ತಿಮ್ಮರಾಜು ಎಂಬುವರಿಗೂ  ದಂಧೆಕೋರರು ಜೀವಬೆದರಿಕೆ ಹಾಕಿದ್ದಾರೆ.

ಒಟ್ಟಾರೆ ಈ ಅಕ್ರಮ ಮಣ್ಣು ಮಾಫಿಯಾದಿಂದ ಸರಕಾರಕ್ಕೂ ನಷ್ಟ, ರೈತರಿಗೂ ಅನ್ಯಾಯ ಎಂಬ ಮಾತುಗಳು ಕೇಳಿ ಬರುತ್ತಿದ್ದು. ಮಣ್ಣು ಮಾಫಿಯಾ ಅಕ್ರಮ ಸಾಗಾಟ ಅಪರಾಧ ಎನ್ನುವುದು ಬಹುತೇಕರಿಗೆ ಗೊತ್ತಿಲ್ಲದೆ ಇರುವುದು ವಿಪರ್ಯಾಸ. ಆದರೆ ರೈತರ ಜಮೀನಿನಿಂದಲೂ ಮಣ್ಣು  ಸಾಗಾಟ ಮಾಡಬೇಕೆಂದರೆ ಸಂಬಂಧಿಸಿದ ಇಲಾಖೆಗಳ ಅನುಮತಿ ಬೇಕು, ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗೂ ಮಣ್ಣನ್ನು ಮನಸೋ ಇಚ್ಚೆ ಸಾಗಿಸುವಂತಿಲ್ಲ, ಆದರೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಮೌನ ಹಲವು ಅನುಮಾನ ಮೂಡಿಸಿವೆ.
 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more