ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

Published : Nov 16, 2023, 09:51 AM IST

ಆ ಗ್ರಾಮದ ಜನರೆಲ್ಲಾ ಭಯಗೊಂಡಿದ್ರು.ನಮ್ಮ ಗ್ರಾಮ ಬೇರೆ ತಾಲೂಕಿಗೆ ಹೋಗುತ್ತೆ ಅಂತಾ ಗಾಬರಿ ಆಗಿದ್ರು.ಎದ್ನೋ ಬಿದ್ನೋ ಅಂತಾ ಸಂತೋಷ್ ಲಾಡ್‌ಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ರು.ಆದ್ರೆ ಈಗ ಮಿನಿಸ್ಟರ್ ಹೇಳಿದ ಮಾತು ಜನರಿಗೆ ಸಂತಸ ಮೂಡಿಸಿದ್ದು ನಿರಾಳರಾಗಿದ್ದಾರೆ.
 

ಗುಂಪು ಗುಂಪಾಗಿ ಬಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ಮುಂದೆ ತಮ್ಮ ಅಳಲು ತೋಡಿಕೊಳ್ಳುತ್ತಿರುವ ಗ್ರಾಮಸ್ಥರು..ಮತ್ತೊಂದೆಡೆ ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಅಂತಾ ಭರವಸೆ ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್.. ಇದೆಲ್ಲಾ ಧಾರವಾಡದ(Dharwad) ಮಿನಿಸ್ಟರ್ ಕಚೇರಿಯಲ್ಲಿ ಕಾಡಂಚಿನಲ್ಲಿರೋ ಕಲಕೇರಿ(Kalakeri) ಗ್ರಾಮದವರು ಮನವಿ ಸಲ್ಲಿಸುತ್ತಿರುವ ದೃಶ್ಯ.ಕಲಕೇರಿ ಗ್ರಾಮ ಪಂಚಾಯ್ತಿಗೆ ಕಲಕೇರಿ, ಹುಣಸಿಕುಮರಿ, ಲಾಳಗಟ್ಟಿ ಮತ್ತು ದೇವಗಿರಿ ಗ್ರಾಮಗಳು ಬರುತ್ತವೆ. ಧಾರವಾಡ ತಾಲೂಕಿನಲ್ಲಿರುವ ಈ ಗ್ರಾಮಗಳನ್ನ ಸರ್ಕಾರ ಅಳ್ನಾವರ(Alnavar) ತಾಲೂಕಿಗೆ ಸೇರಿಸಿ ಬಿಡುತ್ತೆ ಎಂಬ ವಂದದಿ ಹಬ್ಬಿತ್ತು..ಇದ್ರಿಂದ ಗಾಬರಿಗೊಂಡ ಗ್ರಾಮಸ್ಥರು ನಮ್ಮನ್ನ ಅಳ್ನಾ ತಾಲೂಕಿಗೆ ಸೇರಿಸಬೇಡಿ..ಅಲ್ಲಿಗೆ ಓಡಾಡೋಕೆ ಕಾಡು ಸುತ್ತಿ ಬರಬೇಕು ಅಂತಾ ಸಚಿವ ಸಂತೋಷ್ ಲಾಡ್(Santosh Lad) ಮುಂದೆ ಅಳಲು ತೋಡಿಕೊಂಡ್ರು.ಕಲಕೇರಿ ಗ್ರಾಮ ಪಂಚಾಯ್ತಿ ಧಾರವಾಡ ತಾಲೂಕಿಗೆ ಬಂದ್ರು.ವಿಧಾನಸಭಾ ಕ್ಷೇತ್ರ ಮಾತ್ರ ಕಲಘಟಗಿಗೆ ಬರುತ್ತೆ. ಕಲಘಟಗಿ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಅಳ್ನಾವರ ಇದೆ. ಹೀಗಾಗಿ ಅಳ್ನಾವರಕ್ಕೆ ಸೇರಿಸಬೇಕು ಅಂತಾ ಯಾರೋ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಅನ್ನೋದು ಈ ಗ್ರಾಮಸ್ಥರು ಹೇಳುತ್ತಿದ್ದಾರೆ. ಇನ್ನು ಈ ಹಿಂದೆ ಸರ್ಕಾರ ಹೊಸ ತಾಲೂಕುಗಳ ರಚನೆ ಮಾಡಿದಾಗ, ಧಾರವಾಡ ತಾಲೂಕಿನಿಂದ ಅಳ್ನಾವರ ಬೇರ್ಪಟ್ಟು ಪ್ರತ್ಯೇಕ ತಾಲೂಕು ಆಗಿತ್ತು.ಆಗ ಮೊದಲ ಪ್ರಸ್ತಾವದಲ್ಲಿ ಕಲಕೇರಿ ಗ್ರಾಪಂ ಸೇರಿಸಲಾಗಿತ್ತು. ಬಳಿಕ ಜನರಿಗೆ ಓಡಾಡೋಕೆ ಕಷ್ಟ ಆಗುತ್ತೆ ಎಂದು ಕೈ ಬಿಡಲಾಗಿತ್ತು. ಆದ್ರೆ ಈಗ ವಂದತಿ ಹಬ್ಬಿದ್ದು ಇದಕ್ಕೆ ಸಂತೋಷ್ ಲಾಡ್ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಅಂತಾ ಭರವಸೆ ನೀಡಿದ್ರು.ಯಾರೋ ಹಬ್ಬಿಸಿದ ವದಂತಿಗೆ 4 ಗ್ರಾಮದ ಜನರು ಆತಂಕದಲ್ಲಿದ್ರು. ಸದ್ಯ ಸಚಿವರು ಯಾವುದೇ ಪ್ರಸ್ತಾಪವಿಲ್ಲ ಅಂತಾ ಗ್ರಾಮಸ್ಥರಿಗೆ  ಹೇಳಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಕೈವಾ ಟೀಸರ್! ಧನ್ವೀರ್-ಮೇಘಾಶೆಟ್ಟಿ ಕಾಂಬಿನೇಷನ್‌ನಲ್ಲಿ ಹೊಸ ಮ್ಯಾಜಿಕ್!

24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
Read more