ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

Published : Sep 01, 2023, 11:03 AM IST

ಉತ್ತರ ಕನ್ನಡದಲ್ಲಿ ಮತ್ತೊಂದು ಧರ್ಮ ಸಂಘರ್ಷ ನಡೆದಿದೆ. ವ್ಯಕ್ತಿಯೊಬ್ಬ ಯೇಸು ಹೊಗಳಿದ್ದು, ಹಿಂದೂ ದೇವತೆಗಳಿಗೆ ಅಶ್ಲೀಲವಾಗಿ ಮಾತನಾಡಿದ್ದಾನೆ. ದಲಿತ ವ್ಯಕ್ತಿಯ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ದಲಿತ ಸಂಘಟನೆಗಳೇ ಹೋರಾಟಕ್ಕಿಳಿದಿವೆ.

ಇದೊಂದು ಮಾತು ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ವ್ಯಕ್ತಿ ಆಡಿದ ಮಾತು ಹಿಂದೂಗಳ ಸಿಟ್ಟಿಗೆ ಕಾರಣವಾಗಿದೆ. ಕರ್ನಾಟಕದ ಕರಾವಳಿ ಅಂದ್ರೆ ಧರ್ಮ ವಿಷಯದಲ್ಲಿ ಸೂಕ್ಷ್ಮ ಪ್ರದೇಶ. ಧರ್ಮದ ವಿಚಾರದಲ್ಲಿ ದೊಡ್ಡ ರದ್ದಾಂತಗಳೇ ನಡೆದು ಹೋಗಿದೆ. ಆದ್ರೆ ತಾನು ಹಿಂದೂ ಅಂತಾ ಹೇಳಿಕೊಳ್ಳುವ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷನೇ ಹಿಂದೂ ದೇವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. ಕಾರವಾರದ(Karwar) ಹರಿದೇವ ನಗರದ ನಿವಾಸಿ ಎಲಿಷಾ ಪಾಟಿ(Elisha Pati) ಹಿಂದೂ ದೇವತೆಗಳ ಬಗ್ಗೆ ನಾಲಿಗೆ ಹರಿಬಿಟ್ಟು ವಿಕೃತಿ ಮೆರೆದಿದ್ದಾನೆ ಅನ್ನೋದು ಆರೋಪ. ಯೇಸು ಮಾತ್ರ ದೇವರು, ಹಿಂದೂ ದೇವರು ಯಾವುದು ದೇವರಲ್ಲ ಅಂದಿದ್ದಾನಂತೆ. ಎಲಿಷಾ ಪಾಟಿ ಹೇಳಿಕೆ ಹಿಂದೂಗಳನ್ನ(Hindus) ಕೆರಳಿಸಿದೆ. ಕೂಡಲೇ ಈ ವ್ಯಕ್ತಿಯನ್ನ ಬಂಧಿಸುವಂತೆ ದಲಿತ ಸಂಘಟನೆಗಳೇ ಬೀದಿಗಿಳಿದು ಆಗ್ರಹಿಸುತ್ತಿವೆ. ಅಷ್ಟೇ ಅಲ್ಲ ಪೊಲೀಸರಿಗೆ ದೂರು ನೀಡಿ, ಆತನ ಗಡಿಪಾರಿಗೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲ ಈತ ದಲಿತರನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್(Christian) ಧರ್ಮಕ್ಕೆ ಮತಾಂತರ ನಡೆಸುವ ಪ್ರಯತ್ನ ಕೂಡ ನಡೆಸುತ್ತಿದ್ದಾನೆ ಅನ್ನೋ ಆರೋಪವೂ ಇದೆ. ಸಹಾಯದ ನೆಪದಲ್ಲಿ, ಅಧಿಕಾರಿಗಳ ಹೆಸರಿನಲ್ಲಿ ದಲಿತರಿಂದ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. 

ಇದನ್ನೂ ವೀಕ್ಷಿಸಿ:  ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!