ಬೆಂಗ್ಳೂರಲ್ಲಿ ನಿಲ್ಲದ ಬೀದಿ ನಾಯಿ ಹಾವಳಿ, ಶಾಲಾ ವಿದ್ಯಾರ್ಥಿ ಮೇಲೆ ದಾಳಿ: ಜನ್ರಿಗಿಲ್ಲ ಸುರಕ್ಷತೆಯ ಗ್ಯಾರಂಟಿ?

ಬೆಂಗ್ಳೂರಲ್ಲಿ ನಿಲ್ಲದ ಬೀದಿ ನಾಯಿ ಹಾವಳಿ, ಶಾಲಾ ವಿದ್ಯಾರ್ಥಿ ಮೇಲೆ ದಾಳಿ: ಜನ್ರಿಗಿಲ್ಲ ಸುರಕ್ಷತೆಯ ಗ್ಯಾರಂಟಿ?

Published : Dec 12, 2024, 06:54 PM IST

ಮಕ್ಕಳನ್ನ ಸ್ಕೂಲಿಗೆ ಕಳುಹಿಸಲು ಕೂಡ ಕಷ್ಟವಾಗ್ತಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ರು ಯಾವುದೇ ಪ್ರಯೋಜನವಾಗಿಲ್ಲ. ಬೀದಿ ನಾಯಿಗಳಿಂದ ನಮ್ಮನ್ನ ರಕ್ಷಣೆ ಮಾಡಿ ಅಂತ ಬಿಬಿಎಂಪಿಗೆ ಕನಕನಗರದ ನಿವಾಸಿಗಳ ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು(ಡಿ.12): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿವೆ ರಕ್ಕಸ ನಾಯಿಗಳು ಮಕ್ಕಳನ್ನೇ ಟಾರ್ಗೆಟ್ ಮಾಡಿವೆ. ಈ ಬಗ್ಗೆ  ಬಿಬಿಎಂಪಿಗೆ ದೂರು‌ ನೀಡಿದ್ರು‌ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಮನೆಯಿಂದ ‌ಮಕ್ಕಳನ್ನ ಹೊರಗಡೆ ಕಳುಹಿಸಲು ಪೋಷಕರು ಭಯ ಪಡುತ್ತಿದ್ದಾರೆ. ಸುಲ್ತಾನ್ ಪಾಳ್ಯ, ಕನಕನಗರದ 6 ನೇ ಎ ಕ್ರಾಸ್ ನಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದೆ. ಬೀದಿ ನಾಯಿಗಳ‌ ಕಾಟಕ್ಕೆ ಜನರು ಹೈರಾಣಾಗಿದ್ದಾರೆ. 

ಡೆಡ್ಲಿ‌ ನಾಯಿಗಳು ಮಕ್ಕಳು ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿವೆ. ಕಳೆದ ಒಂದು ವಾರದ ಅವಧಿಯಲ್ಲಿ ಮೂರು ಜನರನ್ನ ನಾಯಿಗಳು ಕಚ್ಚಿ ಗಾಯಗೊಳಿಸಿವೆ. ಇಮ್ರಾನ್ ಎಂಬುವರ ಮಕ್ಕಳಿಗೆ ನಾಯಿ ಕಚ್ಚಿದೆ.  ಇದು ಎರಡನೇ ಬಾರಿಗೆ ನನ್ನ ಮಗನಿಗೆ ಬೀದಿ ನಾಯಿ ಕಚ್ಚಿದೆ ಎಂದು ಇಮ್ರಾನ್ ತಿಳಿಸಿದ್ದಾರೆ. 

ಆಸ್ಪತ್ರೆಯಲ್ಲಿ ದರ್ಶನ್ ಹೈಡ್ರಾಮಾ! ಮಧ್ಯಂತರ ಜಾಮೀನು ವಿಸ್ತರಣೆಯಾಗುತ್ತಿದ್ದಂತೆ ಕಳ್ಳಾಟ!

ಸಂಜೆ ಹಾಗೂ ‌ಬೆಳಿಗ್ಗೆ ನಾಯಿಗಳ ಕಾಟ ಹೆಚ್ಚಿದೆ. ನಾಯಿ ಕಾಟದ ಬಗ್ಗೆ ‌ಬಿಬಿಎಂಪಿಗೆ ದೂರು ಸಹ ಕೊಡಲಾಗಿದೆ. ಕಳೆದ ಒಂದು ವಾರದ ಅವಧಿಯಲ್ಲಿ ‌ಮೂವರಿಗೆ ನಾಯಿ ಕಚ್ಚಿದೆ. ಆದ್ರೆ ಪಕ್ಕದ ಮನೆಯವರು ಬೀದಿ ನಾಯಿಗಳಿಗೆ ಊಟ ಹಾಕ್ತಾರೆ. ನಾಯಿಗಳಿಂದ ತೊಂದರೆ ಬಗ್ಗೆ ಅವರ ಗಮನಕ್ಕೂ ತರಲಾಗಿದೆ. ಆದ್ರೆ ಇದ್ಯಾವುದನ್ನ ಲೆಕ್ಕಿಸದೆ ಬೀದಿ ನಾಯಿಗಳಿಗೆ ಊಟ ಹಾಕೋದನ್ನ ನಿಲ್ಲಿಸಿಲ್ಲ. ನಾಯಿಗಳಿಂದ ಜನರಿಗೆ ತೊಂದರೆ ಆಗ್ತಿದೆ ಅಂದ್ರೂ ಕೂಡ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಮತ್ತೊಂದು ಕಡೆ ‌ಮಕ್ಕಳನ್ನ ಸ್ಕೂಲಿಗೆ ಕಳುಹಿಸಲು ಕೂಡ ಕಷ್ಟವಾಗ್ತಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ರು ಯಾವುದೇ ಪ್ರಯೋಜನವಾಗಿಲ್ಲ. ಬೀದಿ ನಾಯಿಗಳಿಂದ ನಮ್ಮನ್ನ ರಕ್ಷಣೆ ಮಾಡಿ ಅಂತ ಬಿಬಿಎಂಪಿಗೆ ಕನಕನಗರದ ನಿವಾಸಿಗಳ ಮನವಿ ಮಾಡಿಕೊಂಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more