ಕೊರೋನಾದಿಂದ ಕಾಪಾಡಿಕೊಳ್ಳಲು ಮಂಗಳೂರು ಪೊಲೀಸ್‌ ಠಾಣೆಯಲ್ಲಿ ವಿಭಿನ್ನ ಕ್ರಮ!

ಕೊರೋನಾದಿಂದ ಕಾಪಾಡಿಕೊಳ್ಳಲು ಮಂಗಳೂರು ಪೊಲೀಸ್‌ ಠಾಣೆಯಲ್ಲಿ ವಿಭಿನ್ನ ಕ್ರಮ!

Published : May 06, 2021, 03:16 PM ISTUpdated : May 06, 2021, 03:17 PM IST

ಏರುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಹೀಗಿರುವಾಗ ಜನರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ ಜನರ ಸುರಕ್ಷತೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೊಲೀಸರು ತಮ್ಮ ರಕ್ಷಣೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಿರುವಾಗ ಮಂಗಳೂರು ಠಾಣೆಯಲ್ಲಿ ಪೊಲೀಸರ ಸುರಕ್ಷತೆಗಾಗಿ ವಿಭಿನ್ನ ಪ್ರಯೋಗವೊಂದನ್ನು ಆರಂಭಿಸಲಾಗಿದೆ.

ಮಂಗಳೂರು(ಮೇ.06): ಏರುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಹೀಗಿರುವಾಗ ಜನರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ ಜನರ ಸುರಕ್ಷತೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೊಲೀಸರು ತಮ್ಮ ರಕ್ಷಣೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಿರುವಾಗ ಮಂಗಳೂರು ಠಾಣೆಯಲ್ಲಿ ಪೊಲೀಸರ ಸುರಕ್ಷತೆಗಾಗಿ ವಿಭಿನ್ನ ಪ್ರಯೋಗವೊಂದನ್ನು ಆರಂಭಿಸಲಾಗಿದೆ.

ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

ಹೌದು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೋವಿಡ್‌ನಿಂದ ರಕ್ಷಣೆಗೆ ವಿಶೇಷ ಪ್ರಯತ್ನ ನಡೆಸಲಾಗಿದ್ದು, ಪೊಲೀಸ್ ಕಮಿಷನರ್ ಶಶಿಕುಮಾರ್ ಮಾರ್ಗದರ್ಶನದಂತೆ ಸ್ಟೀಮಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಬರ್ಕೆ ಸ್ಟೇಷನ್ ಆವರಣದಲ್ಲಿ ಸ್ಟೀಮಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ.

ಇಲ್ಲಿ ಗ್ಯಾಸ್ ಮೂಲಕ ಕುಕ್ಕರ್​​ನಲ್ಲಿ ನೀರಿಗೆ ತುಳಸಿ, ಲವಂಗ ಹಾಕಿ ಕುದಿಸಲಾಗುತ್ತದೆ. ಕುಕ್ಕರ್​ನಲ್ಲಿ ನೀರು ಕುದಿದ ಬಳಿಕ ಬರುವ ಹಬೆಯನ್ನು ಪೈಪ್​ ಮೂಲಕ ಹಾದು ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಪೈಪ್ ಮೂಲಕ ಬರುವ ಹಬೆಯಲ್ಲಿ ಪೊಲೀಸರಿಗೆ 5 ನಿಮಿಷಗಳ ಸ್ಟೀಮಿಂಗ್ ತೆಗೆದುಕೊಳ್ಳುವ ಸೌಲಭ್ಯವಿದೆ. ಬರ್ಕೆ ಠಾಣೆಯ ಪೊಲೀಸ್ ಸಿಬ್ಬಂದಿ ಠಾಣೆಗೆ ಹೊರಗಿನಿಂದ ಒಳಬರುವ ವೇಳೆ ಸ್ಟೀಮ್ ತೆಗೆದುಕೊಳ್ಳಬೇಕು. ಪೊಲೀಸ್ ಠಾಣೆಗೆ ದೂರು ನೀಡಲು ಬರುವವರಿಗೂ ಸ್ಟೀಮಿಂಗ್ ವ್ಯವಸ್ಥೆ ಇದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!