ಬೆಂಗ್ಳೂರಲ್ಲಿ ನಿಲ್ಲದ ಬೀದಿ ನಾಯಿ ಹಾವಳಿ, ಶಾಲಾ ವಿದ್ಯಾರ್ಥಿ ಮೇಲೆ ದಾಳಿ: ಜನ್ರಿಗಿಲ್ಲ ಸುರಕ್ಷತೆಯ ಗ್ಯಾರಂಟಿ?

ಬೆಂಗ್ಳೂರಲ್ಲಿ ನಿಲ್ಲದ ಬೀದಿ ನಾಯಿ ಹಾವಳಿ, ಶಾಲಾ ವಿದ್ಯಾರ್ಥಿ ಮೇಲೆ ದಾಳಿ: ಜನ್ರಿಗಿಲ್ಲ ಸುರಕ್ಷತೆಯ ಗ್ಯಾರಂಟಿ?

Published : Dec 12, 2024, 06:54 PM IST

ಮಕ್ಕಳನ್ನ ಸ್ಕೂಲಿಗೆ ಕಳುಹಿಸಲು ಕೂಡ ಕಷ್ಟವಾಗ್ತಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ರು ಯಾವುದೇ ಪ್ರಯೋಜನವಾಗಿಲ್ಲ. ಬೀದಿ ನಾಯಿಗಳಿಂದ ನಮ್ಮನ್ನ ರಕ್ಷಣೆ ಮಾಡಿ ಅಂತ ಬಿಬಿಎಂಪಿಗೆ ಕನಕನಗರದ ನಿವಾಸಿಗಳ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು(ಡಿ.12): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿವೆ ರಕ್ಕಸ ನಾಯಿಗಳು ಮಕ್ಕಳನ್ನೇ ಟಾರ್ಗೆಟ್ ಮಾಡಿವೆ. ಈ ಬಗ್ಗೆ  ಬಿಬಿಎಂಪಿಗೆ ದೂರು‌ ನೀಡಿದ್ರು‌ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಮನೆಯಿಂದ ‌ಮಕ್ಕಳನ್ನ ಹೊರಗಡೆ ಕಳುಹಿಸಲು ಪೋಷಕರು ಭಯ ಪಡುತ್ತಿದ್ದಾರೆ. ಸುಲ್ತಾನ್ ಪಾಳ್ಯ, ಕನಕನಗರದ 6 ನೇ ಎ ಕ್ರಾಸ್ ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಬೀದಿ ನಾಯಿಗಳ‌ ಕಾಟಕ್ಕೆ ಜನರು ಹೈರಾಣಾಗಿದ್ದಾರೆ. 

ಡೆಡ್ಲಿ‌ ನಾಯಿಗಳು ಮಕ್ಕಳು ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಮೂರು ಜನರನ್ನ ನಾಯಿಗಳು ಕಚ್ಚಿ ಗಾಯಗೊಳಿಸಿವೆ. ಇಮ್ರಾನ್ ಎಂಬುವರ ಮಕ್ಕಳಿಗೆ ನಾಯಿ ಕಚ್ಚಿದೆ.  ಇದು ಎರಡನೇ ಬಾರಿಗೆ ನನ್ನ ಮಗನಿಗೆ ಬೀದಿ ನಾಯಿ ಕಚ್ಚಿದೆ ಎಂದು ಇಮ್ರಾನ್ ತಿಳಿಸಿದ್ದಾರೆ. 

ಆಸ್ಪತ್ರೆಯಲ್ಲಿ ದರ್ಶನ್ ಹೈಡ್ರಾಮಾ! ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ಕಳ್ಳಾಟ!

ಸಂಜೆ ಹಾಗೂ ‌ಬೆಳಿಗ್ಗೆ ನಾಯಿಗಳ ಕಾಟ ಹೆಚ್ಚಿದೆ. ನಾಯಿ ಕಾಟದ ಬಗ್ಗೆ ‌ಬಿಬಿಎಂಪಿಗೆ ದೂರು ಸಹ ಕೊಡಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ‌ಮೂವರಿಗೆ ನಾಯಿ ಕಚ್ಚಿದೆ. ಆದ್ರೆ ಪಕ್ಕದ ಮನೆಯವರು ಬೀದಿ ನಾಯಿಗಳಿಗೆ ಊಟ ಹಾಕ್ತಾರೆ. ನಾಯಿಗಳಿಂದ ತೊಂದರೆ ಬಗ್ಗೆ ಅವರ ಗಮನಕ್ಕೂ ತರಲಾಗಿದೆ. ಆದ್ರೆ ಇದ್ಯಾವುದನ್ನ ಲೆಕ್ಕಿಸದೆ ಬೀದಿ ನಾಯಿಗಳಿಗೆ ಊಟ ಹಾಕೋದನ್ನ ನಿಲ್ಲಿಸಿಲ್ಲ. ನಾಯಿಗಳಿಂದ ಜನರಿಗೆ ತೊಂದರೆ ಆಗ್ತಿದೆ ಅಂದ್ರೂ ಕೂಡ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಮತ್ತೊಂದು ಕಡೆ ‌ಮಕ್ಕಳನ್ನ ಸ್ಕೂಲಿಗೆ ಕಳುಹಿಸಲು ಕೂಡ ಕಷ್ಟವಾಗ್ತಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ರು ಯಾವುದೇ ಪ್ರಯೋಜನವಾಗಿಲ್ಲ. ಬೀದಿ ನಾಯಿಗಳಿಂದ ನಮ್ಮನ್ನ ರಕ್ಷಣೆ ಮಾಡಿ ಅಂತ ಬಿಬಿಎಂಪಿಗೆ ಕನಕನಗರದ ನಿವಾಸಿಗಳ ಮನವಿ ಮಾಡಿಕೊಂಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more