ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

ಯೇಸು ಹೊಗಳಿಕೆ..ಹಿಂದೂ ದೇವರುಗಳ ಬಗ್ಗೆ ಅಶ್ಲೀಲ ಮಾತು: ವ್ಯಕ್ತಿಯ ವಿಡಿಯೋ ವೈರಲ್‌

Published : Sep 01, 2023, 11:03 AM IST

ಉತ್ತರ ಕನ್ನಡದಲ್ಲಿ ಮತ್ತೊಂದು ಧರ್ಮ ಸಂಘರ್ಷ ನಡೆದಿದೆ. ವ್ಯಕ್ತಿಯೊಬ್ಬ ಯೇಸು ಹೊಗಳಿದ್ದು, ಹಿಂದೂ ದೇವತೆಗಳಿಗೆ ಅಶ್ಲೀಲವಾಗಿ ಮಾತನಾಡಿದ್ದಾನೆ. ದಲಿತ ವ್ಯಕ್ತಿಯ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ದಲಿತ ಸಂಘಟನೆಗಳೇ ಹೋರಾಟಕ್ಕಿಳಿದಿವೆ.

ಇದೊಂದು ಮಾತು ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ವ್ಯಕ್ತಿ ಆಡಿದ ಮಾತು ಹಿಂದೂಗಳ ಸಿಟ್ಟಿಗೆ ಕಾರಣವಾಗಿದೆ. ಕರ್ನಾಟಕದ ಕರಾವಳಿ ಅಂದ್ರೆ ಧರ್ಮ ವಿಷಯದಲ್ಲಿ ಸೂಕ್ಷ್ಮ ಪ್ರದೇಶ. ಧರ್ಮದ ವಿಚಾರದಲ್ಲಿ ದೊಡ್ಡ ರದ್ದಾಂತಗಳೇ ನಡೆದು ಹೋಗಿದೆ. ಆದ್ರೆ ತಾನು ಹಿಂದೂ ಅಂತಾ ಹೇಳಿಕೊಳ್ಳುವ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷನೇ ಹಿಂದೂ ದೇವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. ಕಾರವಾರದ(Karwar) ಹರಿದೇವ ನಗರದ ನಿವಾಸಿ ಎಲಿಷಾ ಪಾಟಿ(Elisha Pati) ಹಿಂದೂ ದೇವತೆಗಳ ಬಗ್ಗೆ ನಾಲಿಗೆ ಹರಿಬಿಟ್ಟು ವಿಕೃತಿ ಮೆರೆದಿದ್ದಾನೆ ಅನ್ನೋದು ಆರೋಪ. ಯೇಸು ಮಾತ್ರ ದೇವರು, ಹಿಂದೂ ದೇವರು ಯಾವುದು ದೇವರಲ್ಲ ಅಂದಿದ್ದಾನಂತೆ. ಎಲಿಷಾ ಪಾಟಿ ಹೇಳಿಕೆ ಹಿಂದೂಗಳನ್ನ(Hindus) ಕೆರಳಿಸಿದೆ. ಕೂಡಲೇ ಈ ವ್ಯಕ್ತಿಯನ್ನ ಬಂಧಿಸುವಂತೆ ದಲಿತ ಸಂಘಟನೆಗಳೇ ಬೀದಿಗಿಳಿದು ಆಗ್ರಹಿಸುತ್ತಿವೆ. ಅಷ್ಟೇ ಅಲ್ಲ ಪೊಲೀಸರಿಗೆ ದೂರು ನೀಡಿ, ಆತನ ಗಡಿಪಾರಿಗೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲ ಈತ ದಲಿತರನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್(Christian) ಧರ್ಮಕ್ಕೆ ಮತಾಂತರ ನಡೆಸುವ ಪ್ರಯತ್ನ ಕೂಡ ನಡೆಸುತ್ತಿದ್ದಾನೆ ಅನ್ನೋ ಆರೋಪವೂ ಇದೆ. ಸಹಾಯದ ನೆಪದಲ್ಲಿ, ಅಧಿಕಾರಿಗಳ ಹೆಸರಿನಲ್ಲಿ ದಲಿತರಿಂದ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. 

ಇದನ್ನೂ ವೀಕ್ಷಿಸಿ:  ಕೊಲ್ಲೂರಿಗೆ ಕೇರಳ ಭಕ್ತರ ಆಗಮನ.. ಜನರಲ್ಲಿ ಆತಂಕ: ಆಫ್ರಿಕನ್ ಫೀವರ್ ಬಾಧಿಸುವ ಭೀತಿ !

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ