ದಾವಣಗೆರೆ : ಎರಡನೇ ದಿನದ ಅದ್ಧೂರಿ ಹರ ಜಾತ್ರಾ ಮಹೋತ್ಸವ

Jan 15, 2020, 3:16 PM IST

ದಾವಣಗೆರೆ [ಜ.15]: ದಾವಣಗೆರೆಯ ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ಅದ್ದೂರಿ ಹರ ಜಾತ್ರಾ ಮಹೋತ್ಸವ ನಡೆಯಿತು. ಪ್ರಪ್ರಥಮ ಬಾರಿಗೆ ಜಾತ್ರೆ ಜರುಗಿದ್ದು, ಎರಡನೇ ದಿನದ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಕ್ತಿ ಭಾವದಿಂದ ಪಾಲ್ಗೊಂಡಿದ್ದರು. 

ಹರ ಜಾತ್ರೋತ್ಸವದಲ್ಲಿ ಪಂಚಮಸಾಲಿ ಪೀಠದ ಸ್ವಾಮೀಜಿ ವಚನನಾಂದ ಸ್ವಾಮೀಜಿ, ಚಿಕ್ಕಬಳ್ಳಾಪುರ ಬಿಜೆಪಿ ಶಾಸಕ ಸುಧಾಕರ್ ಪಾಲ್ಗೊಂಡಿದ್ದರು.

ಬಹಿರಂಗ ವೇದಿಕೆಯಲ್ಲೇ ಪಂಚಮಸಾಲಿ ಸ್ವಾಮೀಜಿ-BSY ನಡುವೆ ಮಾತಿನ ಚಕಮಕಿ

ಜನವರಿ 15ರ ಮಂಗಳವಾರ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಒಟ್ಟು ಎರಡು ದಿನಗಳ ಕಾಲ ನಡೆಯುತ್ತಿರುವ ಜಾತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ.