ಕೊರೋನಾದಿಂದ ಕಾಪಾಡಿಕೊಳ್ಳಲು ಮಂಗಳೂರು ಪೊಲೀಸ್‌ ಠಾಣೆಯಲ್ಲಿ ವಿಭಿನ್ನ ಕ್ರಮ!

ಕೊರೋನಾದಿಂದ ಕಾಪಾಡಿಕೊಳ್ಳಲು ಮಂಗಳೂರು ಪೊಲೀಸ್‌ ಠಾಣೆಯಲ್ಲಿ ವಿಭಿನ್ನ ಕ್ರಮ!

Published : May 06, 2021, 03:16 PM ISTUpdated : May 06, 2021, 03:17 PM IST

ಏರುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಹೀಗಿರುವಾಗ ಜನರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ ಜನರ ಸುರಕ್ಷತೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೊಲೀಸರು ತಮ್ಮ ರಕ್ಷಣೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಿರುವಾಗ ಮಂಗಳೂರು ಠಾಣೆಯಲ್ಲಿ ಪೊಲೀಸರ ಸುರಕ್ಷತೆಗಾಗಿ ವಿಭಿನ್ನ ಪ್ರಯೋಗವೊಂದನ್ನು ಆರಂಭಿಸಲಾಗಿದೆ.

ಮಂಗಳೂರು(ಮೇ.06): ಏರುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಹೀಗಿರುವಾಗ ಜನರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ ಜನರ ಸುರಕ್ಷತೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೊಲೀಸರು ತಮ್ಮ ರಕ್ಷಣೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಿರುವಾಗ ಮಂಗಳೂರು ಠಾಣೆಯಲ್ಲಿ ಪೊಲೀಸರ ಸುರಕ್ಷತೆಗಾಗಿ ವಿಭಿನ್ನ ಪ್ರಯೋಗವೊಂದನ್ನು ಆರಂಭಿಸಲಾಗಿದೆ.

ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

ಹೌದು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೋವಿಡ್‌ನಿಂದ ರಕ್ಷಣೆಗೆ ವಿಶೇಷ ಪ್ರಯತ್ನ ನಡೆಸಲಾಗಿದ್ದು, ಪೊಲೀಸ್ ಕಮಿಷನರ್ ಶಶಿಕುಮಾರ್ ಮಾರ್ಗದರ್ಶನದಂತೆ ಸ್ಟೀಮಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಬರ್ಕೆ ಸ್ಟೇಷನ್ ಆವರಣದಲ್ಲಿ ಸ್ಟೀಮಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ.

ಇಲ್ಲಿ ಗ್ಯಾಸ್ ಮೂಲಕ ಕುಕ್ಕರ್​​ನಲ್ಲಿ ನೀರಿಗೆ ತುಳಸಿ, ಲವಂಗ ಹಾಕಿ ಕುದಿಸಲಾಗುತ್ತದೆ. ಕುಕ್ಕರ್​ನಲ್ಲಿ ನೀರು ಕುದಿದ ಬಳಿಕ ಬರುವ ಹಬೆಯನ್ನು ಪೈಪ್​ ಮೂಲಕ ಹಾದು ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಪೈಪ್ ಮೂಲಕ ಬರುವ ಹಬೆಯಲ್ಲಿ ಪೊಲೀಸರಿಗೆ 5 ನಿಮಿಷಗಳ ಸ್ಟೀಮಿಂಗ್ ತೆಗೆದುಕೊಳ್ಳುವ ಸೌಲಭ್ಯವಿದೆ. ಬರ್ಕೆ ಠಾಣೆಯ ಪೊಲೀಸ್ ಸಿಬ್ಬಂದಿ ಠಾಣೆಗೆ ಹೊರಗಿನಿಂದ ಒಳಬರುವ ವೇಳೆ ಸ್ಟೀಮ್ ತೆಗೆದುಕೊಳ್ಳಬೇಕು. ಪೊಲೀಸ್ ಠಾಣೆಗೆ ದೂರು ನೀಡಲು ಬರುವವರಿಗೂ ಸ್ಟೀಮಿಂಗ್ ವ್ಯವಸ್ಥೆ ಇದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?