ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್: ಪಾಲಿಕೆ ವಿರುದ್ಧವೇ ಹೋರಾಟ

ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್: ಪಾಲಿಕೆ ವಿರುದ್ಧವೇ ಹೋರಾಟ

Published : Nov 09, 2023, 11:22 AM ISTUpdated : Nov 09, 2023, 11:32 AM IST

ದೀಪಾವಳಿಗೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಬೀದಿಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ಬಿಬಿಎಂಪಿ ನಿರ್ಧಾರದ ವಿರುದ್ದ ಬೀದಿಬದಿ ವ್ಯಾಪಾರಿಗಳು ತೊಡೆತಟ್ಟಿದ್ದಾರೆ. 
 

ಒಂದು ಕಡೆ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿರುವ ಬಿಬಿಎಂಪಿ. ಇನ್ನೊಂದು ಕಡೆ ಬಿಬಿಎಂಪಿ(BBMP) ಕಮಿಷನರ್ ವಿರುದ್ದ ರೊಚ್ಚಿಗೆದ್ದಿರುವ ಬೀದಿಬದಿ ವ್ಯಾಪಾರಿಗಳು. ಈ ದೃಶ್ಯ ಕಂಡು ಬಂದಿದ್ದು ಸಿಲಿಕಾನ್ ಸಿಟಿ ಬೆಂಗಳೂರಲ್ಲಿ(Bengaluru). ದೀಪಾವಳಿ ಹಬ್ಬಕ್ಕೆ ಭರ್ಜರಿ ವ್ಯಾಪಾರದ ಖುಷಿಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ದೀಪಾವಳಿ ಹೊತ್ತಲ್ಲೇ ಅನಧಿಕೃತ ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆ. ಮಲ್ಲೇಶ್ವರಂ, ಜಯನಗರದಲ್ಲಿ ಈಗಾಗಲೇ ಬೀದಿಬದಿ ವ್ಯಾಪಾರಿಗಳನ್ನು(street vendors) ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದೆ. .ಚಿಕ್ಕಪೇಟೆ, ಗಾಂಧಿನಗರ, ಶಿವಾಜಿನಗರ, ಯಶವಂತಪುರ ಸೇರಿ ಇತರ ಕಡೆಗಳಲ್ಲೂ ಫುಟ್ಪಾತ್ ವ್ಯಾಪಾರಿಗಳಿಗೆ ನೋಟಿಸ್ ಕೊಡುತ್ತಿದೆ. ನಮಗೆ ಮೊದಲೇ ಹಿಂದಿಲ್ಲ, ಮುಂದಿಲ್ಲ. ಬೀದಿ ಬದಿ ವ್ಯಾಪಾರ ಮಾಡಿ ಜೀವನ ಮಾಡ್ಕೋತ್ತಿದ್ದೀವಿ. ದೀಪಾವಳಿ ಹಬ್ಬದ ವ್ಯಾಪಾರಕ್ಕೆ ಸಾವಿರಾರು ರೂಪಾಯಿ ಬಂಡವಾಳ ಹಾಕಿ ವಸ್ತುಗಳನ್ನ ತಂದಿದ್ದೇವೆ. ಇದಕ್ಕೂ ಅಡ್ಡಿ ಮಾಡಿದ್ರೆ ಹೇಗೆ ಎಂದು ವ್ಯಾಪಾರಿಗಳು ಕಣ್ಣೀರಿಡ್ತಿದ್ದಾರೆ. ಇನ್ನು ತೆರೆವು ಕಾರ್ಯಚರಣೆಗೆ ಇಳಿದ ಬಿಬಿಎಂಪಿ ವಿರುದ್ಧ ಬೀದಿಬದಿ ವ್ಯಾಪಾರಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ಜಯನಗರದಲ್ಲಿ ತೆರವು ಕಾರ್ಯಾಚರಣೆ ಖಂಡಿಸಿ ಇಂದು ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಂಡಿದೆ. ಕೇಂದ್ರದಿಂದ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಇದ್ದರೂ, ನಮ್ಮನ್ನು ಬೀದಿಯಲ್ಲಿ ನಿಲ್ಲಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಿಯೋನಿಕ್ಸ್‌ ಎಂಡಿ ಮೇಲಿದ್ಯಾ ಸರ್ಕಾರದ ಕೃಪಾ ಕಟಾಕ್ಷ? ರಜೆಯಲ್ಲಿದ್ರೂ ಗುತ್ತಿಗೆದಾರರ ಫೈಲ್‌ ತರಿಸಿಕೊಂಡಾ ಸಂಗಪ್ಪ ?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more