ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷಚೇತನರ ಪರದಾಟ: ಸರ್ಕಾರಿ ಸೌಲಭ್ಯ ಪಡೆಯಲು ನಿತ್ಯವೂ ಅಲೆದಾಟ

Published : Sep 25, 2023, 12:19 PM IST

ಜಿಲ್ಲೆಯಲ್ಲಿ ವಿಶೇಷಚೇತನರು ಸರ್ಕಾರದಿಂದ ದೊರೆಯಬೇಕಿದ್ದ ಸೌಲಭ್ಯ ಪಡೆಯಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ನೂರಾರು ಕಿ.ಲೋ ಮೀಟರ್ ದೂರದ ಊರುಗಳಿಂದ ಜಿಲ್ಲಾಸ್ಪತ್ರೆಗೆ ತೆರಳಿದ್ರೆ, ವಿಶೇಷಚೇತನ ಸಮಸ್ಯೆ ಕೇಳೋರೆ ಇಲ್ಲದಂತಾಗಿದೆ.. ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ವಿಶೇಷಚೇತನರು ದಿನನಿತ್ಯ ಅಲೆದಾಡುವಂತಾಗಿದೆ.

ವಿಕಲ ಚೇತನರಿಗಾಗಿಯೇ ಸರ್ಕಾರ  ಹಲವು ಸೌಲ್ಯಭ್ಯಗಳನ್ನ ಕಲ್ಪಿಸಿದೆ. ವಿಶೇಷಚೇತನರ ಆರೋಗ್ಯ ಸುಧಾರಣೆಗೆ  ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ.. ಆದ್ರೆ ಯಾದಗಿರಿ ಜಿಲ್ಲೆಯಲ್ಲಿ ಈ ಸೌಲಭ್ಯ ಪಡೆಯಲು ವಿಶೇಷ ಚೇತನರು ಪರದಾಡುವಂತಾಗಿದೆ. ವಾಯ್ಸ್ : ಪ್ರತಿ ವಾರ ತಾಲೂಕಾ ಆಸ್ಪತ್ರೆಗಳಲ್ಲಿ ವಿಕಲಚೇತರ ಶಿಬಿರ  ನಡೆಯುತ್ತಿತ್ತು. ಆದ್ರೆ ಕಳೆದ 6 ತಿಂಗಳಿಂದ ತಾಲೂಕಾ ಮಟ್ಟದ ಶಿಬಿರ ಬಂದ್ ಮಾಡಿ, ಜಿಲ್ಲಾಸ್ಪತ್ರೆಯಲ್ಲಿ ಕ್ಯಾಂಪ್ ನಡೆಸಲಾಗುತ್ತಿದೆ. ದೂರದ ಊರಿಂದ ಜಿಲ್ಲಾಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಕಷ್ಟಪಟ್ಟು ದೂರದ ಊರುಗಳಿಂದ ಬಂದರೂ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೇ ಇರುವುದಿಲ್ಲ ಅನ್ನೋದು ವಿಶೇಷ ಚೇತನರ ಆರೋಪ. ತಮ್ಮ ತಮ್ಮ ಊರುಗಳಿಂದ ಕಷ್ಟಪಟ್ಟು ಜಿಲ್ಲಾಸ್ಪತ್ರೆಗೆ ಬಂದ್ರೆ, ಆಸ್ಪತ್ರೆಯಲ್ಲಿ ಸಮಸ್ಯೆಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.. ಆದರೆ  ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಸ್ಪತ್ರೆಯ ಸರ್ಜನ್ ಪದ್ಮಾನಂದ್ ಗಾಯಕ್ವಾಡ್,  ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ತಾಲೂಕಲ್ಲಿ ನಡೆಯುವ  ವಿಕಲಚೇತನರ ಶಿಬಿರ ಬಂದ್ ಆಗಿದೆ. ಕಳೆದ ಎರಡು ವಾರಗಳಿಂದ ಜಿಲ್ಲಾಸ್ಪತ್ರೆಯಲ್ಲೂ ಕ್ಯಾಂಪ್ ಸ್ಥಗಿತಗೊಳಿಸಲಾಗಿದೆ ಎನ್ನುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮತ್ತೆ ಶುರುವಾಯ್ತು ಪಂಚಮಸಾಲಿ ಮೀಸಲಾತಿ ಕಿಚ್ಚು: ಲೋಕಸಭೆ ಚುನಾವಣೆ ಹೊತ್ತಲ್ಲಿ ‘ಬಸವ’ ಶ್ರೀ ರಣಕಹಳೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ