ಕೊರೋನಾದಿಂದ ಕಾಪಾಡಿಕೊಳ್ಳಲು ಮಂಗಳೂರು ಪೊಲೀಸ್‌ ಠಾಣೆಯಲ್ಲಿ ವಿಭಿನ್ನ ಕ್ರಮ!

ಕೊರೋನಾದಿಂದ ಕಾಪಾಡಿಕೊಳ್ಳಲು ಮಂಗಳೂರು ಪೊಲೀಸ್‌ ಠಾಣೆಯಲ್ಲಿ ವಿಭಿನ್ನ ಕ್ರಮ!

Published : May 06, 2021, 03:16 PM ISTUpdated : May 06, 2021, 03:17 PM IST

ಏರುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಹೀಗಿರುವಾಗ ಜನರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ ಜನರ ಸುರಕ್ಷತೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೊಲೀಸರು ತಮ್ಮ ರಕ್ಷಣೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಿರುವಾಗ ಮಂಗಳೂರು ಠಾಣೆಯಲ್ಲಿ ಪೊಲೀಸರ ಸುರಕ್ಷತೆಗಾಗಿ ವಿಭಿನ್ನ ಪ್ರಯೋಗವೊಂದನ್ನು ಆರಂಭಿಸಲಾಗಿದೆ.

ಮಂಗಳೂರು(ಮೇ.06): ಏರುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಹೀಗಿರುವಾಗ ಜನರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ ಜನರ ಸುರಕ್ಷತೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೊಲೀಸರು ತಮ್ಮ ರಕ್ಷಣೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಿರುವಾಗ ಮಂಗಳೂರು ಠಾಣೆಯಲ್ಲಿ ಪೊಲೀಸರ ಸುರಕ್ಷತೆಗಾಗಿ ವಿಭಿನ್ನ ಪ್ರಯೋಗವೊಂದನ್ನು ಆರಂಭಿಸಲಾಗಿದೆ.

ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

ಹೌದು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೋವಿಡ್‌ನಿಂದ ರಕ್ಷಣೆಗೆ ವಿಶೇಷ ಪ್ರಯತ್ನ ನಡೆಸಲಾಗಿದ್ದು, ಪೊಲೀಸ್ ಕಮಿಷನರ್ ಶಶಿಕುಮಾರ್ ಮಾರ್ಗದರ್ಶನದಂತೆ ಸ್ಟೀಮಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಬರ್ಕೆ ಸ್ಟೇಷನ್ ಆವರಣದಲ್ಲಿ ಸ್ಟೀಮಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ.

ಇಲ್ಲಿ ಗ್ಯಾಸ್ ಮೂಲಕ ಕುಕ್ಕರ್​​ನಲ್ಲಿ ನೀರಿಗೆ ತುಳಸಿ, ಲವಂಗ ಹಾಕಿ ಕುದಿಸಲಾಗುತ್ತದೆ. ಕುಕ್ಕರ್​ನಲ್ಲಿ ನೀರು ಕುದಿದ ಬಳಿಕ ಬರುವ ಹಬೆಯನ್ನು ಪೈಪ್​ ಮೂಲಕ ಹಾದು ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಪೈಪ್ ಮೂಲಕ ಬರುವ ಹಬೆಯಲ್ಲಿ ಪೊಲೀಸರಿಗೆ 5 ನಿಮಿಷಗಳ ಸ್ಟೀಮಿಂಗ್ ತೆಗೆದುಕೊಳ್ಳುವ ಸೌಲಭ್ಯವಿದೆ. ಬರ್ಕೆ ಠಾಣೆಯ ಪೊಲೀಸ್ ಸಿಬ್ಬಂದಿ ಠಾಣೆಗೆ ಹೊರಗಿನಿಂದ ಒಳಬರುವ ವೇಳೆ ಸ್ಟೀಮ್ ತೆಗೆದುಕೊಳ್ಳಬೇಕು. ಪೊಲೀಸ್ ಠಾಣೆಗೆ ದೂರು ನೀಡಲು ಬರುವವರಿಗೂ ಸ್ಟೀಮಿಂಗ್ ವ್ಯವಸ್ಥೆ ಇದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!