ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

ತಾಲೂಕು ಬದಲಾವಣೆಗೆ ಗಾಬರಿಗೊಂಡ ಜನ: ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಮನವಿ ಸಲ್ಲಿಕೆ

Published : Nov 16, 2023, 09:51 AM IST

ಆ ಗ್ರಾಮದ ಜನರೆಲ್ಲಾ ಭಯಗೊಂಡಿದ್ರು.ನಮ್ಮ ಗ್ರಾಮ ಬೇರೆ ತಾಲೂಕಿಗೆ ಹೋಗುತ್ತೆ ಅಂತಾ ಗಾಬರಿ ಆಗಿದ್ರು.ಎದ್ನೋ ಬಿದ್ನೋ ಅಂತಾ ಸಂತೋಷ್ ಲಾಡ್‌ಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ರು.ಆದ್ರೆ ಈಗ ಮಿನಿಸ್ಟರ್ ಹೇಳಿದ ಮಾತು ಜನರಿಗೆ ಸಂತಸ ಮೂಡಿಸಿದ್ದು ನಿರಾಳರಾಗಿದ್ದಾರೆ.
 

ಗುಂಪು ಗುಂಪಾಗಿ ಬಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರ ಮುಂದೆ ತಮ್ಮ ಅಳಲು ತೋಡಿಕೊಳ್ಳುತ್ತಿರುವ ಗ್ರಾಮಸ್ಥರು..ಮತ್ತೊಂದೆಡೆ ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ ಅಂತಾ ಭರವಸೆ ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್.. ಇದೆಲ್ಲಾ ಧಾರವಾಡದ(Dharwad) ಮಿನಿಸ್ಟರ್ ಕಚೇರಿಯಲ್ಲಿ ಕಾಡಂಚಿನಲ್ಲಿರೋ ಕಲಕೇರಿ(Kalakeri) ಗ್ರಾಮದವರು ಮನವಿ ಸಲ್ಲಿಸುತ್ತಿರುವ ದೃಶ್ಯ.ಕಲಕೇರಿ ಗ್ರಾಮ ಪಂಚಾಯ್ತಿಗೆ ಕಲಕೇರಿ, ಹುಣಸಿಕುಮರಿ, ಲಾಳಗಟ್ಟಿ ಮತ್ತು ದೇವಗಿರಿ ಗ್ರಾಮಗಳು ಬರುತ್ತವೆ. ಧಾರವಾಡ ತಾಲೂಕಿನಲ್ಲಿರುವ ಈ ಗ್ರಾಮಗಳನ್ನ ಸರ್ಕಾರ ಅಳ್ನಾವರ(Alnavar) ತಾಲೂಕಿಗೆ ಸೇರಿಸಿ ಬಿಡುತ್ತೆ ಎಂಬ ವಂದದಿ ಹಬ್ಬಿತ್ತು..ಇದ್ರಿಂದ ಗಾಬರಿಗೊಂಡ ಗ್ರಾಮಸ್ಥರು ನಮ್ಮನ್ನ ಅಳ್ನಾ ತಾಲೂಕಿಗೆ ಸೇರಿಸಬೇಡಿ..ಅಲ್ಲಿಗೆ ಓಡಾಡೋಕೆ ಕಾಡು ಸುತ್ತಿ ಬರಬೇಕು ಅಂತಾ ಸಚಿವ ಸಂತೋಷ್ ಲಾಡ್(Santosh Lad) ಮುಂದೆ ಅಳಲು ತೋಡಿಕೊಂಡ್ರು.ಕಲಕೇರಿ ಗ್ರಾಮ ಪಂಚಾಯ್ತಿ ಧಾರವಾಡ ತಾಲೂಕಿಗೆ ಬಂದ್ರು.ವಿಧಾನಸಭಾ ಕ್ಷೇತ್ರ ಮಾತ್ರ ಕಲಘಟಗಿಗೆ ಬರುತ್ತೆ. ಕಲಘಟಗಿ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಅಳ್ನಾವರ ಇದೆ. ಹೀಗಾಗಿ ಅಳ್ನಾವರಕ್ಕೆ ಸೇರಿಸಬೇಕು ಅಂತಾ ಯಾರೋ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಅನ್ನೋದು ಈ ಗ್ರಾಮಸ್ಥರು ಹೇಳುತ್ತಿದ್ದಾರೆ. ಇನ್ನು ಈ ಹಿಂದೆ ಸರ್ಕಾರ ಹೊಸ ತಾಲೂಕುಗಳ ರಚನೆ ಮಾಡಿದಾಗ, ಧಾರವಾಡ ತಾಲೂಕಿನಿಂದ ಅಳ್ನಾವರ ಬೇರ್ಪಟ್ಟು ಪ್ರತ್ಯೇಕ ತಾಲೂಕು ಆಗಿತ್ತು.ಆಗ ಮೊದಲ ಪ್ರಸ್ತಾವದಲ್ಲಿ ಕಲಕೇರಿ ಗ್ರಾಪಂ ಸೇರಿಸಲಾಗಿತ್ತು. ಬಳಿಕ ಜನರಿಗೆ ಓಡಾಡೋಕೆ ಕಷ್ಟ ಆಗುತ್ತೆ ಎಂದು ಕೈ ಬಿಡಲಾಗಿತ್ತು. ಆದ್ರೆ ಈಗ ವಂದತಿ ಹಬ್ಬಿದ್ದು ಇದಕ್ಕೆ ಸಂತೋಷ್ ಲಾಡ್ ಸ್ಪಷ್ಟನೆ ಕೊಟ್ಟಿದ್ದಾರೆ. ನಮ್ಮ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಅಂತಾ ಭರವಸೆ ನೀಡಿದ್ರು.ಯಾರೋ ಹಬ್ಬಿಸಿದ ವದಂತಿಗೆ 4 ಗ್ರಾಮದ ಜನರು ಆತಂಕದಲ್ಲಿದ್ರು. ಸದ್ಯ ಸಚಿವರು ಯಾವುದೇ ಪ್ರಸ್ತಾಪವಿಲ್ಲ ಅಂತಾ ಗ್ರಾಮಸ್ಥರಿಗೆ  ಹೇಳಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ:  ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಕೈವಾ ಟೀಸರ್! ಧನ್ವೀರ್-ಮೇಘಾಶೆಟ್ಟಿ ಕಾಂಬಿನೇಷನ್‌ನಲ್ಲಿ ಹೊಸ ಮ್ಯಾಜಿಕ್!

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
Read more