ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್: ಪಾಲಿಕೆ ವಿರುದ್ಧವೇ ಹೋರಾಟ

ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್: ಪಾಲಿಕೆ ವಿರುದ್ಧವೇ ಹೋರಾಟ

Published : Nov 09, 2023, 11:22 AM ISTUpdated : Nov 09, 2023, 11:32 AM IST

ದೀಪಾವಳಿಗೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಬೀದಿಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ಬಿಬಿಎಂಪಿ ನಿರ್ಧಾರದ ವಿರುದ್ದ ಬೀದಿಬದಿ ವ್ಯಾಪಾರಿಗಳು ತೊಡೆತಟ್ಟಿದ್ದಾರೆ. 
 

ಒಂದು ಕಡೆ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿರುವ ಬಿಬಿಎಂಪಿ. ಇನ್ನೊಂದು ಕಡೆ ಬಿಬಿಎಂಪಿ(BBMP) ಕಮಿಷನರ್ ವಿರುದ್ದ ರೊಚ್ಚಿಗೆದ್ದಿರುವ ಬೀದಿಬದಿ ವ್ಯಾಪಾರಿಗಳು. ಈ ದೃಶ್ಯ ಕಂಡು ಬಂದಿದ್ದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ(Bengaluru). ದೀಪಾವಳಿ ಹಬ್ಬಕ್ಕೆ ಭರ್ಜರಿ ವ್ಯಾಪಾರದ ಖುಷಿಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ದೀಪಾವಳಿ ಹೊತ್ತಲ್ಲೇ ಅನಧಿಕೃತ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆ. ಮಲ್ಲೇಶ್ವರಂ, ಜಯನಗರದಲ್ಲಿ ಈಗಾಗಲೇ ಬೀದಿಬದಿ ವ್ಯಾಪಾರಿಗಳನ್ನು(street vendors) ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದೆ. .ಚಿಕ್ಕಪೇಟೆ, ಗಾಂಧಿನಗರ, ಶಿವಾಜಿನಗರ, ಯಶವಂತಪುರ ಸೇರಿ ಇತರ ಕಡೆಗಳಲ್ಲೂ ಫುಟ್ಪಾತ್ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ನಮಗೆ ಮೊದಲೇ ಹಿಂದಿಲ್ಲ, ಮುಂದಿಲ್ಲ. ಬೀದಿ ಬದಿ ವ್ಯಾಪಾರ ಮಾಡಿ ಜೀವನ ಮಾಡ್ಕೋತ್ತಿದ್ದೀವಿ. ದೀಪಾವಳಿ ಹಬ್ಬದ ವ್ಯಾಪಾರಕ್ಕೆ ಸಾವಿರಾರು ರೂಪಾಯಿ ಬಂಡವಾಳ ಹಾಕಿ ವಸ್ತುಗಳನ್ನ ತಂದಿದ್ದೇವೆ. ಇದಕ್ಕೂ ಅಡ್ಡಿ ಮಾಡಿದ್ರೆ ಹೇಗೆ ಎಂದು ವ್ಯಾಪಾರಿಗಳು ಕಣ್ಣೀರಿಡ್ತಿದ್ದಾರೆ. ಇನ್ನು ತೆರೆವು ಕಾರ್ಯಚರಣೆಗೆ ಇಳಿದ ಬಿಬಿಎಂಪಿ ವಿರುದ್ಧ ಬೀದಿಬದಿ ವ್ಯಾಪಾರಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ಜಯನಗರದಲ್ಲಿ ತೆರವು ಕಾರ್ಯಾಚರಣೆ ಖಂಡಿಸಿ ಇಂದು ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಂಡಿದೆ. ಕೇಂದ್ರದಿಂದ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಇದ್ದರೂ, ನಮ್ಮನ್ನು ಬೀದಿಯಲ್ಲಿ ನಿಲ್ಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಿಯೋನಿಕ್ಸ್‌ ಎಂಡಿ ಮೇಲಿದ್ಯಾ ಸರ್ಕಾರದ ಕೃಪಾ ಕಟಾಕ್ಷ? ರಜೆಯಲ್ಲಿದ್ರೂ ಗುತ್ತಿಗೆದಾರರ ಫೈಲ್‌ ತರಿಸಿಕೊಂಡಾ ಸಂಗಪ್ಪ ?

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more