ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

Published : Nov 16, 2023, 09:51 AM IST

ಆ ಗ್ರಾಮದ ಜನರೆಲ್ಲಾ ಭಯಗೊಂಡಿದ್ರು.ನಮ್ಮ ಗ್ರಾಮ ಬೇರೆ ತಾಲೂಕಿಗೆ ಹೋಗುತ್ತೆ ಅಂತಾ ಗಾಬರಿ ಆಗಿದ್ರು.ಎದ್ನೋ ಬಿದ್ನೋ ಅಂತಾ ಸಂತೋಷ್ ಲಾಡ್‌ಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ರು.ಆದ್ರೆ ಈಗ ಮಿನಿಸ್ಟರ್ ಹೇಳಿದ ಮಾತು ಜನರಿಗೆ ಸಂತಸ ಮೂಡಿಸಿದ್ದು ನಿರಾಳರಾಗಿದ್ದಾರೆ.
 

ಗುಂಪು ಗುಂಪಾಗಿ ಬಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ಮುಂದೆ ತಮ್ಮ ಅಳಲು ತೋಡಿಕೊಳ್ಳುತ್ತಿರುವ ಗ್ರಾಮಸ್ಥರು..ಮತ್ತೊಂದೆಡೆ ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಅಂತಾ ಭರವಸೆ ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್.. ಇದೆಲ್ಲಾ ಧಾರವಾಡದ(Dharwad) ಮಿನಿಸ್ಟರ್ ಕಚೇರಿಯಲ್ಲಿ ಕಾಡಂಚಿನಲ್ಲಿರೋ ಕಲಕೇರಿ(Kalakeri) ಗ್ರಾಮದವರು ಮನವಿ ಸಲ್ಲಿಸುತ್ತಿರುವ ದೃಶ್ಯ.ಕಲಕೇರಿ ಗ್ರಾಮ ಪಂಚಾಯ್ತಿಗೆ ಕಲಕೇರಿ, ಹುಣಸಿಕುಮರಿ, ಲಾಳಗಟ್ಟಿ ಮತ್ತು ದೇವಗಿರಿ ಗ್ರಾಮಗಳು ಬರುತ್ತವೆ. ಧಾರವಾಡ ತಾಲೂಕಿನಲ್ಲಿರುವ ಈ ಗ್ರಾಮಗಳನ್ನ ಸರ್ಕಾರ ಅಳ್ನಾವರ(Alnavar) ತಾಲೂಕಿಗೆ ಸೇರಿಸಿ ಬಿಡುತ್ತೆ ಎಂಬ ವಂದದಿ ಹಬ್ಬಿತ್ತು..ಇದ್ರಿಂದ ಗಾಬರಿಗೊಂಡ ಗ್ರಾಮಸ್ಥರು ನಮ್ಮನ್ನ ಅಳ್ನಾ ತಾಲೂಕಿಗೆ ಸೇರಿಸಬೇಡಿ..ಅಲ್ಲಿಗೆ ಓಡಾಡೋಕೆ ಕಾಡು ಸುತ್ತಿ ಬರಬೇಕು ಅಂತಾ ಸಚಿವ ಸಂತೋಷ್ ಲಾಡ್(Santosh Lad) ಮುಂದೆ ಅಳಲು ತೋಡಿಕೊಂಡ್ರು.ಕಲಕೇರಿ ಗ್ರಾಮ ಪಂಚಾಯ್ತಿ ಧಾರವಾಡ ತಾಲೂಕಿಗೆ ಬಂದ್ರು.ವಿಧಾನಸಭಾ ಕ್ಷೇತ್ರ ಮಾತ್ರ ಕಲಘಟಗಿಗೆ ಬರುತ್ತೆ. ಕಲಘಟಗಿ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಅಳ್ನಾವರ ಇದೆ. ಹೀಗಾಗಿ ಅಳ್ನಾವರಕ್ಕೆ ಸೇರಿಸಬೇಕು ಅಂತಾ ಯಾರೋ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಅನ್ನೋದು ಈ ಗ್ರಾಮಸ್ಥರು ಹೇಳುತ್ತಿದ್ದಾರೆ. ಇನ್ನು ಈ ಹಿಂದೆ ಸರ್ಕಾರ ಹೊಸ ತಾಲೂಕುಗಳ ರಚನೆ ಮಾಡಿದಾಗ, ಧಾರವಾಡ ತಾಲೂಕಿನಿಂದ ಅಳ್ನಾವರ ಬೇರ್ಪಟ್ಟು ಪ್ರತ್ಯೇಕ ತಾಲೂಕು ಆಗಿತ್ತು.ಆಗ ಮೊದಲ ಪ್ರಸ್ತಾವದಲ್ಲಿ ಕಲಕೇರಿ ಗ್ರಾಪಂ ಸೇರಿಸಲಾಗಿತ್ತು. ಬಳಿಕ ಜನರಿಗೆ ಓಡಾಡೋಕೆ ಕಷ್ಟ ಆಗುತ್ತೆ ಎಂದು ಕೈ ಬಿಡಲಾಗಿತ್ತು. ಆದ್ರೆ ಈಗ ವಂದತಿ ಹಬ್ಬಿದ್ದು ಇದಕ್ಕೆ ಸಂತೋಷ್ ಲಾಡ್ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಅಂತಾ ಭರವಸೆ ನೀಡಿದ್ರು.ಯಾರೋ ಹಬ್ಬಿಸಿದ ವದಂತಿಗೆ 4 ಗ್ರಾಮದ ಜನರು ಆತಂಕದಲ್ಲಿದ್ರು. ಸದ್ಯ ಸಚಿವರು ಯಾವುದೇ ಪ್ರಸ್ತಾಪವಿಲ್ಲ ಅಂತಾ ಗ್ರಾಮಸ್ಥರಿಗೆ  ಹೇಳಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಕೈವಾ ಟೀಸರ್! ಧನ್ವೀರ್-ಮೇಘಾಶೆಟ್ಟಿ ಕಾಂಬಿನೇಷನ್‌ನಲ್ಲಿ ಹೊಸ ಮ್ಯಾಜಿಕ್!

56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more