ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್: ಪಾಲಿಕೆ ವಿರುದ್ಧವೇ ಹೋರಾಟ

ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್: ಪಾಲಿಕೆ ವಿರುದ್ಧವೇ ಹೋರಾಟ

Published : Nov 09, 2023, 11:22 AM ISTUpdated : Nov 09, 2023, 11:32 AM IST

ದೀಪಾವಳಿಗೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಬೀದಿಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ಬಿಬಿಎಂಪಿ ನಿರ್ಧಾರದ ವಿರುದ್ದ ಬೀದಿಬದಿ ವ್ಯಾಪಾರಿಗಳು ತೊಡೆತಟ್ಟಿದ್ದಾರೆ. 
 

ಒಂದು ಕಡೆ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿರುವ ಬಿಬಿಎಂಪಿ. ಇನ್ನೊಂದು ಕಡೆ ಬಿಬಿಎಂಪಿ(BBMP) ಕಮಿಷನರ್ ವಿರುದ್ದ ರೊಚ್ಚಿಗೆದ್ದಿರುವ ಬೀದಿಬದಿ ವ್ಯಾಪಾರಿಗಳು. ಈ ದೃಶ್ಯ ಕಂಡು ಬಂದಿದ್ದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ(Bengaluru). ದೀಪಾವಳಿ ಹಬ್ಬಕ್ಕೆ ಭರ್ಜರಿ ವ್ಯಾಪಾರದ ಖುಷಿಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ದೀಪಾವಳಿ ಹೊತ್ತಲ್ಲೇ ಅನಧಿಕೃತ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆ. ಮಲ್ಲೇಶ್ವರಂ, ಜಯನಗರದಲ್ಲಿ ಈಗಾಗಲೇ ಬೀದಿಬದಿ ವ್ಯಾಪಾರಿಗಳನ್ನು(street vendors) ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದೆ. .ಚಿಕ್ಕಪೇಟೆ, ಗಾಂಧಿನಗರ, ಶಿವಾಜಿನಗರ, ಯಶವಂತಪುರ ಸೇರಿ ಇತರ ಕಡೆಗಳಲ್ಲೂ ಫುಟ್ಪಾತ್ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ನಮಗೆ ಮೊದಲೇ ಹಿಂದಿಲ್ಲ, ಮುಂದಿಲ್ಲ. ಬೀದಿ ಬದಿ ವ್ಯಾಪಾರ ಮಾಡಿ ಜೀವನ ಮಾಡ್ಕೋತ್ತಿದ್ದೀವಿ. ದೀಪಾವಳಿ ಹಬ್ಬದ ವ್ಯಾಪಾರಕ್ಕೆ ಸಾವಿರಾರು ರೂಪಾಯಿ ಬಂಡವಾಳ ಹಾಕಿ ವಸ್ತುಗಳನ್ನ ತಂದಿದ್ದೇವೆ. ಇದಕ್ಕೂ ಅಡ್ಡಿ ಮಾಡಿದ್ರೆ ಹೇಗೆ ಎಂದು ವ್ಯಾಪಾರಿಗಳು ಕಣ್ಣೀರಿಡ್ತಿದ್ದಾರೆ. ಇನ್ನು ತೆರೆವು ಕಾರ್ಯಚರಣೆಗೆ ಇಳಿದ ಬಿಬಿಎಂಪಿ ವಿರುದ್ಧ ಬೀದಿಬದಿ ವ್ಯಾಪಾರಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ಜಯನಗರದಲ್ಲಿ ತೆರವು ಕಾರ್ಯಾಚರಣೆ ಖಂಡಿಸಿ ಇಂದು ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಂಡಿದೆ. ಕೇಂದ್ರದಿಂದ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಇದ್ದರೂ, ನಮ್ಮನ್ನು ಬೀದಿಯಲ್ಲಿ ನಿಲ್ಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಿಯೋನಿಕ್ಸ್‌ ಎಂಡಿ ಮೇಲಿದ್ಯಾ ಸರ್ಕಾರದ ಕೃಪಾ ಕಟಾಕ್ಷ? ರಜೆಯಲ್ಲಿದ್ರೂ ಗುತ್ತಿಗೆದಾರರ ಫೈಲ್‌ ತರಿಸಿಕೊಂಡಾ ಸಂಗಪ್ಪ ?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more