ಬೆಂಗ್ಳೂರಲ್ಲಿ ನಿಲ್ಲದ ಬೀದಿ ನಾಯಿ ಹಾವಳಿ, ಶಾಲಾ ವಿದ್ಯಾರ್ಥಿ ಮೇಲೆ ದಾಳಿ: ಜನ್ರಿಗಿಲ್ಲ ಸುರಕ್ಷತೆಯ ಗ್ಯಾರಂಟಿ?

ಬೆಂಗ್ಳೂರಲ್ಲಿ ನಿಲ್ಲದ ಬೀದಿ ನಾಯಿ ಹಾವಳಿ, ಶಾಲಾ ವಿದ್ಯಾರ್ಥಿ ಮೇಲೆ ದಾಳಿ: ಜನ್ರಿಗಿಲ್ಲ ಸುರಕ್ಷತೆಯ ಗ್ಯಾರಂಟಿ?

Published : Dec 12, 2024, 06:54 PM IST

ಮಕ್ಕಳನ್ನ ಸ್ಕೂಲಿಗೆ ಕಳುಹಿಸಲು ಕೂಡ ಕಷ್ಟವಾಗ್ತಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ರು ಯಾವುದೇ ಪ್ರಯೋಜನವಾಗಿಲ್ಲ. ಬೀದಿ ನಾಯಿಗಳಿಂದ ನಮ್ಮನ್ನ ರಕ್ಷಣೆ ಮಾಡಿ ಅಂತ ಬಿಬಿಎಂಪಿಗೆ ಕನಕನಗರದ ನಿವಾಸಿಗಳ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು(ಡಿ.12): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿವೆ ರಕ್ಕಸ ನಾಯಿಗಳು ಮಕ್ಕಳನ್ನೇ ಟಾರ್ಗೆಟ್ ಮಾಡಿವೆ. ಈ ಬಗ್ಗೆ  ಬಿಬಿಎಂಪಿಗೆ ದೂರು‌ ನೀಡಿದ್ರು‌ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಮನೆಯಿಂದ ‌ಮಕ್ಕಳನ್ನ ಹೊರಗಡೆ ಕಳುಹಿಸಲು ಪೋಷಕರು ಭಯ ಪಡುತ್ತಿದ್ದಾರೆ. ಸುಲ್ತಾನ್ ಪಾಳ್ಯ, ಕನಕನಗರದ 6 ನೇ ಎ ಕ್ರಾಸ್ ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಬೀದಿ ನಾಯಿಗಳ‌ ಕಾಟಕ್ಕೆ ಜನರು ಹೈರಾಣಾಗಿದ್ದಾರೆ. 

ಡೆಡ್ಲಿ‌ ನಾಯಿಗಳು ಮಕ್ಕಳು ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಮೂರು ಜನರನ್ನ ನಾಯಿಗಳು ಕಚ್ಚಿ ಗಾಯಗೊಳಿಸಿವೆ. ಇಮ್ರಾನ್ ಎಂಬುವರ ಮಕ್ಕಳಿಗೆ ನಾಯಿ ಕಚ್ಚಿದೆ.  ಇದು ಎರಡನೇ ಬಾರಿಗೆ ನನ್ನ ಮಗನಿಗೆ ಬೀದಿ ನಾಯಿ ಕಚ್ಚಿದೆ ಎಂದು ಇಮ್ರಾನ್ ತಿಳಿಸಿದ್ದಾರೆ. 

ಆಸ್ಪತ್ರೆಯಲ್ಲಿ ದರ್ಶನ್ ಹೈಡ್ರಾಮಾ! ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ಕಳ್ಳಾಟ!

ಸಂಜೆ ಹಾಗೂ ‌ಬೆಳಿಗ್ಗೆ ನಾಯಿಗಳ ಕಾಟ ಹೆಚ್ಚಿದೆ. ನಾಯಿ ಕಾಟದ ಬಗ್ಗೆ ‌ಬಿಬಿಎಂಪಿಗೆ ದೂರು ಸಹ ಕೊಡಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ‌ಮೂವರಿಗೆ ನಾಯಿ ಕಚ್ಚಿದೆ. ಆದ್ರೆ ಪಕ್ಕದ ಮನೆಯವರು ಬೀದಿ ನಾಯಿಗಳಿಗೆ ಊಟ ಹಾಕ್ತಾರೆ. ನಾಯಿಗಳಿಂದ ತೊಂದರೆ ಬಗ್ಗೆ ಅವರ ಗಮನಕ್ಕೂ ತರಲಾಗಿದೆ. ಆದ್ರೆ ಇದ್ಯಾವುದನ್ನ ಲೆಕ್ಕಿಸದೆ ಬೀದಿ ನಾಯಿಗಳಿಗೆ ಊಟ ಹಾಕೋದನ್ನ ನಿಲ್ಲಿಸಿಲ್ಲ. ನಾಯಿಗಳಿಂದ ಜನರಿಗೆ ತೊಂದರೆ ಆಗ್ತಿದೆ ಅಂದ್ರೂ ಕೂಡ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಮತ್ತೊಂದು ಕಡೆ ‌ಮಕ್ಕಳನ್ನ ಸ್ಕೂಲಿಗೆ ಕಳುಹಿಸಲು ಕೂಡ ಕಷ್ಟವಾಗ್ತಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ರು ಯಾವುದೇ ಪ್ರಯೋಜನವಾಗಿಲ್ಲ. ಬೀದಿ ನಾಯಿಗಳಿಂದ ನಮ್ಮನ್ನ ರಕ್ಷಣೆ ಮಾಡಿ ಅಂತ ಬಿಬಿಎಂಪಿಗೆ ಕನಕನಗರದ ನಿವಾಸಿಗಳ ಮನವಿ ಮಾಡಿಕೊಂಡಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more