ಕೊರೋನಾದಿಂದ ಕಾಪಾಡಿಕೊಳ್ಳಲು ಮಂಗಳೂರು ಪೊಲೀಸ್‌ ಠಾಣೆಯಲ್ಲಿ ವಿಭಿನ್ನ ಕ್ರಮ!

ಕೊರೋನಾದಿಂದ ಕಾಪಾಡಿಕೊಳ್ಳಲು ಮಂಗಳೂರು ಪೊಲೀಸ್‌ ಠಾಣೆಯಲ್ಲಿ ವಿಭಿನ್ನ ಕ್ರಮ!

Published : May 06, 2021, 03:16 PM ISTUpdated : May 06, 2021, 03:17 PM IST

ಏರುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಹೀಗಿರುವಾಗ ಜನರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ ಜನರ ಸುರಕ್ಷತೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೊಲೀಸರು ತಮ್ಮ ರಕ್ಷಣೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಿರುವಾಗ ಮಂಗಳೂರು ಠಾಣೆಯಲ್ಲಿ ಪೊಲೀಸರ ಸುರಕ್ಷತೆಗಾಗಿ ವಿಭಿನ್ನ ಪ್ರಯೋಗವೊಂದನ್ನು ಆರಂಭಿಸಲಾಗಿದೆ.

ಮಂಗಳೂರು(ಮೇ.06): ಏರುತ್ತಿರುವ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಹೀಗಿರುವಾಗ ಜನರು ಈ ನಿಯಮಗಳನ್ನು ಪಾಲಿಸುತ್ತಿದ್ದಾರೋ ಇಲ್ಲವೋ ಎಂಬುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರನ್ನು ನೇಮಕ ಮಾಡಲಾಗಿದೆ. ಆದರೆ ಜನರ ಸುರಕ್ಷತೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ಪೊಲೀಸರು ತಮ್ಮ ರಕ್ಷಣೆಯನ್ನೂ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಹೀಗಿರುವಾಗ ಮಂಗಳೂರು ಠಾಣೆಯಲ್ಲಿ ಪೊಲೀಸರ ಸುರಕ್ಷತೆಗಾಗಿ ವಿಭಿನ್ನ ಪ್ರಯೋಗವೊಂದನ್ನು ಆರಂಭಿಸಲಾಗಿದೆ.

ಇಳಿಯದ ಕೊರೋನಾ ಅಬ್ಬರ, ಕರುನಾಡಲ್ಲಿ ಲಾಕ್‌ಡೌನ್‌ ಹೇರುವ ಸುಳಿವು!

ಹೌದು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೋವಿಡ್‌ನಿಂದ ರಕ್ಷಣೆಗೆ ವಿಶೇಷ ಪ್ರಯತ್ನ ನಡೆಸಲಾಗಿದ್ದು, ಪೊಲೀಸ್ ಕಮಿಷನರ್ ಶಶಿಕುಮಾರ್ ಮಾರ್ಗದರ್ಶನದಂತೆ ಸ್ಟೀಮಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಬರ್ಕೆ ಸ್ಟೇಷನ್ ಆವರಣದಲ್ಲಿ ಸ್ಟೀಮಿಂಗ್ ಉಪಕರಣ ಅಳವಡಿಕೆ ಮಾಡಲಾಗಿದೆ.

ಇಲ್ಲಿ ಗ್ಯಾಸ್ ಮೂಲಕ ಕುಕ್ಕರ್​​ನಲ್ಲಿ ನೀರಿಗೆ ತುಳಸಿ, ಲವಂಗ ಹಾಕಿ ಕುದಿಸಲಾಗುತ್ತದೆ. ಕುಕ್ಕರ್​ನಲ್ಲಿ ನೀರು ಕುದಿದ ಬಳಿಕ ಬರುವ ಹಬೆಯನ್ನು ಪೈಪ್​ ಮೂಲಕ ಹಾದು ಬರುವಂತೆ ವ್ಯವಸ್ಥೆ ಮಾಡಲಾಗಿದೆ. ಪೈಪ್ ಮೂಲಕ ಬರುವ ಹಬೆಯಲ್ಲಿ ಪೊಲೀಸರಿಗೆ 5 ನಿಮಿಷಗಳ ಸ್ಟೀಮಿಂಗ್ ತೆಗೆದುಕೊಳ್ಳುವ ಸೌಲಭ್ಯವಿದೆ. ಬರ್ಕೆ ಠಾಣೆಯ ಪೊಲೀಸ್ ಸಿಬ್ಬಂದಿ ಠಾಣೆಗೆ ಹೊರಗಿನಿಂದ ಒಳಬರುವ ವೇಳೆ ಸ್ಟೀಮ್ ತೆಗೆದುಕೊಳ್ಳಬೇಕು. ಪೊಲೀಸ್ ಠಾಣೆಗೆ ದೂರು ನೀಡಲು ಬರುವವರಿಗೂ ಸ್ಟೀಮಿಂಗ್ ವ್ಯವಸ್ಥೆ ಇದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್